Krishi Thapanda: ನಿರ್ಮಾಪಕನಿಗೆ ಬ್ಲಾಕ್ಮೇಲ್ ಪ್ರಕರಣ: ನಟಿ ಕೃಷಿ ತಾಪಂಡಗೆ ಪೊಲೀಸರಿಂದ ನೋಟಿಸ್
ಬೆಂಗಳೂರು: ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ, ಎಆರ್ವಿ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿಗೆ 7 ಕೋಟಿ ರೂಪಾಯಿ ಹಣದ ಬೇಡಿಕೆ ಇಟ್ಟು ಬೆದರಿಕೆ ಪತ್ರ ಕಳುಹಿಸಿದ್ದ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿ ಹಾಗೂ ಬಿಗ್ಬಾಸ್ ಖ್ಯಾತಿಯ ಕೃಷಿ ತಾಪಂಡಗೆ (Krishi Thapanda) ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಎಎಲ್ ಪೊಲೀಸರು ವೈಶಾಖ್ ಎಂಬಾತನನ್ನು ಈಗಾಗಲೇ ಬಂಧಿಸಿದ್ದು, ಆತ ನಟಿ ಕೃಷಿ ತಾಪಂಡ ಅವರ ಆಪ್ತ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರಿಯರ್ ಮೂಲಕ ಬೆದರಿಕೆ ಪತ್ರ
ಜನವರಿಯಲ್ಲಿ ಬನಶಂಕರಿ ಪ್ರದೇಶದಿಂದ ಕೊರಿಯರ್ ಮೂಲಕ ಅರವಿಂದ್ ರೆಡ್ಡಿ ಅವರಿಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ಈ ಪತ್ರದಲ್ಲಿ ಮಹಿಳೆಯೊಬ್ಬರಿಗೆ ಸಂಬಂಧಿಸಿದ ವಿಚಾರವನ್ನು "ಬಗೆಹರಿಸಬೇಕು" ಎಂದು ಎಚ್ಚರಿಕೆ ನೀಡಲಾಗಿದ್ದು, ಅಲ್ಲದೆ 7 ಕೋಟಿ ರೂಪಾಯಿ ಹಣ ನೀಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು. ಇದೇ ಬೆದರಿಕೆ ಪತ್ರದಲ್ಲಿ ನಟಿ ಕೃಷಿ ತಾಪಂಡ ಅವರು ಹಿಂದೆ ಅರವಿಂದ್ ರೆಡ್ಡಿ ವಿರುದ್ಧ ನೀಡಿದ್ದ ದೂರಿನ ಉಲ್ಲೇಖವೂ ಇರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಬೆದರಿಕೆ ಪತ್ರ ಪಡೆದ ಬಳಿಕ ಅರವಿಂದ್ ರೆಡ್ಡಿ ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಮೊದಲು ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಿಚಾರಣೆ ನಡೆಸಿದರು. ಆತ ತನ್ನ ಮಾಲೀಕರ ಸೂಚನೆಯಂತೆ ಕೊರಿಯರ್ ಕಳುಹಿಸಿದ್ದಾಗಿ ಹೇಳಿಕೆ ನೀಡಿದ್ದ. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ನಟಿಯ ಆಪ್ತ ವೈಶಾಖ್ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ವೈಶಾಖ್ ಈ ಬೆದರಿಕೆ ಪತ್ರ ಕಳುಹಿಸುವ ಸಮಯದಲ್ಲಿ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲೇ ಇದ್ದ ಎನ್ನಲಾಗಿದೆ. ಬಂಧನದ ಬಳಿಕ ವೈಶಾಖ್ನ ಮೊಬೈಲ್ ಫೋನ್ ವಶಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸಿದಾಗ, ಆ ಮೊಬೈಲ್ ಮನೆಯಲ್ಲಿ ಪತ್ತೆಯಾಗಲಿಲ್ಲ. ಬಂಧನದ ನಂತರ ಅದನ್ನು ಬೇರೆಡೆಗೆ ಸ್ಥಳಾಂತರಿಸಿರುವ ಅನುಮಾನವೂ ಇದೀಗ ವ್ಯಕ್ತವಾಗಿದೆ.
ಕೃಷಿ ತಾಪಂಡಗೆ ನೋಟಿಸ್
ಈ ಹಿನ್ನೆಲೆ ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ಪಡೆಯಲು ನಟಿ ಕೃಷಿ ತಾಪಂಡಗೆ ಹೆಚ್ಎಎಲ್ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ಬೆದರಿಕೆ ಅಥವಾ ಬ್ಲ್ಯಾಕ್ಮೇಲ್ ಯತ್ನ ನಡೆದಿದೆಯೇ? ಇದರಲ್ಲಿ ಇನ್ನಾರಾದರೂ ಭಾಗಿಯಾಗಿದ್ದಾರೆಯೇ? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಯಾಂಡಲ್ವುಡ್ ಮತ್ತು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದಿರುವ ನಟಿಗೆ ನೋಟಿಸ್ ನೀಡಿರುವುದು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ತನಿಖೆಯಿಂದ ಸತ್ಯಾಂಶ ಏನೆಂಬುದು ಬಹಿರಂಗವಾಗಲಿದೆ.
ಅರವಿಂದ್ ರೆಡ್ಡಿ ಹಾಗೂ ಕೃಷಿ ತಾಪಂಡ ಅವರ ನಡುವಿನ ಕಿತ್ತಾಟವು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇದೇ ಪ್ರಕರಣದಲ್ಲಿ ಉದ್ಯಮಿಯ ಬಂಧನವಾಗಿ ಜಾಮೀನಿನ ಮೇಲೆ ಹೊರಬಂದಿದ್ದರು. ಬಳಿಕ ಇಬ್ಬರೂ ಲಿವಿಂಗ್ ಟುಗೆದರ್ನಲ್ಲಿದ್ದ ವಿಷಯವನ್ನು ಅರವಿಂದ್ ರೆಡ್ಡಿ ಬಹಿರಂಗಪಡಿಸಿದ್ದರು. ಈಗ ಮತ್ತೆ ಇದೇ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications