Viral Video: ತಮಿಳುನಾಡು ಚುನಾವಣೆ: ಹಸಿ ಸೊಪ್ಪು, ತರಕಾರಿ ತಿನ್ನುತ್ತಾ ಮತಯಾಚಿಸಿದ ಸ್ವತಂತ್ರ ಅಭ್ಯರ್ಥಿ ನಟ ಮನ್ಸೂರ್ ಅಲಿ ಖಾನ್
ತಮಿಳುನಾಡು ವಿಧಾನಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಭಿನ್ನ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಇದರ ಭಾಗವಾಗಿ, ತಿರುಚಿರಾಪಳ್ಳಿ ಜಿಲ್ಲೆಯ ಲಾಲ್ಗುಡಿ (Lalgudi) ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಖ್ಯಾತ ಬಹುಭಾಷಾ ನಟ ಮನ್ಸೂರ್ ಅಲಿ ಖಾನ್, ಕಲ್ಲಕುಡಿ ಮಾರುಕಟ್ಟೆಯಲ್ಲಿ ನಡೆಸಿದ ವಿಶಿಷ್ಟ ಪ್ರಚಾರ ಈಗ ಸಾರ್ವಜನಿಕರ ಗಮನ ಸೆಳೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಾರುಕಟ್ಟೆಯಲ್ಲಿ ಮತಭೇಟೆ
ಯಾವಾಗಲೂ ತಮ್ಮ ವಿಭಿನ್ನ ನಡವಳಿಕೆ ಮತ್ತು ನೇರ ಮಾತುಗಳಿಂದ ಸುದ್ದಿಯಲ್ಲಿರುವ ಮನ್ಸೂರ್ ಅಲಿ ಖಾನ್, ಇಲ್ಲಿನ ಕಲ್ಲಕುಡಿ ಮಾರುಕಟ್ಟೆಗೆ ಭೇಟಿ ನೀಡಿದರು. ಅಲ್ಲಿನ ವ್ಯಾಪಾರಿಗಳು ಮತ್ತು ಗ್ರಾಹಕರೊಂದಿಗೆ ನೇರವಾಗಿ ಬೆರೆತ ಅವರು, ಮಾರುಕಟ್ಟೆಯಲ್ಲಿದ್ದ ಹಸಿ ತರಕಾರಿಗಳನ್ನು ಸವಿಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಅಂಗಡಿಗಳ ಮುಂದೆ ನಿಂತು ಹಸಿ ಕ್ಯಾರೆಟ್, ಮೂಲಂಗಿ ಹಾಗೂ ಇತರ ಸೊಪ್ಪು ತರಕಾರಿಗಳನ್ನು ತಿನ್ನುತ್ತಲೇ ಜನಸಾಮಾನ್ಯರ ಜೊತೆ ಹರಟೆ ಹೊಡೆದರು.

ತರಕಾರಿ ಸವಿಯುವುದರ ಜೊತೆಗೆ ಮಾರುಕಟ್ಟೆಯ ಪ್ರತಿ ಮೂಲೆಗೂ ತೆರಳಿದ ನಟ, ತಾವೇ ಸ್ವತಃ ಚುನಾವಣಾ ಕರಪತ್ರಗಳನ್ನು ಜನರಿಗೆ ಹಂಚಿದರು. ನಾನು ನಿಮ್ಮವನೇ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನನಗೆ ಒಂದು ಅವಕಾಶ ನೀಡಿ ಎಂದು ವಿನಂತಿಸುತ್ತಾ ತಮ್ಮ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು. ಈ ವೇಳೆ ಅವರ ಅಭಿಮಾನಿಗಳು ಮತ್ತು ಮಾರುಕಟ್ಟೆಯಲ್ಲಿದ್ದ ಜನರು ನಟನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಸದಾ ವಿಭಿನ್ನ ಪ್ರಚಾರ
ಮನ್ಸೂರ್ ಅಲಿ ಖಾನ್ ಅವರಿಗೆ ಇಂತಹ ವಿಭಿನ್ನ ಪ್ರಚಾರಗಳು ಹೊಸದೇನಲ್ಲ. ಈ ಹಿಂದೆ ನಡೆದ ಚುನಾವಣೆಗಳಲ್ಲೂ ಅವರು ರಸ್ತೆ ಬದಿಯಲ್ಲಿ ಹಣ್ಣು ಮಾರಾಟ ಮಾಡುವುದು, ಕಸ ಗುಡಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಜನಸಾಮಾನ್ಯರಂತೆ ಊಟ ಮಾಡುವ ಮೂಲಕ ಸುದ್ದಿಯಾಗಿದ್ದರು. ಈಗ ಲಾಲ್ಗುಡಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅವರು, ಅದ್ದೂರಿ ರೋಡ್ ಶೋಗಳಿಗಿಂತ ಇಂತಹ ಜನಸಂಪರ್ಕ ಅಭಿಯಾನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಾಂಪ್ರದಾಯಿಕ ರಾಜಕೀಯ ಭಾಷಣಗಳಿಗಿಂತ ಮನ್ಸೂರ್ ಅಲಿ ಖಾನ್ ಅವರ ಈ 'ಮಾರುಕಟ್ಟೆ ಪ್ರಚಾರ' ಲಾಲ್ಗುಡಿ ಕ್ಷೇತ್ರದ ಮತದಾರರಲ್ಲಿ ಕುತೂಹಲ ಮೂಡಿಸಿದ್ದು, ಇದು ಚುನಾವಣಾ ಫಲಿತಾಂಶದ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದು ಕಾದು ನೋಡಬೇಕಿದೆ.
#WATCH | Tiruchirappalli, Tamil Nadu: Film actor Mansoor Ali Khan, who is contesting as an independent candidate in the Lalgudi Assembly constituency, carried out a unique campaign at the Kallakudi market. During the campaign, he ate vegetables and distributed pamphlets to the… pic.twitter.com/eyvFOVmB9u
— ANI (@ANI) April 5, 2026
ರೈಲ್ವೆ ಹಳಿ ಮೇಲೆ ಮಲಗಿ ಅತಿಕ್ರಮ ಪ್ರವೇಶ ಆರೋಪ
ವಿಭಿನ್ನ ಪ್ರಚಾರ ಶೈಲಿಯಿಂದ ಸದಾ ಸುದ್ದಿಯಲ್ಲಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಈಗ ರೈಲ್ವೆ ಸಂರಕ್ಷಣಾ ಪಡೆ (RPF) ಕಾನೂನು ಕ್ರಮ ಜರುಗಿಸಿದೆ. ಲಾಲ್ಗುಡಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಅವರು, ಪ್ರಚಾರದ ಸಂದರ್ಭದಲ್ಲಿ ರೈಲ್ವೆ ಹಳಿ ಮೇಲೆ ಮಲಗಿ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿದ್ದಾರೆ. ಕಲ್ಲಕುಡಿಯ ಪಾಲಂಗನಾಥಂ ರೈಲ್ವೆ ನಿಲ್ದಾಣದ ಸಮೀಪವಿರುವ ಹಳಿಗಳ ಮೇಲೆ ಮನ್ಸೂರ್ ಅಲಿ ಖಾನ್ ಮಲಗಿ ಮತಯಾಚನೆ ಮಾಡಿದ್ದರು. ಈ ವೇಳೆ ಅಲ್ಲಿಗೆ ಬಂದ ಆರ್ಪಿಎಫ್ ಅಧಿಕಾರಿಗಳು ತಕ್ಷಣ ಅವರನ್ನು ಹಳಿಗಳಿಂದ ಮೇಲೆಬ್ಬಿಸಿ ಅಲ್ಲಿಂದ ಕರೆದೊಯ್ದರು. ರೈಲ್ವೆ ಹಳಿಗಳ ಮೇಲೆ ಅತಿಕ್ರಮ ಪ್ರವೇಶ ಮಾಡುವುದು, ರೈಲು ಸಂಚಾರಕ್ಕೆ ಅಡ್ಡಿಪಡಿಸುವುದು ಮತ್ತು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ












Click it and Unblock the Notifications