Nazriya Nazim: ನನ್ನ ಮನಸ್ಸು ಸರಿ ಇಲ್ಲ- ವೈಯಕ್ತಿಕ ಬದುಕಿನಿಂದ ಬೇಸತ್ತ ನಜ್ರಿಯಾ ನಜೀಮ್
ಬೆಂಗಳೂರು ಡೇಸ್ ಖ್ಯಾತಿಯ ನಜ್ರಿಯಾ ನಜೀಮ್ ಕೆಲ ತಿಂಗಳುಗಳಿಂದ ಸೋಷಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರ ಅನುಪಸ್ಥಿತಿಯ ಬಗ್ಗೆ ಅಭಿಮಾನಿಗಳು ಮತ್ತು ಮಾಧ್ಯಮಗಳಲ್ಲಿ ಕುತೂಹಲ ಮೂಡಿಸಿತ್ತು. ಈಗ ಅವರು ಒಂದು ಪತ್ರ ಬರೆದು ತಮ್ಮ ವೈಯಕ್ತಿಕ ಸಮಸ್ಯೆಗಳಿಂದಾಗಿ ಕೆಲಕಾಲ ದೂರ ಉಳಿದಿದ್ದೆಂದು ಪತ್ರದ ಮೂಲಕ ತಿಳಿಸಿದ್ದಾರೆ.
ಸಿಕ್ಕಪಟ್ಟೆ ಕ್ಯೂಟ್ ಆಗಿರುವ ಮಲಯಾಳಂ ನಟಿ ನಜ್ರಿಯಾ ನಜೀಮ್ ಅವರು ಸಾಕಷ್ಟು ಪ್ರತಿಭಾನ್ವಿತ ನಟಿ. ಹಲವು ಚಿತ್ರಗಳನ್ನ ಮಾಡುವ ಮೂಲಕ ಮಲಯಾಳಂನಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ನಜ್ರಿಯಾ ಅವರು ಸೋಶಿಯಲ್ ಮೀಡಿಯಾಲ್ಲೂ ಸಾಕಷ್ಟು ಸಕ್ರಿಯರಾಗಿದ್ದರು. 'ರಾಜಾ ರಾಣಿ' ಚಿತ್ರದ ಮೂಲಕ ನಜ್ರಿಯಾ ಪ್ರೇಕ್ಷಕರಿಗೆ ಹತ್ತಿರವಾದರು.ಇನ್ನೂ ಬೆಂಗಳೂರು ಡೇಸ್ ಚಿತ್ರದ ಮೂಲಕ ಸಹ ಗಮನ ಸೆಳೆದಿದ್ದರು. ಇದರಲ್ಲಿ ನಜ್ರಿಯಾ ಪತಿಯ ಪಾತ್ರವನ್ನು ಫಹಾದ್ ಫಾಜಿಲ್ ನಿರ್ವಹಿಸಿದ್ದಾರೆ. ಈ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಇವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತು. ನಂತರದ ದಿನಗಳಲ್ಲಿಅವರು ನಿಜ ಜೀವನದಲ್ಲಿ ಗಂಡ ಹೆಂಡತಿಯಾದರು.

ಮಲಯಾಳಂ ನಟಿ ನಜ್ರಿಯಾ ನಜೀಮ್ ಅವರು ವೈಯಕ್ತಿಕ ಬದುಕಿನ ಬಗ್ಗೆ ಹಲವು ವಿಚಾರಗಳು ಚರ್ಚೆ ಶುರುವಾದ ಬೆನ್ನಲ್ಲೇ ನಜ್ರಿಯಾ ರಿಯಾಕ್ಟ್ ಮಾಡಿದ್ದಾರೆ. ತನ್ನ ಅನುಪಸ್ಥಿತಿಯ ಕುರಿತು ಅಭಿಮಾನಿಗಳಿಗೆ ನಟಿ ಪೋಸ್ಟ್ ಮೂಲಕ ಸಂದೇಶವನ್ನ ನೀಡಿದ್ದಾರೆ. ನಜ್ರಿಯಾ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟೀವ್ ಆಗಿಲ್ಲ. ಅವರ ನಟನೆಯ 'ಸೂಕ್ಷ್ಮದರ್ಶಿನಿ' ಚಿತ್ರ ಹಿಟ್ ಆಯಿತು. ಆದರೆ, ನಜ್ರಿಯಾ ಮಾತ್ರ ಯಾರ ಸಂಪರ್ಕದಲ್ಲೂ ಇಲ್ಲ ಎಂದು ತಿಳಿದುಬಂದಿದೆ. ನಜ್ರಿಯಾ ವೈಯಕ್ತಿಕ ಬದುಕಿನಿಂದ ಬೇಸತ್ತಿದ್ದಾರೆ ಎನ್ನಲಾಗಿದ್ದು, ಬಹುದಿನಗಳಿಂದ ಸ್ನೇಹಿತರು, ಕುಟುಂಬದವರು ಮತ್ತು ಚಿತ್ರರಂಗದವರು ಕರೆ ಮಾಡಿದರೂ ಯಾರೂ ಪ್ರತಿಕ್ರಿಯಿಸಲಿಲ್ಲ. ಇದರ ನಡುವೆ ನಜ್ರಿಯಾ ತನ್ನ ಪತಿ ಫಹಾದ್ ನಿಂದ ಬೇರ್ಪಡುತ್ತಿದ್ದಾರೆ ಎಂಬ ಸುದ್ದಿ ಹರಡಿದ ಬೆನ್ನಲ್ಲೇ ನಜ್ರಿಯಾ ಪತ್ರವೊಂದನ್ನ ಬರೆದಿದ್ದಾರೆ.
ನೀವೆಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ನಾನು ಸ್ವಲ್ಪ ಸಮಯದಿಂದ ಎಲ್ಲರಿಂದ ದೂರ ಇದ್ದೆ. ನನಗೆ ಸ್ವಲ್ಪ ಸಮಯ ಬೇಕಿತ್ತು. ನಿಮ್ಮಲ್ಲಿ ಹಲವರಿಗೆ ತಿಳಿದಿರುವಂತೆ, ನಾನು ಯಾವಾಗಲೂ ತುಂಬಾ ಸಕ್ರಿಯನಾಗಿರುತ್ತೇನೆ. ಕಳೆದ ಕೆಲವು ತಿಂಗಳುಗಳಿಂದ ನಾನು ನನ್ನ ವೈಯಕ್ತಿಕ ಸವಾಲುಗಳೊಂದಿಗೆ ಹೋರಾಡುತ್ತಿದ್ದೇನೆ. ನನ್ನ ಮನಸ್ಸು ಸರಿ ಇಲ್ಲ ಎಂದಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ನಾನು ಅನೇಕ ಪ್ರಮುಖ ಘಟನೆಗಳನ್ನು ಮಿಸ್ ಮಾಡಿಕೊಂಡೆ.. ನನ್ನ 30 ನೇ ಹುಟ್ಟುಹಬ್ಬ, ಹೊಸ ವರ್ಷದ ಆಚರಣೆ, ನನ್ನ ಸೂಕ್ಷ್ಮದರ್ಶಿನಿ ಚಿತ್ರದ ಯಶಸ್ಸು ಮತ್ತು ಇತರ ಹಲವು ಪ್ರಮುಖ ಕ್ಷಣಗಳು ಮಿಸ್ ಆದವು, ಕ್ಷಮಿಸಿ ಎಂದು ನಜ್ರಿಯಾ ಪೋಸ್ಟ್ ಮಾಡಿದ್ದಾರೆ.
ನಾನು ಏಕೆ ಮೌನವಾಗಿದ್ದೆನೆಂದು ವಿವರಿಸದಿದ್ದಕ್ಕಾಗಿ, ಫೋನ್ ಕರೆಗಳನ್ನು ಸ್ವೀಕರಿಸದಿದ್ದಕ್ಕಾಗಿ ಅಥವಾ ಸಂದೇಶಗಳಿಗೆ ಉತ್ತರಿಸದಿದ್ದಕ್ಕಾಗಿ ನನ್ನ ಎಲ್ಲಾ ಸ್ನೇಹಿತರಲ್ಲಿ ಕ್ಷಮೆಯಾಚಿಸುತ್ತೇನೆ. ನಾನು ಉಂಟುಮಾಡಿದ ಅನಾನುಕೂಲತೆಗಾಗಿ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಕೆಲಸಕ್ಕಾಗಿ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ನನ್ನ ಎಲ್ಲಾ ಸಹನಟರು, ನಿರ್ದೇಶಕರು ಮತ್ತು ನಿರ್ಮಾಪಕರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಇದು ಕಠಿಣ ಪ್ರಯಾಣವಾಗಿತ್ತು. ಆದರೆ ನಾನು ಪ್ರತಿದಿನ ಚೇತರಿಸಿಕೊಳ್ಳಲು ಮತ್ತು ಸುಧಾರಿಸಲು ಶ್ರಮಿಸುತ್ತಿದ್ದೇನೆ. ಈ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ನನಗೆ ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು, ಆದರೆ ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ಇದ್ದಕ್ಕಿದ್ದಂತೆ ಏಕೆ ಕಣ್ಮರೆಯಾದೆ ಎಂಬುದನ್ನು ನನ್ನ ಎಲ್ಲಾ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ವಿವರಿಸಬೇಕೆಂದು ಅನಿಸಿದ್ದರಿಂದ ಇಂದು ಇದನ್ನು ಬರೆದಿದ್ದೇನೆ ಎಂದು ನಜ್ರಿಯಾ ಹೇಳಿದ್ದಾರೆ.
-
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
ಶ್ರೀ ಕೃಷ್ಣನ ಪರೀಕ್ಷೆ: ಧರ್ಮರಾಯನ ಗುಣಗಳಿಂದ ಕಲಿಯುವ ಜೀವನ ಪಾಠ: ವಿಶ್ವನಾಥ್ ಬಿ ಬರಹ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications