ಸಲ್ಲುಗೆ ಮ್ಯಾರೇಜ್ ಬ್ಯೂರೋ ಬರ್ತಡೇ ವಿಶ್: ಹುಡುಗಿಯನ್ನು ಹುಡುಕಿ ಎಂದ ನೆಟ್ಟಿಗರು!
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಹುಟ್ಟಿದ ಹಬ್ಬವನ್ನು ಅವರ ಅಭಿಮಾನಿಗಳು ನಿನ್ನೆಯಷ್ಟೇ ಅದ್ಧೂರಿಯಾಗಿ ಆಚರಿಸಿದರು. ಅವರ ಹುಟ್ಟುಹಬ್ಬಕ್ಕೆ ದೊಡ್ಡ ದೊಡ್ಡ ಬ್ಯಾನರ್ಗಳು, ಫ್ಲೆಕ್ಸ್ಗಳನ್ನು ಹಾಕಿರುವುದು ಅಲ್ಲಲ್ಲಿ ಸಾಮಾನ್ಯವಾಗಿ ಕಂಡುಬಂದಿದೆ. ಎಲ್ಲಾ ವಯಸ್ಸಿನವರನ್ನು ಸೆಳೆಯುವ ಸಲ್ಮಾನ್ ಖಾನ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಹೀಗಾಗಿ ಅವರ ಹುಟ್ಟುಹಬ್ಬಕ್ಕೆ ನಾನಾ ಕಾರ್ಯಕ್ರಮಗಳು, ಪೂಜೆ ಪುನಸ್ಕಾರಗಳು ಹಾಗೂ ವಿಶೇಷವಾಗಿ ಬ್ಯಾನರ್ಗಳನ್ನು ಮಾಡಿಸಿದ್ದು ಕಂಡು ಬಂದಿದೆ. ಹೀಗೆ ಸಲ್ಲು ಬಾಯ್ ಹುಟ್ಟುಹಬ್ಬಕ್ಕೆ ಮ್ಯಾರೇಜ್ ಬ್ಯೂರೋವೊಂದು ಶುಭಾಶಯವನ್ನು ತಿಳಿಸಿದೆ. ಈ ವಿಶ್ನ್ನು ಫ್ಲೆಕ್ಸ್ ಮೂಲಕ ಮಾಡಿಸಲಾಗಿದ್ದು ನೋಡುಗರ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಹಾಸ್ಯಾಸ್ಪದವಾಗಿ ಕಾಮೆಂಟ್ ಮಾಡಿದ್ದಾರೆ.

ಅಷ್ಟಕ್ಕೂ ಆ ಮ್ಯಾರೇಜ್ ಬ್ಯೂರೋ ಫ್ಲೆಕ್ಸ್ನಲ್ಲಿ ಏನಿದೆ ಗೊತ್ತಾ?
ಹ್ಯಾಪಿ ಬರ್ತಡೆ
ಸಲ್ಮಾನ್ ಖಾನ್ (ಸಲ್ಲು)
ಪ್ರಖ್ಯಾತ ಚಲನಚಿತ್ರ ನಟ
ಶುಭ ಕೋರುವವರು
ಸುಮಂಗಳ ಮ್ಯಾರೇಜ್ ಬ್ಯೂರೋ
ಶೀಘ್ರ ವಿವಾಹಕ್ಕಾಗಿ ಸಂಪರ್ಕಿಸಿ
ಉರ್ವ, ಚಿಲಿಂಬಿ, ಮಂಗಳೂರು

ಎಂದು ಶುಭಾಶಯ ತಿಳಿಸಲಾಗಿದೆ. ಹೇಳಿ ಕೇಳಿ ಸಲ್ಮಾನ್ ಖಾನ್ಗೆ ಇನ್ನೂ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ಅವರು ಮದುವೆ ಯಾವಾಗ ಆಗ್ತಾರೆ ಅನ್ನೋದನ್ನು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ಸುಮಂಗಳ ಮ್ಯಾರೇಜ್ ಬ್ಯೂರೋ ಅವರಿಗೆ ಶುಭ ಕೋರಿದ್ದು ನಗಪಾಟಲಿಗೆ ಗುರಿಯಾಗಿದೆ. ಹೀಗಾಗಿ ನೆಟ್ಟಿಗರು ಸಲ್ಮಾನ್ ಖಾನ್ ಅವರಿಗೆ ಹುಡುಗಿಯನ್ನು ಹುಡುಕಿ ಎಂದು ಸುಮಂಗಳ ಮ್ಯಾರೇಜ್ ಬ್ಯೂರೋಗೆ ಸಲಹೆಯನ್ನು ನೀಡಿದ್ದಾರೆ. ಇದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications