ತರುಣ್ ಸುಧೀರ್ ಮದುವೆ ಫಿಕ್ಸ್: ಸೊಸೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಮಾಲತಿ ಸುಧೀರ್
ಬೆಂಗಳೂರು, ಜುಲೈ 03: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ತರುಣ್ ಸುಧೀರ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಸದ್ಯ ಕಿರುತೆರೆಯ ಮಹಾನಟಿ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿರುವ ತರುಣ್ ಸುಧೀರ್, ಬನಾರಸ್ ಚಿತ್ರದ ನಾಯಕಿ, ನಟಿ ಸೊನಾಲ್ ಹೊಸ ಜೀವನ ಆರಂಭಿಸಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿದೆ. ತೆರೆಮರೆಯಲ್ಲಿ ಮದುವೆ ಸಿದ್ಧತೆಗಳು ಕೂಡ ಶುರುವಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ.

ಈ ಬಗ್ಗೆ ತರುಣ್ ಸುಧೀರ್ ಅವರ ತಾಯಿ ಮಾಲತಿ ಅವರು ಮಾತನಾಡಿದ್ದು, ಮದುವೆ ಬಗ್ಗೆ ಖಚಿತ ಪಡಿಸಿದ್ದಾರೆ. ಜೊತೆಗೆ ಭಾವಿ ಸೊಸೆ ಬಗ್ಗೆ ಕೂಡ ಮಾತನಾಡಿದ್ದಾರೆ. ತರುಣ್ ಸುಧೀರ್ ಹಾಗೂ ಸೊಲಾನ್ ಅವರ ಮದುವೆ ಆಗುತ್ತದೆ. ಆದರೆ ದಿನಾಂಕ ಎಲ್ಲಾ ನಿಗದಿಯಾಗಿಲ್ಲ. ಸೊಲಾನ್ ಬಗ್ಗೆ ತರುಣ್ ಏನೂ ಹೇಳಲ್ಲ. ಆದರೆ ಒಂದು ನಿರ್ಧಾರ ಆದ ಮೇಲೆ ತಾನೆ ಹೇಳಬೇಕು. ವಿಚಾರ ಗೊತ್ತಿದ್ದರನೂ ಯಾವಾಗ ಏನು ಎನ್ನುವುದೆಲ್ಲಾ ನಿಗದಿಯಾಗಿಲ್ಲ.
ಸೊಲಾನ್ ಅವರ ಸಂಬಂಧಿಕರೆಲ್ಲಾ ದುಬೈನಿಂದ ಬರಬೇಕು. ಅವರೆಲ್ಲಾ ಮಾತನಾಡಬೇಕು. ಅದೆಲ್ಲಾ ಆದ ಮೇಲೆ ತಾನೆ ಅಂತಿಮ ನಿರ್ಧಾರವಾಗುತ್ತದೆ. ನಮ್ಮ ಮನೆಗೆ ಸೊಸೆಯಾಗಿ ಯಾರು ಬಂದರೂ ನನಗೆ ಖುಷಿ. ನನ್ನ ಮಗನಿಗೆ ಹೆಂಡತಿಯಾಗಿ ಯಾರು ಬಂದರೂ ನನಗೆ ಸಂತೋಷ ಎಂದಿದ್ದಾರೆ.
ಮೊದಲಿನಂದನೂ ನನಗೊಂದು ಆಸೆ ಇತ್ತು. ನನ್ನ ಮಗನಿಗೆ ನಾನು ಇರುವಾಗಲೇ ಮದುವೆಯಾಗಲಿ ಎನ್ನುವುದೇ ಒಂದು ಆಸೆ ಇತ್ತು. ಈ ಆಗುತ್ತಾನೆ ಅಂದರೆ ತುಂಬಾ ಸಂತೋಷ. ಒಂದು ಅಥವಾ ಎರಡು ತಿಂಗಳೊಳಗೆ ತರುಣ್ ಸುಧೀರ್ ಹಾಗೂ ಸೊಲಾನ್ ಅವರ ಮದುವೆ ಆಗುತ್ತದೆ ಎಂದು ಮಾಲತಿ ಸುಧೀರ್ ಅವರು ಅಧೀಕೃತವಾಗಿ ತಿಳಿಸಿದ್ದಾರೆ.
ಮೊದಲೇ ಅಳುತ್ತಿದ್ದೇವೆ ನಾವು: ದರ್ಶನ್ ಬಗ್ಗೆ ಕೇಳುತ್ತಿದ್ದಂತೆ ಕೈ ಮುಗಿದ ಮಾಲತಿ ಸುಧೀರ್
ಬಳಿಕ ಕೊನೆಯಲ್ಲಿ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಲತಿ ಸುಧೀರ್, ಕ್ಷಮಿಸಿ, ದಯವಿಟ್ಟು ನನಗೆ ಈ ಬಗ್ಗೆ ಕೇಳಬೇಡಿ. ನನ್ನನ್ನೂ ಏನೂ ಕೇಳಬೇಡಿ. ನನಗೆ ತುಂಬಾ ಅಳು ಬಂದು ಬಿಡುತ್ತದೆ. ಮೊದಲೇ ಅಳುತ್ತಿದ್ದೇವೆ ನಾವು. ಸದ್ಯ ಆ ವಿಚಾರದ ಬಗ್ಗೆ ಮಾತು ಬೇಡ ಎಂದು ಕೈ ಮುಗಿದಿದ್ದಾರೆ.
-
Anusha Rai: ಬಿಗ್ಬಾಸ್ ಬೆಡಗಿ ಅನುಷಾ ರೈ ಮನೆಗೆ ಬಂತು ಐಷಾರಾಮಿ ಫಾರ್ಚೂನರ್ ಕಾರು, ಫೋಟೋಸ್ ಇಲ್ಲಿವೆ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications