ಕರ್ಣ ಧಾರಾವಾಹಿ ಮುಂದೂಡಿದ್ದೇಕೆ? ಕ್ಷಮೆ ಕೇಳಿ ಕಾರಣ ತಿಳಿಸಿದ ಕಿರಣ್ ರಾಜ್
ಜೀ ಕನ್ನಡ ವಾಹಿನಿಯಲ್ಲಿ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿದ್ದ ಕರ್ಣ ಧಾರಾವಾಹಿ ನಿಗದಿತ ಸಮಯಕ್ಕೆ ಲಾಂಚ್ ಆಗಲೇ ಇಲ್ಲ. ನಟ ಕಿರಣ್ ರಾಜ್, ಭವ್ಯಾ ಗೌಡ ಸೇರಿ ದೊಡ್ಡ ತಾರಾಗಣವಿದ್ದ ಈ ಧಾರಾವಾಹಿ ಜೂನ್ 16ರಂದು ಸಂಜೆ 8 ಗಂಟೆಗೆ ಲಾಂಚ್ ಆಗುವುದಾಗಿ ವಾಹಿನಿ ಘೋಷಿಸಿತ್ತು. ಅಲ್ಲದೆ ಕರ್ಣ ಸೀರಿಯಲ್ನ ಪ್ರೋಮೋಗಳನ್ನು ಕೂಡ ವಾಹಿನಿ ಹಂಚಿಕೊಂಡಿತ್ತು. ಹಲವು ವರ್ಷಗಳ ಬಳಿಕ ಕಿರಣ್ ರಾಜ್ ಅವರನ್ನು ಮತ್ತೆ ಕಿರುತೆರೆಯಲ್ಲಿ ನೋಡಲು ಪ್ರೇಕ್ಷಕರು ಕಾದಿದ್ದರು. ಆದರೆ ಅಂದುಕೊಂಡ ಸಮಯಕ್ಕೆ ಕರ್ಣ ಧಾರಾವಾಹಿ ಶುರುವಾಗಲಿಲ್ಲ. ಇದರಿಂದ ಪ್ರೇಕ್ಷಕರು ಕೂಡ ಗೊಂದಲದಲ್ಲಿದ್ದಾರೆ. ಈ ಬಗ್ಗೆ ಖುದ್ದು ಕಿರಣ್ ರಾಜ್ ಪ್ರತಿಕ್ರಿಯಿಸಿದ್ದು, ಧಾರಾವಾಹಿ ಶುರುವಾಗದಿರುವುದಕ್ಕೆ ಕ್ಷಮೆ ಕೇಳಿ, ಕಾರಣವೂ ತಿಳಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ, ನಾನು ಕರ್ಣನಾಗಿ ನಿಮ್ಮೆಲ್ಲರ ಮನೆಗೆ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಇದಕ್ಕೆ ಮೊದಲಿಗೆ ನಾನು ಎಲ್ಲ ಪ್ರೇಕ್ಷಕರ ಕ್ಷಮೆ ಕೇಳುತ್ತೇನೆ. ನೀವು ಕೊಟ್ಟ ಸ್ಪಂದನೆ, ಪ್ರೀತಿಗೆ ನಾವು ಕೂಡ ಈ ಸೀರಿಯಲ್ ಅನ್ನ ನಿಮ್ಮ ಮುಂದೆ ಇಡಬೇಕು ಎಂದು ಉತ್ಸಾಹದಿಂದ ಕಾದಿದ್ವಿ. ಪ್ರತಿ ದಿನವೂ ನಮ್ಮ ಸೀರಿಯಲ್ ಯಾವಾಗ ಲಾಂಚ್ ಆಗುತ್ತೆ? ಯಾವಾಗ ಎಂಟು ಗಂಟೆಯಾಗುತ್ತೆ. ಯಾವಾಗ ನೀವು ಮೊದಲ ಎಪಿಸೋಡ್ ನೋಡ್ತೀರಿ? ನಿಮ್ಮ ಪ್ರತಿಕ್ರಿಯೆ ಹೇಗಿರುತ್ತೆ? ಎನ್ನುವ ಕುತೂಹಲ ನಮ್ಮಲ್ಲೂ ಇತ್ತು ಎಂದು ಕಿರಣ್ ರಾಜ್ ಹೇಳಿದ್ದಾರೆ.

ನಾನು ಕೂಡ ಈ ದಿನಕ್ಕೆ ಕಾಯುತ್ತಿದ್ದೆ. ಸುಮಾರು ಎರಡು ವರ್ಷಗಳ ನಂತರ ನಿಮ್ಮ ಮುಂದೆ, ನಿಮ್ಮ ಮನೆಗೆ ಕರ್ಣನಾಗಿ ಬರಬೇಕು ಅಂದುಕೊಂಡಿದ್ದೆ. ಆದರೆ ನನಗೆ ತಿಳಿದಿರುವ ಮಾಹಿತಿ ಪ್ರಕಾರ ಏನೋ ಲೀಗಲ್ ಸಮಸ್ಯೆ ಆಗಿದೆ. ಇದನ್ನು ಪರಿಹರಿಸಿಕೊಂಡು ಆದಷ್ಟು ಬೇಗನೆ ನಿಮ್ಮ ಮುಂದೆ ಬರ್ತೀವಿ, ಸ್ವಲ್ಪ ತಡ ಆಗಬಹುದು, ಆದರೆ ಬಂದೇ ಬರ್ತೀವಿ. ನಮಗೆ ಇನ್ನು ಸ್ವಲ್ಪ ಸಮಯ ಕೊಡಿ. ಇದು ಈ ಸಮಯದಲ್ಲಿ ಆಗಬಾರದಿತ್ತು. ಆದರೆ ಯಾವುದೂ ನಮ್ಮ ಕೈಯಲ್ಲಿ ಇಲ್ಲ ಎಂದಿದ್ದಾರೆ.
ನಿರ್ಮಾಪಕರು ಕೋಟಿ ಕೋಟಿ ಖರ್ಚು ಮಾಡಿ ಒಂದು ಒಳ್ಳೆಯ ಪ್ರಾಜೆಕ್ಟ್ ಅನ್ನ ನಿಮ್ಮ ಮುಂದೆ ಇಡಬೇಕು ಎನ್ನುವ ದೃಢಸಂಕಲ್ಪಕ್ಕೆ, ಹಲವು ಕಲಾವಿದರ ಪರಿಶ್ರಮಕ್ಕೆ ಹಾಗೂ ಕರ್ಣನಿಗೆ ನ್ಯಾಯ ಸಿಕ್ಕೇ ಸಿಗುತ್ತೆ. ಈ ಸಮಯದಲ್ಲಿ ನಿಮ್ಮ ಬೆಂಬಲ ನಮಗೆ ಬೇಕಿದೆ ಎಂದು ಕಿರಣ್ ರಾಜ್ ಮನವಿ ಮಾಡಿಕೊಂಡಿದ್ದಾರೆ.
ಭವ್ಯಾ ಗೌಡ ಖಾತೆಯಲ್ಲಿ ಎಲ್ಲ ಪ್ರೋಮೋ ಡಿಲೀಟ್
ವರದಿಗಳ ಪ್ರಕಾರ ಭವ್ಯಾ ಗೌಡ ಅವರ ಕಾರಣಕ್ಕೆ ಧಾರಾವಾಹಿಯ ಪ್ರಸಾರ ಮುಂದೂಡಿದೆ ಎಂದು ಹೇಳಲಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿದ್ದ ಭವ್ಯಾ ಗೌಡ ಅವರ ಅಕೌಂಟ್ನಿಂದಲೂ ಧಾರಾವಾಹಿಗೆ ಸಂಬಂಧಿಸಿದ ಎಲ್ಲ ಪ್ರೋಮೋಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ಅವರು Trust The Process ಎಂದು ಪೋಸ್ಟ್ ಹಾಕಿ ಅಚ್ಚರಿ ಮೂಡಿಸಿದ್ದಾರೆ. ಇದೇ ಕಾರಣಕ್ಕೆ ಧಾರಾವಾಹಿ ನಿಂತಿರುವುದಾಗಿ ಹೇಳಲಾಗುತ್ತಿದೆ.
ಈ ಬಗ್ಗೆ ಜೀ ಕನ್ನಡ ವಾಹಿನಿ ಕೂಡ ಮಾಹಿತಿ ಹಂಚಿಕೊಂಡಿದೆ. ಕೊಟ್ಟ ಮಾತಿಗೆ ತಪ್ಪದ ಜೀವ ಅಂದ್ರೆ ಅದು ಕರ್ಣ, ನೀವೆಲ್ಲ ಕಾಯ್ತಾ ಇರ್ತೀರ ಅಂತ ಅವನಿಗೆ ಗೊತ್ತು. ಅದೇ ಪ್ರೀತಿ-ವಿಶ್ವಾಸದಿಂದ 'ಕರ್ಣ'ನನ್ನ ಬರಮಾಡಿಕೊಳ್ತೀರಿ ಅಲ್ವಾ? 'ಕರ್ಣ' ಬಂದೇ ಬರ್ತಾನೆ, ಶೀಘ್ರದಲ್ಲಿ ಎಂದು ಹೇಳಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications