Sirish Bharadwaj: ಮೆಗಾಸ್ಟಾರ್ ಚಿರಂಜೀವಿ ಮಗಳ ಮಾಜಿ ಗಂಡ ಸಾವು
ಮೆಗಾಸ್ಟಾರ್ ಚಿರಂಜೀವಿ ಅವರ ಮಗಳ ಮಾಜಿ ಗಂಡ ಶಿರೀಶ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ. ಶ್ರೀರೆಡ್ಡಿ ಎನ್ನುವ ಟ್ವಿಟ್ಟರ್ (ಎಕ್ಸ್) ಖಾತೆಯಲ್ಲಿ ಶಿರೀಶ್ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೋಸ್ಟ್ ಮಾಡುವ ಮೂಲಕ ಶಿರೀಶ್ ಭಾರದ್ವಾಜ್ ನಿಧನದ ಸುದ್ದಿಯನ್ನು ಅಧೀಕೃತವಾಗಿ ತಿಳಿಸಲಾಗಿದೆ.
ಶಿರೀಶ್ ಭಾರದ್ವಾಜ್ 2007ರಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಪುತ್ರಿ ಶ್ರೀಜಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು. ಶ್ರೀಜಾ ಹಾಗೂ ಶಿರೀಶ್ ಅವರ ಮದುವೆಗೆ ಚಿರಂಜೀವಿ ಅವರ ಕುಟುಂಬ ಒಪ್ಪಿಕೊಂಡಿರಲಿಲ್ಲ. ಇವರಿಬ್ಬರ ಪ್ರೀತಿಗೆ ಮನೆಯವರ ತೀವ್ರ ವಿರೋಧವಿತ್ತು. ಹೀಗಾಗಿ 2007ರಲ್ಲಿ ಶ್ರೀಜಾ ಮನೆ ಬಿಟ್ಟು ಹೋಗಿ ಶಿರೀಶ್ ಭಾರದ್ವಾಜ್ ಅವರನ್ನು ಮದುವೆಯಾಗಿದ್ದರು. ಆದರೆ ಈ ಸಂಬಂಧ ಹೆಚ್ಚು ದಿನ ಉಳಿಯಲಿಲ್ಲ.

ತಮ್ಮೊಳಗಿನ ಭಿನ್ನಾಭಿಪ್ರಾಯದಿಂದ 2014ರಲ್ಲಿ ಶ್ರೀಜಾ ಮತ್ತು ಶಿರೀಶ್ ಭಾರದ್ವಾಜ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿತ್ತು. ಬಳಿಕ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇಧನ ಪಡೆದುಕೊಂಡರು. ಡಿವೋರ್ಸ್ ಬಳಿಕ ಶಿರೀಶ್ ಭಾರದ್ವಾಜ್ ಮರು ಮದುವೆಯಾಗಿದ್ದರು. ಜೀವನ ಸರಿ ಹೋಯಿತು ಎನ್ನುವಷ್ಟರಲ್ಲಿ ಶಿರೀಶ್ ಭಾರದ್ವಾಜ್ಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಶಿರೀಶ್ ಭಾರದ್ವಾಜ್ಗೆ ಮೊದಲು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಬಳಿಕ ಶ್ವಾಸಕೋಶದ ಕ್ಯಾನ್ಸರ್ ಖಚಿತವಾಗಿತ್ತು. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶಿರೀಶ್ ಕ್ಯಾನ್ಸರ್ ರೋಗದಿಂದ ಬಳಲಿ, ನೀಡಿದ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರೀಶ್ ಭಾರದ್ವಾಜ್ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಇನ್ನು ಶಿರೀಶ್ ಭಾರದ್ವಾಜ್ ಅವರಿಂದ ವಿಚ್ಛೇದನ ಪಡೆದ ಬಳಿಕ ಮೆಗಾಸ್ಟಾರ್ ಕಿರಿಯ ಪುತ್ರಿ ಶ್ರೀಜಾ ಮತ್ತೆ 2016ರಲ್ಲಿ ಉದ್ಯಮಿ ಕಲ್ಯಾಣ್ ದೇವ್ ಜೊತೆ ಎರಡನೇ ಮದುವೆ ಆಗಿದ್ದರು. ಆದರೆ ಈ ದಾಂಪತ್ಯದಲ್ಲೂ ಈಗ ಬಿರುಕು ಮೂಡಿದ್ದು ಸದ್ಯ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications