Kili Paul: ಈ ಕೈ ಕರ್ನಾಟಕದ ಆಸ್ತಿ..! ವಿಷ್ಣು ದಾದಾ, ಯಶ್ ಸಿನಿಮಾ ಡೈಲಾಗ್ ಹೊಡೆದ ತಾಂಜೇನಿಯ ಯೂಟ್ಯೂಬರ್
ತಾಂಜೇನಿಯ ಯೂಟ್ಯೂಬರ್, ಕಂಟೆಂಟ್ ಕ್ರಿಯೇಟರ್ ಕಿಲಿ ಪೌಲ್ ಭಾರತದ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿದ್ದಾರೆ. ಭಾರತದ ಹಲವು ಭಾಷೆಗಳ ಚಿತ್ರಗಳ ಡೈಲಾಗ್ ಮತ್ತು ಹಾಡುಗಳ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಹಲವು ಕನ್ನಡ ಸಿನಿಮಾ ಹಾಡುಗಳನ್ನು ರೀಲ್ಸ್ ಮಾಡುವ ಮೂಲಕ ಕಿಲಿ ಪೌಲ್ ಗಮನ ಸೆಳೆದಿದ್ದರು. ರಾಜಕುಮಾರ ಸಿನಿಮಾದ ಗೊಂಬೆ ಹೇಳುತೈತೆ ಹಾಡಿಗೆ ರೀಲ್ಸ್ ಮಾಡಿ ಪುನೀತ್ ಅವರನ್ನು ಸ್ಮರಿಸಿದ್ದರು.

ಈಗ ಡಾ. ವಿಷ್ಣುವರ್ಧನ್ ಅವರ ಜನಪ್ರಿಯ ಡೈಲಾಗ್ನ ವಿಡಿಯೋ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ವಿಷ್ಣುವರ್ಧನ್ ಅಭಿನಯದ ಕದಂಬ ಸಿನಿಮಾದ ಜನಪ್ರಿಯ ಸಂಭಾಷಣೆ, ಈ ಕೈ ಕರ್ನಾಟಕದ ಆಸ್ತಿ ಎನ್ನುವ ಡೈಲಾಗ್ಗೆ ಕಿಲಿ ಪೌಲ್ ವಿಡಿಯೋ ಮಾಡಿದ್ದಾರೆ.
ವಿಷ್ಣು ದಾದಾ ಡೈಲಾಗ್ಗೆ ಮೆಚ್ಚುಗೆ
ಈ ವಿಡಿಯೋಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಕನ್ನಡಿಗರು ಕಾಮೆಂಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗೆ ಇನ್ಸ್ಟಾಗ್ರಾಂನಲ್ಲಿ 2.74 ಲಕ್ಷ ಮಂದಿ ಲೈಕ್ ಮಾಡಿದ್ದು, 21 ಲಕ್ಷ ಮಂದಿ ವೀಕ್ಷಿಸಿದ್ದಾರೆ.
ಇದೊಂದೆ ಅಲ್ಲದೆ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ವಯಲೆನ್ಸ್ ಡೈಲಾಗ್ಗೆ ಕೂಡ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್ಗಾಗಿ ಸೂಟಿನಲ್ಲಿ ಮಿಂಚಿರುವ ಕಿಲಿ ಪೌಲ್ ಭರ್ಜರಿಯಾಗಿ ಡೈಲಾಗ್ ಸಿಂಕ್ ಮಾಡಿದ್ದಾರೆ. ಈ ವಿಡಿಯೋವನ್ನು 13 ಲಕ್ಷ ಮಂದಿ ವೀಕ್ಷಣೆ ಮಾಡಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.
ಇದರ ಜೊತೆ ಡಿ. 29ರಂದು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಟೇರ ಸಿನಿಮಾದ ಪಸಂದಾಗವ್ನೆ ಹಾಡಿಗೂ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದರು. ತಾಂಜೇನಿಯಾದ ಕಿಲಿ ಪೌಲ್ ತಮ್ಮ ಸಾಂಪ್ರದಾಯಿಕ ಉಡುಗೆ ಮೂಲಕ ಪ್ರಸಿದ್ಧಿ ಹೊಂದಿದವರು, ಇನ್ಸ್ಟಾಗ್ರಾಂನಲ್ಲಿ 59 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.
ಯಾರು ಈ ಕಿಲಿ ಪೌಲ್
ತಾಂಜೇನಿಯಾದ ಕಂಟೆಂಟ್ ರಚನೆಕಾರರಾದ ಕಿಲಿ ಪೌಲ್ ಮತ್ತು ಅವರ ಸಹೋದರಿ ನೀಮಾ ಪೌಲ್ ಅವರು ವಿವಿಧ ಭಾರತೀಯ ಹಾಡುಗಳಿಗೆ ಲಿಪ್ ಸಿಂಕ್ ಮಾಡುವ ಮತ್ತು ನೃತ್ಯ ಮಾಡುವ ಮೂಲಕ ಭಾರತದಲ್ಲಿ ಹೆಚ್ಚಿನ ಖ್ಯಾತಿ ಗಳಿಸಿದ್ದಾರೆ. ಅಣ್ಣ-ತಂಗಿ ಜೋಡಿ ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ ವಿವಿಧ ಭಾರತೀಯ ಹಾಡುಗಳಿಗೆ ನಟಿಸುವ ಮೂಲಕ ಹೆಸರುವಾಸಿಯಾಗಿದ್ದಾರೆ.
-
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications