Actress Assault Case: ಕನ್ನಡ ನಟಿಯ ಕಿಡ್ನ್ಯಾಪ್, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ನಟ ದಿಲೀಪ್ಗೆ ರಿಲೀಫ್
2017ರಲ್ಲಿ ಖ್ಯಾತ ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳದ ಸೆಷನ್ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದ್ದು, ಅವರ ವಿರುದ್ಧದ ಪಿತೂರಿ ಆರೋಪವನ್ನು ಸಾಬೀತು ಮಾಡಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಮಲಯಾಳಂ ಚಿತ್ರರಂಗವನ್ನೇ ಈ ಪ್ರಕರಣವು ಬೆಚ್ಚಿಬೀಳಿಸಿತ್ತು. ಈ ಸಂವೇದನಾಶೀಲ ಪ್ರಕರಣದ ಎಂಟು ವರ್ಷಗಳ ನಂತರ ಮತ್ತು ಸಿನಿಮಾದಲ್ಲಿ ಸ್ತ್ರೀದ್ವೇಷ, ಅಧಿಕಾರ ಮತ್ತು ಹೊಣೆಗಾರಿಕೆಯ ಬಗ್ಗೆ ವ್ಯಾಪಕ ಚರ್ಚೆಗೆ ನಾಂದಿ ಹಾಡಿದ ನಂತರ ಈ ತೀರ್ಪು ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಮತ್ತು ಇತರ ಐವರು ಆರೋಪಿಗಳನ್ನ ದೋಷಿಗಳೆಂದು ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶಿಕ್ಷೆಗೆ ಒಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್ 12ರಂದು ಪ್ರಕಟಿಸುವುದಾಗಿ ದಿನಾಂಕ ನಿಗದಿಪಡಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರ ಜಾಮೀನು ಕೂಡ ರದ್ದಾಗಿದೆ.

ಕೇಸ್ ಖುಲಾಸೆಗೊಂಡ ನಂತರ ಮಾತನಾಡಿರುವ ನಟ ದಿಲೀಪ್, ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲು ಕ್ರಿಮಿನಲ್ ಪಿತೂರಿ. ಕೆಲವು ಪೊಲೀಸ್ ಅಧಿಕಾರಿಗಳು ಇದಕ್ಕಾಗಿ ಕೆಲ ಆರೋಪಿಗಳನ್ನು ಬಳಸಿಕೊಂಡರು. ಮಾಧ್ಯಮಗಳು ತನ್ನ ವಿರುದ್ಧ ಸುಳ್ಳು ನಿರೂಪಣೆಯನ್ನು ಹರಡಿದವು ಎಂದು ಆರೋಪಿಸಿದ್ದಾರೆ. ನಿಜವಾದ ಪಿತೂರಿ ಎಂದರೆ ನನ್ನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿ, ನನ್ನ ವೃತ್ತಿಜೀವನವನ್ನು ನಾಶಮಾಡಿದ್ದು ಎಂದು ದಿಲೀಪ್ ಹೇಳಿದ್ದಾರೆ. ಈ ಕಠಿಣ ಪರೀಕ್ಷೆಯುದ್ದಕ್ಕೂ ತನ್ನೊಂದಿಗೆ ನಿಂತಿದ್ದಕ್ಕಾಗಿ ನನ್ನ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಎಂದಿದ್ದಾರೆ.
ಏನಿದು ಪ್ರಕರಣ?
2017ರ ಫೆಬ್ರವರಿ 17ರಂದು ಎರ್ನಾಕುಲಂ ಬಳಿ ಮಲಯಾಳಂ ಯುವ ನಟಿ ತ್ರಿಶೂರ್ನಿಂದ ಸಿನಿಮಾ ಚಿತ್ರೀಕರಣಕ್ಕಾಗಿ ಪ್ರಯಾಣಿಸುತ್ತಿದ್ದಾಗ ಈ ಹಲ್ಲೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಪಲ್ಸರ್ ಸುನಿ ಮತ್ತು ಅವರ ಸಹಚರರು ನಟಿಯನ್ನು ಅಪಹರಿಸಿ, ಹಲ್ಲೆ ಮಾಡಿ, ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಿರುವ ಆರೋಪ ಕೇಳಿಬಂದಿತ್ತು. ಬಳಿಕ ಪ್ರಮುಖ ಆರೋಪಿಗಳನ್ನು ಸಹ ಬಂಧಿಸಲಾಗಿತ್ತು. ಇದೇ ಕೇಸ್ನಲ್ಲಿ ನಟ ದಿಲೀಪ್ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಚಲಿಸುವ ಕಾರಿನೊಳಗೆ ಮಲಯಾಳಂ ಯುವ ನಟಿಯನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣವು ದೇಶದಾದ್ಯಂತ ಗಮನ ಸೆಳೆದಿತ್ತು. ನಟಿಯ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಲು ಸೂಚಿಸಿದ್ದು ಹಾಗೂ ಈ ಅಪರಾಧಕ್ಕೆ ₹1.5 ಕೋಟಿ ನೀಡಿದ್ದಾರೆ ಎಂದು ನಟ ದಿಲೀಪ್ ಮೇಲೆ ಆರೋಪ ಹೊರಿಸಲಾಗಿತ್ತು. ನಟಿಯ ಮೇಲೆ ಸೇಡು ತೀರಿಸಿಕೊಳ್ಳಲು ದಿಲೀಪ್ ಆಕೆಯ ಮೇಲಿನ ದೌರ್ಜನ್ಯದ ದೃಶ್ಯ ಹಾಗೂ ನಗ್ನ ಫೋಟೋ ಕೂಡ ಬಯಸಿದ್ದರು ಎಂಬ ಆರೋಪವಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications