Kichcha Sudeep: ನನ್ನ ಹೆಸರು ನೋಡಿ ಶಾಕ್ ಆಯ್ತು: ಅಚ್ಚರಿ ಹೇಳಿಕೆ ನೀಡಿದ ನಟ ಸುದೀಪ್
ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯದಲ್ಲಿ ಕೆಲ ವರ್ಷಗಳ ಹಿಂದೆ ಸದ್ದು ಮಾಡಿದ್ದ ಮೀಟೂ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಚಿತ್ರರಂಗದ ಹಲವು ನಟಿಯರು ಆಗಿರುವ ಲೈಂಗಿಕ ದೌರ್ಜನ್ಯದ ಕುರಿತು ಇದೀಗ ಧ್ವನಿ ಎತ್ತಿದ್ದು, ಕಮಿಟಿ ರಚನೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ನಡುವೆ ನನ್ನ ಹೆಸರು ನೋಡಿ ಶಾಕ್ ಆಯ್ತು ಎಂದು ಕಿಚ್ಚ ಸುದೀಪ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮೀಟೂ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಕನ್ನಡ ಚಿತ್ರರಂಗದ 50 ಕ್ಕೂ ಹೆಚ್ಚು ಕಲಾವಿದರ ಸಹಿಯಿರುವ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಲಾಗಿತ್ತು. ಈ ಮನವಿ ಪತ್ರದಲ್ಲಿ ಕಿಚ್ಚ ಸುದೀಪ್ ಹೆಸರು ಕೂಡಾ ಸೇರ್ಪಡೆ ಮಾಡಲಾಗಿತ್ತು.

ಕನ್ನಡ ಚಿತ್ರರಂಗದಲ್ಲಿ ಮೀಟೂ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಅಹಿಂಸಾ ಚೇತನ್ ನೇತೃತ್ವದಲ್ಲಿ ಸಲ್ಲಿಸಲಾಗಿರುವ ಮನವಿ ಪತ್ರದಲ್ಲಿ ನನ್ನ ಹೆಸರು ಸೇರಿಸುವ ಮೊದಲು ನನಗೆ ಕೇಳಿಯೇ ಇಲ್ಲ. ನನ್ನ ಹೆಸರು ನೋಡಿ ಶಾಕ್ ಆಯ್ತು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ನನ್ನ ಹೆಸರು ಸೇರ್ಪಡೆಗೊಳಿಸುವ ಮೊದಲು ನನಗೆ ಕೇಳಿಯೇ ಇರಲಿಲ್ಲ, ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ಯಾಲಿಟಿ(ಫೈರ್) ಸಂಘಟನೆಗೂ, ನನಗೂ ಸಂಬಂಧವಿಲ್ಲ. ಆ ಸಂಘಟನೆ ಪತ್ರದಲ್ಲಿ ನನ್ನ ಹೆಸರು ಇರುವುದು ತಿಳಿದು ಶಾಕ್ ಆಯ್ತು ಎಂದು ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.
ನಟಿಯರ ಮೇಲಿನ ಲೈಂಗಿಕ ಶೋಷಣೆ ತಡೆ ಉದ್ದೇಶದಿಂದ ಮಲಯಾಳಂ ಚಿತ್ರರಂಗದ ರೀತಿ ಕನ್ನಡದ ಚಿತ್ರರಂಗದಲ್ಲಿಯೂ ಹೇಮಾ ಸಮಿತಿ ಮಾದರಿ ಸಮಿತಿ ರಚಿಸಬೇಕು ಎಂದು ಫೈರ್ ಸದಸ್ಯರ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ಸುದೀಪ್, ರಮ್ಯಾ ಸೇರಿದಂತೆ ಅನೇಕರ ಹೆಸರುಗಳು ಇದ್ದವು.
ಈ ಬಗ್ಗೆ, ನಟಿ ಭಾವನಾ ರಾಮಣ್ಣ ಪ್ರಶ್ನೆ ಮಾಡಿದ್ದ ಹಿನ್ನಲೆಯಲ್ಲಿ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಫೈರ್ ಸಂಸ್ಥೆಯ ಪತ್ರದಲ್ಲಿ ನನ್ನ ಹೆಸರು ಇರುವುದು ನನಗೆ ಗೊತ್ತಿಲ್ಲ. ಬೇರೆ ಯಾರೋ ಈ ಬಗ್ಗೆ ಹೇಳಿದಾಗ ಶಾಕ್ ಆಯ್ತು. ನನ್ನನ್ನು ಕೇಳದೆ ನನ್ನ ಹೆಸರು ಬಳಸಿಕೊಂಡಿದ್ದಾರೆ ಎಂದು ಸುದೀಪ್ ತಿಳಿಸಿದ್ದಾರೆ.
ಇನ್ನೂ ಮನವಿ ಪತ್ರದಲ್ಲಿ ನನ್ನ ಹೆಸರು ಉಲ್ಲೇಖಿಸುವ ಮೊದಲು ನನ್ನ ಒಂದು ಮಾತು ಕೇಳಬಹುದಿತ್ತು. ಯಾರೋ ಹೇಳಿದ ಮೇಲೆ ನನಗೆ ಗೊತ್ತಾಯಿತು. ಹಾಗಂತ ಅದನ್ನು ನಾನು ಅಗೌರವಿಸಲ್ಲ. ಆದರೆ ಸಮಸ್ಯೆಗಳು ಬಗೆಹರಿಯುವುದು ಮುಖ್ಯ. ಚಿತ್ರರಂಗದಲ್ಲಿ ಅಂತಹ ಘಟನೆಗಳ ವಿರುದ್ಧ ಧ್ವನಿಯೆತ್ತುವುದು ಮುಖ್ಯ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications