Nazriya Nazim: ನನ್ನ ಮನಸ್ಸು ಸರಿ ಇಲ್ಲ- ವೈಯಕ್ತಿಕ ಬದುಕಿನಿಂದ ಬೇಸತ್ತ ನಜ್ರಿಯಾ ನಜೀಮ್
ಬೆಂಗಳೂರು ಡೇಸ್ ಖ್ಯಾತಿಯ ನಜ್ರಿಯಾ ನಜೀಮ್ ಕೆಲ ತಿಂಗಳುಗಳಿಂದ ಸೋಷಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರ ಅನುಪಸ್ಥಿತಿಯ ಬಗ್ಗೆ ಅಭಿಮಾನಿಗಳು ಮತ್ತು ಮಾಧ್ಯಮಗಳಲ್ಲಿ ಕುತೂಹಲ ಮೂಡಿಸಿತ್ತು. ಈಗ ಅವರು ಒಂದು ಪತ್ರ ಬರೆದು ತಮ್ಮ ವೈಯಕ್ತಿಕ ಸಮಸ್ಯೆಗಳಿಂದಾಗಿ ಕೆಲಕಾಲ ದೂರ ಉಳಿದಿದ್ದೆಂದು ಪತ್ರದ ಮೂಲಕ ತಿಳಿಸಿದ್ದಾರೆ.
ಸಿಕ್ಕಪಟ್ಟೆ ಕ್ಯೂಟ್ ಆಗಿರುವ ಮಲಯಾಳಂ ನಟಿ ನಜ್ರಿಯಾ ನಜೀಮ್ ಅವರು ಸಾಕಷ್ಟು ಪ್ರತಿಭಾನ್ವಿತ ನಟಿ. ಹಲವು ಚಿತ್ರಗಳನ್ನ ಮಾಡುವ ಮೂಲಕ ಮಲಯಾಳಂನಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ನಜ್ರಿಯಾ ಅವರು ಸೋಶಿಯಲ್ ಮೀಡಿಯಾಲ್ಲೂ ಸಾಕಷ್ಟು ಸಕ್ರಿಯರಾಗಿದ್ದರು. 'ರಾಜಾ ರಾಣಿ' ಚಿತ್ರದ ಮೂಲಕ ನಜ್ರಿಯಾ ಪ್ರೇಕ್ಷಕರಿಗೆ ಹತ್ತಿರವಾದರು.ಇನ್ನೂ ಬೆಂಗಳೂರು ಡೇಸ್ ಚಿತ್ರದ ಮೂಲಕ ಸಹ ಗಮನ ಸೆಳೆದಿದ್ದರು. ಇದರಲ್ಲಿ ನಜ್ರಿಯಾ ಪತಿಯ ಪಾತ್ರವನ್ನು ಫಹಾದ್ ಫಾಜಿಲ್ ನಿರ್ವಹಿಸಿದ್ದಾರೆ. ಈ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಇವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತು. ನಂತರದ ದಿನಗಳಲ್ಲಿಅವರು ನಿಜ ಜೀವನದಲ್ಲಿ ಗಂಡ ಹೆಂಡತಿಯಾದರು.

ಮಲಯಾಳಂ ನಟಿ ನಜ್ರಿಯಾ ನಜೀಮ್ ಅವರು ವೈಯಕ್ತಿಕ ಬದುಕಿನ ಬಗ್ಗೆ ಹಲವು ವಿಚಾರಗಳು ಚರ್ಚೆ ಶುರುವಾದ ಬೆನ್ನಲ್ಲೇ ನಜ್ರಿಯಾ ರಿಯಾಕ್ಟ್ ಮಾಡಿದ್ದಾರೆ. ತನ್ನ ಅನುಪಸ್ಥಿತಿಯ ಕುರಿತು ಅಭಿಮಾನಿಗಳಿಗೆ ನಟಿ ಪೋಸ್ಟ್ ಮೂಲಕ ಸಂದೇಶವನ್ನ ನೀಡಿದ್ದಾರೆ. ನಜ್ರಿಯಾ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟೀವ್ ಆಗಿಲ್ಲ. ಅವರ ನಟನೆಯ 'ಸೂಕ್ಷ್ಮದರ್ಶಿನಿ' ಚಿತ್ರ ಹಿಟ್ ಆಯಿತು. ಆದರೆ, ನಜ್ರಿಯಾ ಮಾತ್ರ ಯಾರ ಸಂಪರ್ಕದಲ್ಲೂ ಇಲ್ಲ ಎಂದು ತಿಳಿದುಬಂದಿದೆ. ನಜ್ರಿಯಾ ವೈಯಕ್ತಿಕ ಬದುಕಿನಿಂದ ಬೇಸತ್ತಿದ್ದಾರೆ ಎನ್ನಲಾಗಿದ್ದು, ಬಹುದಿನಗಳಿಂದ ಸ್ನೇಹಿತರು, ಕುಟುಂಬದವರು ಮತ್ತು ಚಿತ್ರರಂಗದವರು ಕರೆ ಮಾಡಿದರೂ ಯಾರೂ ಪ್ರತಿಕ್ರಿಯಿಸಲಿಲ್ಲ. ಇದರ ನಡುವೆ ನಜ್ರಿಯಾ ತನ್ನ ಪತಿ ಫಹಾದ್ ನಿಂದ ಬೇರ್ಪಡುತ್ತಿದ್ದಾರೆ ಎಂಬ ಸುದ್ದಿ ಹರಡಿದ ಬೆನ್ನಲ್ಲೇ ನಜ್ರಿಯಾ ಪತ್ರವೊಂದನ್ನ ಬರೆದಿದ್ದಾರೆ.
ನೀವೆಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ನಾನು ಸ್ವಲ್ಪ ಸಮಯದಿಂದ ಎಲ್ಲರಿಂದ ದೂರ ಇದ್ದೆ. ನನಗೆ ಸ್ವಲ್ಪ ಸಮಯ ಬೇಕಿತ್ತು. ನಿಮ್ಮಲ್ಲಿ ಹಲವರಿಗೆ ತಿಳಿದಿರುವಂತೆ, ನಾನು ಯಾವಾಗಲೂ ತುಂಬಾ ಸಕ್ರಿಯನಾಗಿರುತ್ತೇನೆ. ಕಳೆದ ಕೆಲವು ತಿಂಗಳುಗಳಿಂದ ನಾನು ನನ್ನ ವೈಯಕ್ತಿಕ ಸವಾಲುಗಳೊಂದಿಗೆ ಹೋರಾಡುತ್ತಿದ್ದೇನೆ. ನನ್ನ ಮನಸ್ಸು ಸರಿ ಇಲ್ಲ ಎಂದಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ನಾನು ಅನೇಕ ಪ್ರಮುಖ ಘಟನೆಗಳನ್ನು ಮಿಸ್ ಮಾಡಿಕೊಂಡೆ.. ನನ್ನ 30 ನೇ ಹುಟ್ಟುಹಬ್ಬ, ಹೊಸ ವರ್ಷದ ಆಚರಣೆ, ನನ್ನ ಸೂಕ್ಷ್ಮದರ್ಶಿನಿ ಚಿತ್ರದ ಯಶಸ್ಸು ಮತ್ತು ಇತರ ಹಲವು ಪ್ರಮುಖ ಕ್ಷಣಗಳು ಮಿಸ್ ಆದವು, ಕ್ಷಮಿಸಿ ಎಂದು ನಜ್ರಿಯಾ ಪೋಸ್ಟ್ ಮಾಡಿದ್ದಾರೆ.
ನಾನು ಏಕೆ ಮೌನವಾಗಿದ್ದೆನೆಂದು ವಿವರಿಸದಿದ್ದಕ್ಕಾಗಿ, ಫೋನ್ ಕರೆಗಳನ್ನು ಸ್ವೀಕರಿಸದಿದ್ದಕ್ಕಾಗಿ ಅಥವಾ ಸಂದೇಶಗಳಿಗೆ ಉತ್ತರಿಸದಿದ್ದಕ್ಕಾಗಿ ನನ್ನ ಎಲ್ಲಾ ಸ್ನೇಹಿತರಲ್ಲಿ ಕ್ಷಮೆಯಾಚಿಸುತ್ತೇನೆ. ನಾನು ಉಂಟುಮಾಡಿದ ಅನಾನುಕೂಲತೆಗಾಗಿ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಕೆಲಸಕ್ಕಾಗಿ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ನನ್ನ ಎಲ್ಲಾ ಸಹನಟರು, ನಿರ್ದೇಶಕರು ಮತ್ತು ನಿರ್ಮಾಪಕರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಇದು ಕಠಿಣ ಪ್ರಯಾಣವಾಗಿತ್ತು. ಆದರೆ ನಾನು ಪ್ರತಿದಿನ ಚೇತರಿಸಿಕೊಳ್ಳಲು ಮತ್ತು ಸುಧಾರಿಸಲು ಶ್ರಮಿಸುತ್ತಿದ್ದೇನೆ. ಈ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ನನಗೆ ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು, ಆದರೆ ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ಇದ್ದಕ್ಕಿದ್ದಂತೆ ಏಕೆ ಕಣ್ಮರೆಯಾದೆ ಎಂಬುದನ್ನು ನನ್ನ ಎಲ್ಲಾ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ವಿವರಿಸಬೇಕೆಂದು ಅನಿಸಿದ್ದರಿಂದ ಇಂದು ಇದನ್ನು ಬರೆದಿದ್ದೇನೆ ಎಂದು ನಜ್ರಿಯಾ ಹೇಳಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications