Lawyer Jagadish: ಮದುವೆ ಆಗದೆ IVF ಮೂಲಕ ಗರ್ಭಿಣಿಯಾದ ಭಾವನಾ: ಆದರೆ ಮನಸ್ಸಿಗೆ ಸ್ವಲ್ಪ ನೋವಾಯ್ತು ಎಂದ ಲಾಯರ್ ಜಗದೀಶ್
ಮದುವೆ ಆಗದೇ ಮಕ್ಕಳನ್ನು ಪಡೆಯುವ ನಿರ್ಧಾರ ಅಷ್ಟು ಸುಲಭದ್ದಲ್ಲ. ಮದುವೆ ಆಗದೇ ನಟಿ ಭಾವನಾ ರಾಮಣ್ಣ ಗರ್ಭಿಣಿಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. IVF ಮೂಲಕ ಭಾವನಾ ಅವರು ಮಕ್ಕಳನ್ನು ಪಡೆಯುವ ಗಟ್ಟಿ ನಿರ್ಧಾರಕ್ಕೆ ನಟಿ ಭಾವನಾ ಅವರು ಮುಂದಾಗಿದ್ದು, ಸದ್ಯ ಏಳು ತಿಂಗಳ ಗರ್ಭಿಣಿಯಾಗಿರುವ ಭಾವನಾ ಅವರ ಈ ನಿರ್ಧಾರದ ಬಗ್ಗೆ ಕೆಲವರು ಸೋಶಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ.
ಮದುವೆ ಆಗದೇ IVF ಮೂಲಕ ಮಕ್ಕಳನ್ನು ಪಡೆಯುತ್ತಿರುವ ಕುರಿತು ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ವಿರುದ್ಧ ಹೇಳಿಕೆಯನ್ನ ನೀಡಿದ್ದಾರೆ. ಮದುವೆ ಆಗದೇ ಭಾವನಾ ರಾಮಣ್ಣ ಗರ್ಭಿಣಿಯಾಗಿರುವ ಬಗ್ಗೆ ಚರ್ಚೆ ಆಗುತ್ತಿರೋದೇನೋ ಸತ್ಯ. ಆದರೆ, ಪರೋಕ್ಷವಾಗಿ ಐವಿಎಫ್ ಬಗ್ಗೆ ಪ್ರಚಾರ ಮಾಡುತ್ತಿದ್ದಾರಾ? ಆಸ್ಪತ್ರೆಗಳು ಐವಿಎಫ್ ಪ್ರಚಾರದಲ್ಲಿ ತೊಡಗಿದ್ದಾರಾ? ಎಂದು ಲಾಯರ್ ಜಗದೀಶ್ ಅನುಮಾನದ ಜೊತೆಗೆ ನೋವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಲಾಯರ್ ಜಗದೀಶ್ ಅವರು ಮಾತನಾಡಿರುವ ವಿಡಿಯೋ ಇದೀಘ ವೈರಲ್ ಆಗುತ್ತಿದೆ.

ಐವಿಎಫ್ ಮೂಲಕ ಮಕ್ಕಳನ್ನ ಭಾವನಾ ಪಡೆಯುತ್ತಿದ್ದಾರೆ. ಆಸ್ಪತ್ರೆಗಳು ಭಾವನಾ ಅವರನ್ನು ಬಳಸಿಕೊಂಡು ಐವಿಎಫ್ ಪ್ರಚಾರ ಮಾಡುತ್ತಿದೆಯೇ? ಎಂದು ಪ್ರಶ್ನೆಯನ್ನ ಲಾಯರ್ ಜಗದೀಶ್ ಅವರು ಮಾಡಿದ್ದಾರೆ. ಐವಿಎಫ್ ಬಳಸಿ, ಮದುವೆಯಾಗದೇ ತಾಯಿಯಾಗುತ್ತಿದ್ದಾರೆ. ಭಾವನಾ ಅವರಿಗೆ ಅಭಿನಂದನೆಗಳು. ನಿಮ್ಮ ಭಾವನೆಗಳಿಗೆ ಕರ್ನಾಟಕದ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ. ಅದು ನಿಮ್ಮ ಖಾಸಗಿ ಬದುಕು. ಅದರ ಬಗ್ಗೆ ಯಾರೂ ಕಮೆಂಟ್ ಮಾಡುವಂತಿಲ್ಲ. ಅದು ನಿಮ್ಮ ಇಚ್ಚೆ. ಆದರೆ, ಮಾಧ್ಯಮಗಳ ಮುಂದೆ ಸೋಶಿಯಲ್ ಮೀಡಿಯಾದಲ್ಲಿ ನೀವು ಐವಿಎಫ್ನಿಂದ ತಾಯಿಯಾಗುತ್ತಿರುವ ವಿಚಾರ ಚರ್ಚೆಯಾಗುತ್ತಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಮಾಧ್ಯಮದ ಮುಂದೆ ಬಂದು ಐವಿಎಫ್ ವಿಚಾರವಾಗಿ ಮಾತಾಡಿದಾಗ ಅದರ ಆಗು ಹೋಗುಗಳ ಬಗ್ಗೆ ಮಾತಾಡಬೇಕಾದ ಪರಿಸ್ಥಿತಿ ಇರುತ್ತೆ. ಭಾವನಾ ಅವರು ತಾಯಿ ಆಗುತ್ತಿರೋದು ಓಕೆ. ಆದರೆ, ಆಸ್ಪತ್ರೆಗಳು ಭಾವನಾ ಅವರನ್ನು ಬಳಸಿಕೊಂಡು ಐವಿಎಫ್ ಪ್ರಚಾರ ಮಾಡುತ್ತಿದ್ದಾರಾ? ಎಂದು ನನಗೆ ಮೆಸೇಜ್ಗಳನ್ನು ಮಾಡುತ್ತಿದ್ದಾರೆ. ಹಾಗೇ ಇಲ್ಲಿಂದ ಆಗುವ ಅನಾಹುತಗಳ ಬಗ್ಗೆ ಎಚ್ಚರಿಕೆಯಿಲ್ಲದೆ ಭಾವನಾ ಅವರು ತಮ್ಮ ಭಾವನೆಗಳನ್ನು ಹೇಳಿಕೊಳ್ಳುತ್ತಿದ್ದಾರಾ? ಎಂದು ಲಾಯರ್ ಜಗದೀಶ್ ಪ್ರಶ್ನೆ ಮಾಡಿದ್ದಾರೆ.
ಗಂಡೇ ಬೇಡ. ಮದುವೆನೇ ಬೇಡ. ನಾನು ತಾಯಿ ಆಗಿದ್ದೀನಿ ಅಂತ ಮಾಧ್ಯಮಗಳ ಮುಂದೆ ಪ್ರಮೋಷನ್ ಮಾಡಿದಾಗ ಎಲ್ಲೋ ಒಂದು ಕಡೆ ಐವಿಎಫ್ ಆಸ್ಪತ್ರೆಗಳು ಭಾವನಾ ಅವರನ್ನು ಪ್ರಮೋಷನ್ಗೆ ಬಳಸುತ್ತಿದ್ದಾರಾ? ಅಂತ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೇಳುತ್ತಿದ್ದಾರೆ. ಗಂಡುನೂ ಬೇಕಾಗಿಲ್ಲ. ಮದುವೆನೂಬೇಕಾಗಿಲ್ಲ ಅಂತ ಕೆಲವರು ಹೇಳಿರೋದು. ಮಕ್ಕಳಾಗದವರು ಐವಿಎಫ್ ಬಳಸುವುದು ಓಕೆ. ಅಥವಾ ಇಚ್ಛೆ ಪಟ್ಟು ಭಾವನಾ ತರ ಮದುವೆನೇ ಬೇಡ ಅಂತ ಬಳಸುವವರೂ ಓಕೆ. ಆದರೆ, ಈ ಪ್ರಮೋಷನ್ಸ್ ಯಾಕೆ? ಎಲ್ಲೋ ಒಂದು ಕಡೆ ಐವಿಎಫ್ ಆಸ್ಪತ್ರೆಯವರು ಭಾವನಾ ಅವರನ್ನು ಬಳಸುತ್ತಿದ್ದಾರಾ ಅಂತ ನನ್ನ ಮನಸ್ಸಿಗೂ ಸ್ವಲ್ಪ ನೋವಾಯ್ತು ಎಂದು ಲಾಯರ್ ಜಗದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.
-
Pratham: ಡಿಬಾಸ್ ಅಂತ ಕೂಗಾಡಿ ದರ್ಶನ್ ಅವ್ರನ್ನ ಬೀದಿಗೆ ತರ್ತೀರಿ: ಫ್ಯಾನ್ಸ್ಗೆ ನಟ ಪ್ರಥಮ್ ಬುದ್ಧಿವಾದ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications