Rashmika Mandanna: ನಟಿ ರಶ್ಮಿಕಾಗೆ ಭದ್ರತೆ ನೀಡುವಂತೆ ಹೋಂ ಮಿನಿಸ್ಟರ್ಗಳಿಗೆ ಪತ್ರ: ಬೆದರಿಕೆ, ಕಿರುಕುಳ ಯಾರಿಂದ?
ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದೆಡೆ ರಶ್ಮಿಕಾ ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೂ ಪತ್ರ ಬರೆದಿದೆ. ಇದಕ್ಕೆ ಕಾರಣವೇನು ಎಂಬುದನ್ನು ಮುಂದೆ ತಿಳಿಯಿರಿ..
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ರಶ್ಮಿಕ ಮಂದಣ್ಣ ಅವರಿಗೆ ಸೆಕ್ಯುರಿಟಿ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಅವರು ಪತ್ರ ಬರೆದಿದ್ದಾರೆ. ಇಷ್ಟಕ್ಕೂ ನಟಿ ರಶ್ಮಿಕಾಗೆ ರಕ್ಷಣೆ ಕೇಳಲು ಕಾರಣವೇನು ಎಂಬುದನ್ನು ಅವರೇ ತಿಳಿಸಿದ್ದಾರೆ. ಅದೇನು ಗೊತ್ತಾ?

"ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರು ಇಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಟಿ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ಇದು ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಂಡ್ಯ ಜಿಲ್ಲೆಯ ಶಾಸಕ ಗಣಿಗ ರವಿ ಅವರು ರಶ್ಮಿಕಾ ಅವರ ಬಗ್ಗೆ ಆರೋಪಗಳನ್ನು ಮಾಡಿದ್ದರು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದಿದ್ದು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಕರೆದಿದ್ದಕ್ಕೆ ನಾನು ಹೈದರಾಬಾದ್ನಲ್ಲಿರೋದು. ಕರ್ನಾಟಕ ಎಲ್ಲಿದೆ ನಂಗೆ ಗೊತ್ತಿಲ್ಲ, ನನಗೆ ಅಲ್ಲಿಗೆ ಬರಲು ಟೈಮ್ ಇಲ್ಲ ಎಂದಿದ್ದರು. ಇವರಿಗೆಲ್ಲ ನಾವು ಬುದ್ಧಿ ಕಲಿಸಬೇಕಲ್ವಾ? ಎಂದು ಶಾಸಕ ಗಣಿಗರ ರವಿ ಗರಂ ಆಗಿದ್ದರು.
ಈ ಬಗ್ಗೆಯೂ ಉಲ್ಲೇಖಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್, ಕಾವೇರಿ ನದಿಯನ್ನು ನೆಚ್ಚಿಕೊಂಡಿರುವ ಮಂಡ್ಯ ಶಾಸಕರು ಅದೇ ಕಾವೇರಿ ಮಾತೆಯ ಪುತ್ರಿಯಾಗಿರುವ ರಶ್ಮಿಕಾ ಮಂದಣ್ಣ ಅವರನ್ನು ಅಗೌರವದಿಂದ ಕಂಡಿರುವುದು ಬೇಸರದ ವಿಚಾರ. ಶಾಸಕರು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಜನರನ್ನು ರಕ್ಷಿಸುವ ಪ್ರಮಾಣ ವಚನ ಸ್ವೀಕರಿಸಿದವರು. ಈ ರೀತಿ ಅರ್ಥಹೀನ ಟೀಕಾಪ್ರಹಾರ ಖಂಡನೀಯ ಎಂದು ಆಕ್ರೋಶ ಹೊರಹಾಕಿದೆ. ರಶ್ಮಿಕಾ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಾನು ಹೈದರಾಬಾದ್ನವಳು ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಹುಟ್ಟಿದ ಕರ್ನಾಟಕವನ್ನೇ ರಶ್ಮಿಕಾ ಮರೆತಿದ್ದಾರೆ ಎಂದು ಕನ್ನಡಿಗರು ಗರಂ ಆಗಿದ್ದರು. ಇದೀಗ ಅವರಿಗೆ ರಕ್ಷಣೆ ನೀಡುವಂತೆ ಕೊಡವ ಸಮಾಜ ಒತ್ತಾಯಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications