'ತಪ್ಪಾಯ್ತು ಶಿವಣ್ಣ' ಕಾಲಿಗೆ ಬಿದ್ದು ಬೇಡಿಕೊಂಡ ಮಡೆನೂರು ಮನು; ಕ್ಷಮಿಸಿದ್ರಾ ಹ್ಯಾಟ್ರಿಕ್ ಹೀರೋ?
ಕುಡಿದ ಅಮಲಿನಲ್ಲಿ ನಟ ಶಿವರಾಜ್ಕುಮಾರ್ ಅವರ ಸಾವಿನ ಕುರಿತು ಕೆಟ್ಟದಾಗಿ ಮಾತನಾಡಿದ್ದ ನಟ ಮಡೆನೂರು ಮನು ಆಡಿಯೋ ಸ್ಯಾಂಡಲ್ವುಡ್ನಲ್ಲಿ ಸಂಚಲನ ಸೃಷ್ಟಿಸಿತ್ತು. ಇದೇ ಕಾರಣಕ್ಕೆ ಮನು ಅವರನ್ನ ಸ್ಯಾಂಡಲ್ವುಡ್ನಿಂದ ಬ್ಯಾನ್ ಕೂಡ ಮಾಡಲಾಗಿತ್ತು. ಜೈಲಿನಿಂದ ಹೊರಬಂದ ಮೇಲೆ ಮಡೆನೂರು ಮನು ನಟರ ಕಾಲಿಗೆ ಬಿದ್ದು ಕ್ಷಮೆ ಕೇಳುತ್ತೇನೆ, ನನಗೆ ಬದುಕಲು ಅವಕಾಶ ಕೊಡಿ ಎಂದು ಬೇಡಿಕೊಂಡಿದ್ದರು. ಇದಕ್ಕಾಗಿ ಶಿವಣ್ಣನ ಮನೆ ಬಳಿಯೂ ಕುಟುಂಬ ಸಮೇತ ತೆರಳಿ ಕಾದರೂ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಈಗ ಕೊನೆಗೂ ಮನು ಶಿವಣ್ಣ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ.
ಶಿವಣ್ಣನನ್ನು ಭೇಟಿಯಾಗಲು ಮನು ಹಲವು ಬಾರಿ ಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಮನು ಆಡಿಯೋ ವೈರಲ್ ಆಗಿದ್ದಕ್ಕೆ ಶಿವಣ್ಣನ ಫ್ಯಾನ್ಸ್ ರೊಚ್ಚಿಗೆದ್ದಿದ್ದರು. ಕನ್ನಡದ ಮೇರು ನಟನ ಸಾವು ಬಯಸಿದ ಮನು ಸರಿಯಾದ ಪಾಠ ಕಲಿಸಬೇಕು ಎಂದು ಆಕ್ರೋಶ ಹೊರಹಾಕಿದ್ರು. ಮನು ಬಹಿರಂಗವಾಗಿ ಕ್ಷಮೆ ಕೇಳಿದ ಕಾರಣ ಅವರ ಮೇಲಿನ ಬ್ಯಾನ್ ಅನ್ನು ಚಿತ್ರರಂಗ ತೆರವು ಮಾಡಿತ್ತು. ಆದರೆ ಶಿವಣ್ಣನನ್ನು ಭೇಟಿಯಾಗಿ ಕಾಲಿಗೆ ಬಿದ್ದೇ ಕ್ಷಮೆ ಕೇಳ್ತೀನಿ ಎಂದು ಮನು ಹೇಳಿದ್ದರು.

ಶಿವಣ್ಣನ ಶೂಟಿಂಗ್ ಸ್ಥಳಕ್ಕೆ ಹೋಗಿದ್ದ ಮನು ಅವರ ಕಾರು ಬಂದ ಕೂಡಲೇ ಹಿಂದೆ ಓಡಿದ್ದಾರೆ. ಶಿವಣ್ಣ ಕಾರಿನಿಂದ ಕೆಳಗೆ ಇಳಿದ ತಕ್ಷಣ ಅವರ ಕಾಲಿಗೆ ಬಿದ್ದು, ತಪ್ಪಾಯ್ತು ಶಿವಣ್ಣ, ಕ್ಷಮಿಸಿ ಎಂದು ಬೇಡಿಕೊಂಡಿದ್ದಾರೆ. ಇದೇ ವೇಳೆ ಗೀತಕ್ಕ ಕೂಡ ಜೊತೆಯಲ್ಲೇ ಇದ್ದರು. ಮನು ಕಾಲಿಗೆ ಬಿದ್ದು, ಮಾಡಿದ ತಪ್ಪಿಗೆ ಕ್ಷಮೆ ಕೇಳಿದ್ದಾರೆ. ನಂತರ ಶಿವಣ್ಣ ಆ ಘಟನೆ ಬಗ್ಗೆ ಮಾತನಾಡಿದ್ದಾರೆ.
ಶಿವಣ್ಣ ರಿಯಾಕ್ಷನ್ ಹೇಗಿತ್ತು?
ಮೊದಲಿಗೆ ಮನು ಜೊತೆಗೆ ಕೆಲವರು ಹೋಗಿ ನಿಮ್ಮ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು ಎಂದಿದ್ದಕ್ಕೆ ನಾನು ಅದನ್ನ ರಿಯಾಕ್ಟ್ ಮಾಡೇ ಇಲ್ವಲ್ರೋ? ಎಂದಿದ್ದಾರೆ. ಯಾರೇ ನನಗೆ ಬೈದರೂ, ಹೊಗಳಿದರೂ, ಉಗುಳಿದರೂ ನಾನು ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಡೋಂಟ್ವರೀ ಎಂದು ಶಿವಣ್ಣ ಹೇಳಿದ್ದಾರೆ. ಕಾಲಿಗೆ ಬಿದ್ದ ಮನು ಅವರನ್ನು ಯಾಕಪ್ಪ ಇದೆಲ್ಲ? ಎಂದು ಕೇಳಿದ್ದಾರೆ.
'ಅಣ್ಣ ನಾವು ನಮ್ಮ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ರೀರಿಲೀಸ್ ಮಾಡಬೇಕು ಅಂತಿದ್ದೀವಿ. ನೀವು ಒಪ್ಪಿದರೆ ಖಂಡಿತ ಮಾಡ್ತೀವಿ ಅಣ್ಣ ಎಂದು ಮನು ಶಿವಣ್ಣಗೆ ಕೇಳಿಕೊಂಡಿದ್ದಾರೆ. ಅದಕ್ಕೆ ಶಿವಣ್ಣ, ಒಳ್ಳೆಯ ಟೈಟಲ್, ರೀರಿಲೀಸ್ ಮಾಡಿ, ಯಾರೂ ಮೇಲಲ್ಲ, ಕೀಳಲ್ಲ, ಎಲ್ರೂ ಒಂದೇನೆ' ಎಂದು ಶುಭಕೋರಿದ್ದಾರೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಮೂಲಕ ನಾಯಕ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡಿದ್ದರು. ಆದರೆ ಸಿನಿಮಾ ರಿಲೀಸ್ ಹಿಂದಿನ ದಿನವೇ ಜೈಲು ಸೇರಿದ್ದರು. 'ಶಿವಣ್ಣ ಇನ್ನು ಕೆಲವೇ ವರ್ಷಗಳಲ್ಲಿ ಸಾಯ್ತಾರೆ, ಆಮೇಲೆ ನಾನೇ ಗಂಡುಗಲಿ' ಎಂದಿದ್ದ ಮನು ಆಡಿಯೋ ವೈರಲ್ ಆಗಿತ್ತು.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications