Actor Darshan: ದರ್ಶನ್ ನಿರಪರಾಧಿ! ಕೃತ್ಯ ಎಸಗಿದ್ದೇ ಬೇರೆಯವರು ಎಂದ ವಕೀಲ ಜಗದೀಶ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಸೆಪ್ಟೆಂಬರ್ 30ರವರೆಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೆ ವಕೀಲ ಕೆ.ಎನ್. ಜಗದೀಶ್ ಕುಮಾರ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇರೆ ರೀತಿಯದ್ದೇ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದೀಗ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ವಕೀಲ ಜಗದೀಶ್ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಂಚಿಕೊಂಡಿದ್ದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದ ದರ್ಶನ್ ಅಲ್ಲ, ದರ್ಶನ್ ಒಂದೆರಡು ಏಟು ಹೊಡೆದಿರಬಹುದು. ಆದರೆ, ದರ್ಶನ್ ಹೊಡೆಯುವ ಮೊದಲನೇ ಬಹುತೇಕ ಜೀವ ಹೋಗುವಂತೆ ಹೊಡೆದಿರುವುದು ಎ13 ದೀಪಕ್ ಎನ್ನುವವನು. ಈ ದೀಪಕ್ ಶಾಸಕ ಮುನಿರತ್ನ ಅವರ ಅಕ್ಕನ ಮಗ, ಮುನಿರತ್ನ ಅವರ ಸೂಚನೆಯಂತೆ ಈ ಕೃತ್ಯ ಎಸಗಿದ್ದಾನೆ ಎನ್ನುವುದು ಜಗದೀಶ್ ಮಾಡಿರುವ ಆರೋಪವಾಗಿದೆ.
ದರ್ಶನ್ ಪ್ರಕರಣ : ರೇಣುಕಾಸ್ವಾಮಿ ಕೊಲೆ ಮಾಡಿದ ನೈಜ ಆರೋಪಿ ದೀಪಕ್. ಅಸಲಿ ಸತ್ಯದ ಅನಾವರಣ. pic.twitter.com/bWT0Wcgual
— ಕರುನಾಡಿನ ಮಿನುಗುವ ನಕ್ಷತ್ರ💛❤️ (@NaadaPremiSha) September 17, 2024
ಪ್ರಚಾರ ಮಾಡಿದ್ದಕ್ಕೆ ಸಿಟ್ಟಾದ್ರ ಶಾಸಕ?
ಶಾಸಕ ಮುನಿರತ್ನ ಅವರಿಗೆ ದರ್ಶನ್ರನ್ನು ಮಟ್ಟ ಹಾಕಬೇಕಿತ್ತು. ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು ಮುನಿರತ್ನ ಕೋಪಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ದರ್ಶನ್ಗೆ ಈಗಲೂ ಹುಡುಗಾಟ, ಹುಚ್ಚ ಅವನು, ಈಗಲೂ ಮಧ್ಯದ ಬೆರಳು ತೋರಿಸಿಕೊಂಡು ಓಡಾಡುತ್ತಾನೆ. ಆತನಿಗೆ ಸ್ವಲ್ಪ ಬುದ್ದಿ ಹೇಳಿ ಎಂದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಮನವಿ ಮಾಡಿದ್ದಾರೆ.

ಮಾಡದೇ ಇರುವ ಕೊಲೆಯನ್ನು ಮೈಮೇಲೆ ಎಳೆದುಕೊಂಡಿರೋದ್ಯಾಕೆ? ಯಾರಿಗೋಸ್ಕರ್ ಈ ತ್ಯಾಗ ಮಾಡ್ತಿದೀಯಾ ದರ್ಶನ್ ಎಂದು ಜಗದೀಶ್ ಪ್ರಶ್ನೆ ಮಾಡಿದ್ದಾರೆ. ಇದನ್ನೆಲ್ಲಾ ಮಾಡಲು ಶಾಸಕ ಮುನಿರತ್ನ ಕೇಂದ್ರ ಸಚಿವರೊಬ್ಬರಿಂದ ಪೊಲೀಸರ ಮೇಲೆ ಒತ್ತಡ ಹಾಕಿಸಿದ್ದಾರೆ ಎಂದು ಜಗದೀಶ್ ಆರೋಪ ಮಾಡಿದ್ದಾರೆ.
ಯಾವುದು ನಿಜ? ಯಾವುದು ಸುಳ್ಳು?
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಪೊಲೀಸರು ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿದ್ದು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪೊಲೀಸರ ಎದುರು ರೇಣುಕಾಸ್ವಾಮಿ ಮೇಲೆ ನಾನು ಹಲ್ಲೆ ಮಾಡಿದ್ದು ನಿಜ ಎಂದು ಒಪ್ಪಿಕೊಂಡಿರುವುದಾಗಿ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈಗ ವಕೀಲ ಜಗದೀಶ್ ಮಾಡಿರುವ ಆರೋಪಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ದಲಿತ ಮತ್ತು ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಶಾಸಕ ಮುನಿರತ್ನ ಅವರನ್ನು ಕೂಡ ಈಗ ಬಂಧಿಸಲಾಗಿದೆ. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೂಡ ಅವರ ಹೆಸರು ಕೇಳಿ ಬಂದಿದ್ದು, ಪೊಲೀಸರು ಈ ದಿಕ್ಕಿನಲ್ಲಿ ತನಿಖೆ ನಡೆಸುತ್ತಾರಾ ಎನ್ನುವುದು ಪ್ರಶ್ನೆಯಾಗಿದೆ.
-
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications