Kichcha Sudeep: ಬರಿಗಾಲಿನಲ್ಲಿ ಬಿಗ್ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಬಂದಿದ್ದೇಕೆ?
ಬಿಗ್ ಬಾಸ್ ಕನ್ನಡ ಸೀಸನ್ 11' ಶೋ ಕಾರ್ಯಕ್ರಮ ಆರಂಭವಾಗಿ ಒಂದು ವಾರವಾಗಿದೆ. ಬಿಗ್ಬಾಸ್ ಸೀಸನ್ 11 ಶುರುವಾಗಿ ಮೊದಲ ವಾರದ ಕಿಚ್ಚನ ಪಂಚಾಯ್ತಿನೂ ನಡೆದಿದೆ. ಕಿಚ್ಚನ ಪಂಚಾಯ್ತಿ ಅಂದ್ರೆ ಎಲ್ಲಾ ಅಭಿಮಾನಿಗಳು ಸಹ ಕಾತುರದಿಂದ ನೋಡುತ್ತಾರೆ.
ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ಉಡುಗೆ ಮೇಲೆ ಎಲ್ಲಾರ ಕಣ್ಣೀರುತ್ತದೆ. ಸುದೀಪ್ ಯಾವ ಡ್ರೆಸ್ ಹಾಕಿರ್ತಾರೆ? ಯಾವ ಗೆಟಪ್ನಲ್ಲಿ ಬರ್ತಾರೆ? ಯಾರನ್ನು ರುಬ್ತಾರೆ? ಯಾರನ್ನ ದಬ್ತಾರೆ ಅನ್ನೋ ಹತ್ತಾರು ಪ್ರಶ್ನೆಗಳು ಕಾಡ್ತಿವೆ. ಆದರೆ, ಈ ಸಲದ ಬಿಗ್ಬಾಸ್ನ ಮೊದಲ ಕಿಚ್ಚನ ಪಂಚಾಯ್ತಿ ಫುಲ್ ಡಿಫರೆಂಟಾಗಿತ್ತು. ಕಿಚ್ಚ ಸುದೀಪ್ ಅವರ ಎಂಟ್ರಿಯಿಂದ ಸಾಕಷ್ಟು ಜನ ಅಭಿಮಾನಿಗಳ ತಲೆಯಲ್ಲಿ ಹುಳು ಬಿಟ್ಟಂತಾಗಿದೆ. ಅಲ್ಲದೇ ಯಾಕೆ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಏನಿದು ಅಚ್ಚರಿ ಅಂದ್ರೆ. ವಾರದ ಕಥೆ ಕಿಚ್ಚನ ಜೊತೆ ಶೋ ಗೆ ಕಿಚ್ಚ ಸುದೀಪ್ ಅವರು ಬರಿಗಾಲಿನಲ್ಲಿ ಕಾಣಿಸಿಕೊಂಡಿದ್ದು, ಎಲ್ಲಾರಿಗೂ ಅಚ್ಚರಿಯನ್ನ ಉಂಟು ಮಾಡಿದೆ.

ಸ್ಟೈಲ್ಗೆ ಹೆಚ್ಚು ಪ್ರಾಮುಖ್ಯತೆ ಕೊಡೋ ಸುದೀಪ್ ಬಿಗ್ಬಾಸ್ ಸೀಸನ್ 11 ಶುರುವಾಗಿ ಮೊದಲ ವಾರದ ಕಿಚ್ಚನ ಪಂಚಾಯ್ತಿಗೆ ಕಾಶಿ ಫ್ರಮ್ ವಿಲೇಜ್ ಸಿನಿಮಾ ಪಾತ್ರಧಾರಿಯಂತೆ ಹೋಮ್ಲಿಯಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಬರಿಗಾಲಿನಲ್ಲಿ ಕಿಚ್ಚ ಸುದೀಪ್ ಶನಿವಾರ ಹಾಗೂ ಭಾನುವಾರದ ಶೋಗೆ ಎಂಟ್ರಿಕೊಟ್ಟಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕಿಚ್ಚ ಸುದೀಪ್ ಕಟ್ಟು ನಿಟ್ಟಿನ ನವರಾತ್ರಿ ವ್ರತ ಆಚರಣೆಯಾಗಿದೆ.
ನವರಾತ್ರಿ ಸಂದರ್ಭದಲ್ಲಿ ನವದುರ್ಗೆಯರನ್ನ ಪೂಜಿಸಲಾಗುತ್ತದೆ. ನವ ಪುಷ್ಪಗಳಿಂದ, ನವ ಬಣ್ಣಗಳಿಂದ ಆರಾಧಿಸಲಾಗುತ್ತದೆ. ನವರಾತ್ರಿಯ ಮೂರನೇ ದಿನ ಅಂದ್ರೆ ಶನಿವಾರ ತಾಯಿ ದುರ್ಗೆಯನ್ನ ಚಂದ್ರಘಂಟಾ ಹೆಸರಿನಲ್ಲಿ ಪೂಜಿಸಲಾಗುತ್ತದೆ. ತದಿಗೆಯ ದಿನ ಬರುವ ಈ ತಾಯಿಗೆ ಬೂದು ಬಣ್ಣ ಅಂದ್ರೆ ಅಚ್ಚು ಮೆಚ್ಚು. ಅದೇ ರೀತಿ ಕಿಚ್ಚ ಸುದೀಪ್ ಸಹ ಬೂದು ಬಣ್ಣದ ಸಾಂಪ್ರದಾಯಿಕ ಡ್ರೆಸ್ನಲ್ಲಿ ಕಾಣಿಸಿಕೊಂಡ್ರು. ಇದಕ್ಕೆ ಪೂರಕ ಎನ್ನುವಂತೆ ಬರಿಗಾಲಿನಲ್ಲಿ ಬಿಗ್ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಿದ್ದಾರೆ.
ಬರಿಗಾಲಿನಲ್ಲಿ ಬಿಗ್ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಿರುವ ನಟ ಸುದೀಪ್ ಅವರು ನವರಾತ್ರಿಯ ಸಂದರ್ಭದಲ್ಲಿ ಮಹತ್ವದ ಸಂದೇಶ ರವಾನಿಸಿದ್ದಾರೆ. ಅದೇನಂದ್ರೆ ಸುದೀಪ್ ಕಠಿಣ ವ್ರತಾಚರಣೆಯಲ್ಲಿದ್ದಾರೆ ಎಂಬ ಮಹತ್ವದ ಖಚಿತ ಮಾಹಿತಿ ಲಭ್ಯವಾಗಿದೆ.
ಕನ್ನಡ ಬಿಗ್ ಬಾಸ್ 10 ಸೀಸನ್ ಗಳು ನಡೆದರು ಸಹ ಇತಿಹಾಸದಲ್ಲೇ ಇದೇ ಮೊದಲು ಸುದೀಪ್ ಬರಿಗಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. ವಾರದ ಕತೆ ಹಾಗೂ ಸೂಪರ್ ಸಂಡೇ ಎರಡೂ ಶೋವನ್ನು ಕಿಚ್ಚ ಸುದೀಪ್ ಅವರು ಬರಿಗಾಲಲ್ಲಿ ನಡೆಸಿಕೊಟ್ಟಿದ್ದಾರೆ. ಶನಿವಾರ ಬೂದು ಬಣ್ಣ ಮತ್ತು ಭಾನುವಾರ ಕೇಸರಿ ಬಣ್ಣದ ಇಂಡೋ ವೆಸ್ಟ್ರರ್ನ್ ಶೈಲಿಯ ಕುರ್ತಾ ಹಾಕಿರುವ ಕಿಚ್ಚ ಸುದೀಪ್ ಸೂಪರ್ ಸಂಡೇಗೆ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ.
ಕನ್ನಡದ ಪ್ರಖ್ಯಾತ ನಟ ಸುದೀಪ ವ್ರತ ಆಚರಿಸುತ್ತಿದ್ದಾರೆ ಅನ್ನೋದು ಖಚಿತವಾಗಿದೆ. ಭಾನುವಾರ ಕಿಚ್ಚ ಸುದೀಪ್ ಅವರು ಕೇಸರಿ ಬಣ್ಣ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನವರಾತ್ರಿಯ 4ನೇ ದಿನ ಕೂಷ್ಮಾಂಡ ದೇವಿಯ ರೂಪದಲ್ಲಿ ತಾಯಿ ದುರ್ಗೆಯನ್ನು ಆರಾಧಿಸಲಾಗುತ್ತದೆ. ಕೇಸರಿ ಬಣ್ಣದ ಡ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರು ಕಠಿಣ ವ್ರತವನ್ನು ಆಚರಿಸುತ್ತಿದ್ದಾರೆ ಅನ್ನೋದಕ್ಕೆ ಖಚಿತವಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications