ಈಗ ಮೆಣಸಿನಕಾಯಿ ಬೇಡ, ಬೇರೆ ವೇದಿಕೆಯಲ್ಲಿ ಮಾತನಾಡ್ತೀನಿ: ಕನಕಪುರ ಶ್ರೀನಿವಾಸ್ ವಿಚಾರಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ
Kiccha Sudeep press meet: ನಟ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಇತ್ತೀಚೆಗಷ್ಟೇ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಮಹತ್ವದ ಗೆಲುವಿನ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಈ ಹಿಂದೆ ಸುದೀಪ್ ಸೇರಿದಂತೆ ಸ್ಯಾಂಡಲ್ವುಡ್ನ ನಟರು ಹಾಗೂ ನಿರ್ದೇಶಕರ ಬಗ್ಗೆ ವೇದಿಕೆಯಲ್ಲೇ ಅವಾಚ್ಯ ಪದಗಳನ್ನು ಬಳಸಿರುವ ವಿಚಾರದ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದವು. ಇದಕ್ಕೆ ಇಂತಹ ಸಮಯದಲ್ಲಿ ಮೆಣಸಿನಕಾಯಿ ಯಾಕೆ? ಎಂದರು.
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ವಿಷಯವನ್ನು ಬೇರೆಯದೇ ಶೈಲಿಯಲ್ಲಿ ತಿರುಗಿಸಿ ಉತ್ತರಿಸಿದರು. "ಇಂತಹ ಸಿಹಿಯಾದ ಸಮಯದಲ್ಲಿ ಮೆಣಸಿನಕಾಯಿ ಯಾಕೆ ಈಗ? ಅದಕ್ಕೆ ಇನ್ನೊಂದು ವೇದಿಕೆ ಹತ್ತುತ್ತೀನಿ, ಆಗ ಮಾತನಾಡ್ತೀನಿ. ಲಾಡು ತಿನ್ನುವ ಸಮಯದಲ್ಲಿ ಮೆಣಸಿನಕಾಯಿ ಬೇಡ" ಎಂದು ಹೇಳಿದರು.

30 ವರ್ಷದ ಅನುಭವದ ಮಾತು
ತಮ್ಮ ಉತ್ತರವನ್ನು ಇನ್ನಷ್ಟು ಸ್ಪಷ್ಟಪಡಿಸಿದ ಸುದೀಪ್, "ಇದು ನನ್ನ 30 ವರ್ಷದ ಅನುಭವದ ಮಾತು. ನಾವು ಈ ಕಪ್ ಗೆಲ್ಲೋಕೆ 12 ವರ್ಷ ಕಾದಿದ್ದೀವಿ. ಆ ವಿಷಯಕ್ಕೂ ಸ್ವಲ್ಪ ಕಾಯಿರಿ" ಎಂದು ಹೇಳಿದ್ದಾರೆ. ಸದ್ಯಕ್ಕೆ ಸಿಸಿಎಲ್ ಗೆಲುವಿನ ಸಂಭ್ರಮಕ್ಕೆ ಮಾತ್ರ ಆದ್ಯತೆ ನೀಡಿರುವ ಸುದೀಪ್, ವಿವಾದಾತ್ಮಕ ವಿಚಾರಗಳ ಬಗ್ಗೆ ಮಾತನಾಡಲು ಸೂಕ್ತ ಸಮಯ ಮತ್ತು ವೇದಿಕೆ ಬೇರೆ ಇದೆ ಎಂಬ ಸಂದೇಶವನ್ನು ಪರೋಕ್ಷವಾಗಿ ನೀಡಿದ್ದಾರೆ.
ಸುದೀಪ್ ಅವರ ಈ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು "ಸಮಯಕ್ಕೆ ತಕ್ಕ ಉತ್ತರ" ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿಸಿಎಲ್ ಕಪ್ ಗೆಲುವಿನ ಖುಷಿಯಲ್ಲಿ ಸ್ಯಾಂಡಲ್ವುಡ್ ಸಂಭ್ರಮದಲ್ಲಿರುವಾಗ, ಮುಂದಿನ ದಿನಗಳಲ್ಲಿ ಈ ವಿವಾದದ ಬಗ್ಗೆ ಸುದೀಪ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಫಿಲ್ಮ್ ಚೇಂಬರ್ಗೆ ದೂರು
ಈ ಹಿಂದೆಯೂ ಸಿನಿಮಾ ಸಿನಿಮಾ ವೇದಿಕೆಯಲ್ಲಿ ಕನಕಪುರ ಶ್ರೀನಿವಾಸ್ ಅವರು ನಟ ಕಿಚ್ಚ ಸುದೀಪ್ ಬಗ್ಗೆ ಆರೋಪಗಳನ್ನು ಮಾಡಿದ್ದರು. ಏಕವಚನದಲ್ಲಿ ನಿಂದಿಸಿದ್ದರು. ಆಗಲೂ ಶ್ರೀನಿವಾಸ್ ಅವರು ಮಾತನಾಡಿದ್ದ ವಿಡಿಯೋಗಳು ವೈರಲ್ ಆಗಿದ್ದವು. ಇದರ ಬಗ್ಗೆಯೂ ಸುದೀಪ್ ಮಾತನಾಡಲಿಲ್ಲ. ಇತ್ತೀಚೆಗೆ ಕಾಟನ್ಪೇಟೆ ಸಿನಿಮಾದ ವೇದಿಕೆಯಲ್ಲೂ ಶ್ರೀನಿವಾಸ್ ಅವರು ನಟರಾದ ದರ್ಶನ್, ಧ್ರುವ ಸರ್ಜಾ, ಪುನೀತ್ ರಾಜ್ಕುಮಾರ್, ನಿರ್ದೇಶಕರಾದ ಪ್ರೇಮ್, ಎ.ಪಿ.ಅರ್ಜುನ್ ಸೇರಿದಂತೆ ಹಲವರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದರು.
ದರ್ಶನ್ಗೆ ನಾನು ದುಡ್ಡು ಕೊಟ್ಟಿದ್ದೆ. ಪುನೀತ್ ರಾಜ್ಕುಮಾರ್ನ ಹೀರೋ ಆಗಿದ್ದು ನನ್ನಿಂದ, ರಾಜ್ಕುಮಾರ್ ಇಂದ ಅಲ್ಲ. ನನಗೆ ಮೋಸ ಮಾಡಿದ್ದಕ್ಕೆ ದೇವರು ಮೇಲೆ ಕರ್ಕೊಂಡ ಎಂದು ನಾಲಿಗೆ ಹರಿಬಿಟ್ಟಿದ್ದರು. ಪ್ರೇಮ್ ಬಗ್ಗೆಯೂ ಏಕವಚನ ಬಳಸಿದ್ದ ಶ್ರೀನಿವಾಸ್, ಗಂಡಸಾಗಿದ್ರೆ, ಧಮ್ ಇದ್ರೆ ನನ್ ಮುಂದೆ ಬಂದು ನಿಲ್ಲೋಕೆ ಹೇಳಿ ಎಂದು ಸವಾಲ್ ಕೂಡ ಹಾಕಿದ್ದರು. ಈ ಸಂಬಂಧ ಶ್ರೀನಿವಾಸ್ ಅವರ ವಿರುದ್ಧ ಪ್ರೇಮ್ ಫಿಲ್ಮ್ ಚೇಂಬರ್ಗೆ ದೂರು ಸಹ ನೀಡಿದ್ದಾರೆ.
-
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications