Get Updates
Get notified of breaking news, exclusive insights, and must-see stories!

Bigg Boss: ಬಿಗ್‌ ಬಾಸ್‌ ವೇದಿಕೆಯಲ್ಲೇ ಕನ್ನಡದ ಜನತೆಗೆ ಕ್ಷಮೆಯಾಚಿಸಿದ ಕಿಚ್ಚ ಸುದೀಪ್‌: ಕಾರಣ ಏನು?

Bigg Boss: ಬಿಗ್‌ ಬಾಸ್‌ ಕನ್ನಡ 11 ಸೀಸನ್ ಮನೆಗೆ ವೈಲ್ಡ್‌ ಕಾರ್ಡ್‌ ಮೂಲಕ ಬರುವಾಗ ಶೋಭಾ ಶೆಟ್ಟಿ ಅವರು ಫೂಲ್‌ ಕಾನ್ಫಿಡೆನ್ಸ್‌ ಮಾತುಗಳನ್ನು ಆಡಿದ್ದರು. ಆದರೆ, ಇದೀಗ ಇದಕ್ಕೆ ತದ್ವಿರುದ್ಧವಾಗಿ ಉತ್ತಮ ಅವಕಾಶ ಸಿಕ್ಕರೂ ಟುಸ್‌ ಪಟಾಕಿಯಂತೆ ಕಣ್ಣೀರಿಡುತ್ತಾ ತಾವಾಗಿಯೇ ಹೊರಹೋಗುವ ಮಾತನಾಡಿದ್ದಾರೆ. ಇನ್ನು ಜನರಿಂದ ಮತ್ತೊಂದು ಅವಕಾಶ ಸಿಕ್ಕರೂ ಅದನ್ನು ಬಳಸಿಕೊಳ್ಳದೆ ಹೊರಹೋಗುತ್ತೇನೆ ಎಂದ ಶೋಭಾಶೆಟ್ಟಿ ಮಾತಿಗೆ ಕಿಚ್ಚ ಸುದೀಪ್‌ ಪ್ರತಿಕ್ರಿಯೆ ಹೇಗಿತ್ತು ಎಂದು ಇಲ್ಲಿ ತಿಳಿಯಿರಿ.

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವೇಳೆ ಶೋಭಾ ಶೆಟ್ಟಿ ಅವರು ಭಾರೀ ಸೌಂಡ್‌ ಮಾಡಿದ್ದರು. ಎಲ್ಲರ ಮುಖವಾಡ ಕಳಚುತ್ತೇನೆ ಅಂತಲೂ ಸವಾಲು ಎಸೆದಿದ್ದರು. ಈ ಮೊದಲು ಅವರು ತೆಲುಗು ಬಿಗ್ ಬಾಸ್ ಶೋನಲ್ಲಿ ಅನುಭವಗಳಿಸಿ ಬಂದಿದ್ದವರಾಗಿದ್ದರು. ಆದರೂ ಸಹ ಬಿಗ್ ಬಾಸ್ ಕನ್ನಡ ಸೀಸನ್​ 11 ಶೋನಲ್ಲಿ ಗಟ್ಟಿಯಾಗಿ ನಿಂತುಕೊಳ್ಳಲು ಶೋಭಾ ಶೆಟ್ಟಿಗೆ ಸಾಧ್ಯ ಆಗಿಲ್ಲ. ಭಾನುವಾರ ನಡೆದ ವಾದ ಕಥೆ ಚಿಚ್ಚನ ಜೊತೆ ಸಂಚಿಕೆಯಲ್ಲಿ ಶೋಭಾ ಶೆಟ್ಟಿ ಅವರ ಡ್ರಾಮಾ ಸುದೀಪ್​ ಅವರ ಕೋಪಕ್ಕೆ ಕಾರಣವಾಯಿತು.

Kiccha Sudeep apologizes to audience on Bigg Boss stage Know reason

ಎಲಿಮಿನೇಷನ್‌ ಲಿಸ್ಟ್‌ನಲ್ಲಿ ಶಶಿರ್, ಐಶ್ವರ್ಯ ಹಾಗೂ ಶೋಭಾ ಶೆಟ್ಟಿ ಅವರು ಇದ್ದರು. ಈ ವೇಳೆ ಮೊದಲಿಗೆ ಶೋಭಾ ಶೆಟ್ಟಿ ಅವರು ಸೇಫ್‌ ಅಂತಾ ಸುದೀಪ್‌ ಹೇಳುತ್ತಾರೆ. ಆಗ ಶೋಭಾ ಶೆಟ್ಟಿ ನನ್ನ ಕೈಲಿ ಇಲ್ಲಿರಲು ಆಗುವುತ್ತಿಲ್ಲ, ಹೊರಗಡೆ ಕಳುಹಿಸಿ ಸರ್ ಎಂದು ಅಳಲು ತೋಡಿಕೊಳ್ಳುತ್ತಾರೆ. ಆಗ ಸುದೀಪ್‌ ಅವರಿಗೆ ಧೈರ್ಯ ತುಂಬು ಅಲ್ಲೇ ಉಳಿಸುವ ಕೆಲಸವನ್ನು ಮಾಡುತ್ತಾರೆ. ಆಗ ಶೋಭಾ ನನಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದಕ್ಕೆ ಧನ್ಯವಾದಗಳು, ಇಲ್ಲೇ ಇದ್ದು ಆಡುತ್ತೇನೆ ಸರ್ ಎಂದು ಹೇಳುತ್ತಾರೆ. ಬಳಿಕ ಶಿಶಿರ್, ಐಶ್ವರ್ಯ ಅವರ ಪೈಕಿ ಒಬ್ಬರನ್ನು ಸೇವೆ ಮಾಡುವ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಈ ವೇಳೆ ಅಲ್ಲಿದ್ದ ಬಹುತೇಕ ಸ್ಪರ್ಧಿಗಳು ಐಶ್ವರ್ಯ ಅವರು ಮನೆಯಿಂದ ಹೊರಗಡೆ ಹೋಗಬೇಕು, ಶಿಶಿರ್ ಉಳಿಯಬೇಕು ಎಂದು ಹೇಳುತ್ತಾರೆ. ಈ ವೇಳೆ ಶೋಭಾ ಅವರ ಬಳಿ ಈ ಬಗ್ಗೆ ಒಪಿನಿಯನ್‌ ಕೇಳುವಾಗ ಪ್ಲೇಟ್‌ ಬದಲಾಯಿಸಿ ಮತ್ತೆ ನಾನು ಹೊರಗಡೆ ಹೋಬೇಕು ಸರ್, ದಯವಿಟ್ಟು ಕ್ಷಮಿಸಿ ಎಂದು ಸುದೀಪ್‌ ಬಳಿ ಬೇಡಿಕೊಳ್ಳುತ್ತಾರೆ. ಆಗ ಕೋಪಗೊಂಡ ಸುದೀಪ್‌ ಮೊದಲಿಗೆ ನಾನು ಇಲ್ಲೇ ಇರುತ್ತೇನೆ, ಕಾನ್ಫಿಡೆನ್ಸ್‌ ಬಂದಿದೆ ಆಡುತ್ತೇನೆ ಅಂತಾ ಹೇಳಿದ್ದಿರಲ್ಲ, ಇದೀಗ ದಿಢೀರ್ ನಿರ್ಧಾರ ಏಕೆ ಬದಲಾಯಿತು ಎಂದು ಪ್ರಶ್ನಿಸುತ್ತಾರೆ.

ಆಗ ಶೋಭಾ ಶೆಟ್ಟಿ ಅವರು ನಾನು ಯೋಚನೆ ಮಾಡುತ್ತಿದ್ದೆ ಸರ್, ಇಲ್ಲಿ ಇರುವುದಕ್ಕೆ ಆಗುವುದಿಲ್ಲ ಎಂದು ಹೇಳುತ್ತಾರೆ. ಇದಕ್ಕೆ ಮತ್ತಷ್ಟು ಕೋಪಗೊಂಡ ಸುದೀಪ್‌, ನನ್ನ ಪ್ರೇಕ್ಷಕರಿಗೆ ಹಾಗೂ ನಿಮನೆ ವೋಟ್‌ ಮಾಡಿದವರಿಗೆ ನೀವು ಮೋಸ ಮಾಡುತ್ತಿದ್ದೀರಿ. ನಿಮ್ಮ ಪರವಾಗಿ ನಾನು ಅವರಿಗೆ ಕ್ಷಮೆ ಕೇಳುತ್ತೇನೆ. ನೀವು ಮಾತನಾಡದೇ ಹೋಗಿ, ಗೆಟ್‌ ಔಟ್‌ ಎಂದು ಹೇಳುತ್ತಾರೆ. ಈ ಮೂಲಕ ಐಶ್ವರ್ಯ ಹಾಗೂ ಶಿಶಿರ್‌ ಅವರಿಗೆ ನೀವು ಆಟ ಮುಂದುವರೆಸಿ ಎಂದು ಹೇಳುತ್ತಾರೆ.

ವೋಟ್ ಮಾಡಿದ ಜನಗಳಿಗೆ ಏನು ಮರ್ಯಾದೆ ಕೊಡುತ್ತೀದ್ದಿರಿ ನೀವು? ಅವರೇನು ಮೂರ್ಖರಾ? ಮೊದಲು ನೀವು ಮಾತನಾಡಿದ್ದು ಡ್ರಾಮಾನಾ? ನನ್ನ ಮಾತಿಗೆ ಮತ್ತು ಜನರಿಗೆ ಬೆಲೆ ಕೊಡದೇ ಇರುವವರ ಬಗ್ಗೆ ನನಗೆ ಸಿಂಪತಿಯಲ್ಲೆ ಬೇಡ. ಇದೆಲ್ಲ ದೊಡ್ಡ ಡ್ರಾಮಾ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ರೀತಿ ಕಳೆದ ಯಾವ ಸೀಸನ್‌ನಲ್ಲೂ ಯಾವತ್ತೂ ನಡದಿಲ್ಲ. ಜನರ ವೋಟ್‌ ನೀವು ಬೆಲೆ ಕೊಡಲಿಲ್ಲ. ನನ್ನನ್ನ ಮೂರ್ಖ ಅಂದುಕೊಂಡಿದ್ದೀರಾ?. ನಾನು ನಿಮ್ಮನ್ನು ಮನೆಗೆ ಕಳಿಹಿಸುತ್ತೇನೆ. ವೋಟ್ ಹಾಕಿದವರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಸುದೀಪ್ ಅವರು ಅಂತಿಮ ತೀರ್ಮಾನ ನೀಡಿದರು. ಇನ್ನು ಶೋಭಾ ಮನೆ ಬಿಟ್ಟು ಹೋದರೋ ಇಲ್ಲವೋ ಎಂಬುದು ಇಂದು (ಡಿಸೆಂಬರ್ 02) ಗೊತ್ತಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+