KD ಸಿನಿಮಾದಲ್ಲಿ ಧ್ರುವ ಜೊತೆ ಸುದೀಪ್ ನಟಿಸುವುದು ಫಿಕ್ಸ್, ಇಲ್ಲಿದೆ ಶೂಟಿಂಗ್ ಫೋಟೋಸ್
ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ, ಪ್ರೇಮ್ ನಿರ್ದೇಶನ ಬಹುನಿರೀಕ್ಷಿತ 'ಕೆಡಿ' ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈಗಾಗಲೇ ಸಿನಿಮಾ ಪ್ರಮೋಷನ್ ಶುರು ಮಾಡಿರುವ ಕೆಡಿ ಚಿತ್ರತಂಡವು ಸುದೀಪ್ ಅವರ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಪ್ರೇಮ್ ಹಾಗೂ ಸುದೀಪ್ ಕೂಡ ಇದಕ್ಕೆ ಸ್ಪಷ್ಟ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದರು. ಸದ್ಯದಲ್ಲೇ ಸುದೀಪ್ ಅವರ ಭಾಗದ ಚಿತ್ರೀಕರಣ ಶುರುವಾಗಲಿದ್ದು, ಆ ಸಮಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ಹೇಳಲಾಗಿತ್ತು. ಕಿಚ್ಚ ಸುದೀಪ್ ಕೊನೆಗೂ ಕೆಡಿ ಸಿನಿಮಾದಲ್ಲಿ ನಟಿಸುತ್ತಿರುವುದು ಕನ್ಫರ್ಮ್ ಆಗಿದೆ.
ಕೆಡಿ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಧಿಕೃತವಾಗಿದೆ. ಇಲ್ಲಿವರೆಗೆ ಈ ಸುದ್ದಿ ವದಂತಿಯಾಗಿತ್ತು. ಆದರೆ ಕೆಡಿ ನಿರ್ದೇಶಕ ಜೋಗಿ ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ಶೂಟಿಂಗ್ ಸೆಟ್ನ ಫೋಟೋಗಳನ್ನು ಹಂಚಿಕೊಂಡು ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಕಿಚ್ಚ ಸುದೀಪ್, ಧ್ರುವ ಸರ್ಜಾ ಹಾಗೂ ಪ್ರೇಮ್ ಇರುವ ಫೋಟೋ ವೈರಲ್ ಆಗಿವೆ.

ಹೈದರಾಬಾದ್ನಲ್ಲಿ ನಡೆಯುತ್ತಿರುವ "ಕೆಡಿ" ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕಿಚ್ಚ ಸುದೀಪ್ ಜೋಗಿ ಪ್ರೇಮ್, ಧ್ರುವ ಸರ್ಜಾ ಹಾಗೂ ನಿರ್ಮಾಪಕ ಸುಪ್ರೀತ್ ಅವರೊಂದಿಗೆ ಇರುವ ಫೋಟೋಗಳನ್ನು ನಿರ್ದೇಶಕ ಪ್ರೇಮ್ ಹಂಚಿಕೊಂಡಿದ್ದಾರೆ. "ಇನ್ನು ಗಾಸಿಪ್ಗಳಿಲ್ಲ... ನೀವು ಅಧಿಕೃತವಾಗಿ ನಮ್ಮವರು, ಲವ್ ಯು ಮೈ ಡಾರ್ಲಿಂಗ್ ಕಿಚ್ಚ ಸುದೀಪ್ ಎಂದು ಪ್ರೇಮ್ ಬರೆದುಕೊಂಡಿದ್ದಾರೆ. ಈ ಮೂಲಕ ಸುದೀಪ್ ಅವರ ಪಾತ್ರವನ್ನು ಪ್ರೇಮ್ ದೃಢಪಡಿಸಿದ್ದಾರೆ.
ಚಿತ್ರದಲ್ಲಿ ಧ್ರುವ ಸರ್ಜಾ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ರವಿಚಂದ್ರನ್ ಮುಂತಾದ ಘಟಾನುಘಟಿ ನಟರು ತೆರೆ ಹಂಚಿಕೊಂಡಿದ್ದಾರೆ. ಈಗ ಈ ಪ್ಯಾನ್-ಇಂಡಿಯಾ ಸಿನಿಮಾಗೆ ಕಿಚ್ಚ ಸುದೀಪ್ ಕೂಡ ಸೇರ್ಪಡೆ ಆಗಿದ್ದು, ಚಿತ್ರದ ಮೇಲೆ ಕಿಚ್ಚ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ. ಒಂದೇ ಚಿತ್ರದಲ್ಲಿ ಧ್ರುವ ಹಾಗು ಸುದೀಪ್ ನಟಿಸುತ್ತಿರುವುದು ಸ್ಯಾಂಡಲ್ವುಡ್ನಲ್ಲಿ ಸಂಚಲನ ಸೃಷ್ಟಿಸಲಿದೆ ಎಂದು ಹೇಳಲಾಗುತ್ತಿದೆ.

ಹೈದರಾಬಾದ್ನಲ್ಲಿ ಶೂಟಿಂಗ್
ಸುದೀಪ್ ಕಥೆಯಲ್ಲಿ ಅತಿಥಿ ಪಾತ್ರದಲ್ಲಿದ್ದಾರೆ ಎಂಬ ಪ್ರಚಾರ ಈಗ ಅಧಿಕೃತವಾಗಿ ದೃಢವಾಗಿದೆ. ಚಿತ್ರೀಕರಣ ಹೈದರಾಬಾದ್ನಲ್ಲಿ ನಡೆಯುತ್ತಿದ್ದು, ಚಿತ್ರತಂಡ ಈ ಕುರಿತು ಇನ್ನಷ್ಟು ವಿವರ ಶೀಘ್ರವೇ ಹಂಚಿಕೊಳ್ಳಲಿದೆ. ಸಿನಿಮಾ ತಂಡ ಸಾಮಾಜಿಕ ಜಾಲತಾಣಗಳಲ್ಲಿ ಶೂಟಿಂಗ್ ಸ್ಪಾಟ್ನ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಸುದೀಪ್ ಅವರ ಪಾತ್ರ ಏನು? ವಿಲನ್ ಪಾತ್ರದಲ್ಲಿ ನಟಿಸುತ್ತಾರಾ? ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ತಾರಾ ಅನ್ನೋ ಅಪ್ಡೇಟ್ ಸದ್ಯದಲ್ಲೇ ತಿಳಿಯಲಿದೆ.
ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳು ಸುದೀಪ್ ಹಾಗೂ ಧ್ರುವ ಸರ್ಜಾ ವಿಭಿನ್ನ ಕಾಂಬೋ ನೋಡಲು ಕಾಯುತ್ತಿದ್ದಾರೆ. ಇದು ಬಿಗ್-ಬಜೆಟ್ ಸಿನಿಮಾವಾಗಿದ್ದು, ಹಲವು ಖ್ಯಾತ ನಟರು ಈ ಸಿನಿಮಾದಲ್ಲಿದ್ದಾರೆ. ಆಕ್ಷನ್-ಥ್ರಿಲ್ಲರ್ ಜಾನರ್ ಇರುವ ಈ ಚಿತ್ರ ಪ್ಯಾನ್-ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಇದೇ ವರ್ಷ ಈ ಸಿನಿಮಾ ನೋಡಲು ಅಭಿಮಾನಿಗಳು ಕಾದಿದ್ದಾರೆ. ಐದು ಭಾಷೆಗಳಲ್ಲಿ ಸಿನಿಮಾ ಬರುತ್ತಿದ್ದು, ಟೀಸರ್ ಬಿಡುಗಡೆಯನ್ನು ಚಿತ್ರತಂಡ ಭರ್ಜರಿಯಾಗಿ ಮಾಡಿದೆ.
-
Rashmika Mandanna: ಪುಟ್ಟ ಅಭಿಮಾನಿಗೆ ಮನೆಯಲ್ಲೇ ಭರ್ಜರಿ ಔತಣ: ಕೊಟ್ಟ ಮಾತಿನಂತೆ ನಡೆದುಕೊಂಡ ರಶ್ಮಿಕಾ-ವಿಜಯ್ -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications