ಮೇಘನಾ ರಾಜ್ 2ನೇ ಮದುವೆ ವಿಚಾರ, ಆ ವ್ಯಕ್ತಿ ಒಪ್ಪಿದರೆ ಮದುವೆ ಫಿಕ್ಸ್... Meghana Raj
ಮೇಘನಾ ರಾಜ್ ಅವರು ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡ ನಂತರ ಮತ್ತೊಂದು ಮದುವೆಯನ್ನ ಆಗುತ್ತಾರೆ ಅಂತಾ ದೊಡ್ಡ ಚರ್ಚೆ ನಡೆಯುತ್ತಿತ್ತು. ಅದರಲ್ಲೂ ಕೆಲವರಿಗೆ ಈ ಬಗ್ಗೆ ನಟಿ ಮೇಘನಾ ರಾಜ್ ಅವರು ವಾರ್ನಿಂಗ್ ಕೂಡ ಕೊಟ್ಟಿದ್ದರು. ಮತ್ತೊಂದು ಕಡೆ ಮೇಘನಾ ರಾಜ್ 2ನೇ ಮದುವೆ ವಿಚಾರ ಭಾರಿ ದೊಡ್ಡ ಚರ್ಚೆಗೆ ವೇದಿಕೆ ಕೂಡ ಒದಗಿಸಿತ್ತು. ಹೀಗಿದ್ದಾಗಲೇ, ಮೇಘನಾ ರಾಜ್ 2ನೇ ಮದುವೆ ವಿಚಾರ, ಆ ವ್ಯಕ್ತಿ ಒಪ್ಪಿದರೆ ಮದುವೆ ಫಿಕ್ಸ್...
ಕನ್ನಡ ಸಿನಿಮಾ ರಂಗದಲ್ಲಿ ಮೇಘನಾ ರಾಜ್ ಅವರು ದೊಡ್ಡ ಹವಾ ಎಬ್ಬಿಸಿದ್ದರು, ತಮ್ಮ ಮನೋಜ್ಞ ಅಭಿನಯ ಹಾಗೂ ಸ್ಕ್ರೀನ್ ಪ್ರೆಸೆನ್ಸ್ ಮೂಲಕ ಕ್ವೀನ್ ಅಂತಾನೇ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದರು ನಟಿ ಮೇಘನಾ ರಾಜ್ ಅವರು. ಇಂತಹ ಸಮಯದಲ್ಲೇ, ಮೇಘನಾ ರಾಜ್ ಅವರು ಚಿರಂಜೀವಿ ಸರ್ಜಾರ ಜೊತೆ ಪ್ರೀತಿಯಲ್ಲಿ ಬಿದ್ದು ಮದುವೆ ಕೂಡ ಆಗಿದ್ದರು. ಹೀಗೆ ಇಬ್ಬರೂ ಮದುವೆ ಆದ ನಂತರ ಕರ್ನಾಟಕ ಪೂರ್ತಿ ಸಂಭ್ರಮ ಕೂಡ ವ್ಯಕ್ತಪಡಿಸಿತ್ತು. ಆದರೆ ಯಾರದ್ದೋ ದೃಷ್ಟಿ ತಾಗಿ, ಕೊನೆಗೆ ಘೋರ ದುರಂತವೂ ನಡೆದು ಹೋಗಿತ್ತು...

ಮೇಘನಾ ರಾಜ್ 2ನೇ ಮದುವೆ ವಿಚಾರ...
ಮೇಘನಾ ರಾಜ್ ಅವರು 2ನೇ ಮದುವೆ ಆಗುತ್ತಾರಾ? ಅನ್ನೋ ವಿಚಾರ ಪದೇ ಪದೇ ಚರ್ಚೆಗೆ ಬರ್ತಾನೆ ಇದೆ. ಮೇಘನಾ ರಾಜ್ ಅವರು ಚಿರಂಜೀವಿ ಸರ್ಜಾ ಅವರನ್ನ 2018ರಲ್ಲಿ ಮದುವೆ ಆಗಿದ್ದರು, ಆದರೆ ವಿಧಿ ಅವರ ಜೀವನದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಚಿರಂಜೀವಿ ಸರ್ಜಾ ಅವರು 2020 ಜೂನ್ 7 ಭಾನುವಾರದ ದಿನ ತಮ್ಮ 39ನೇ ವಯಸ್ಸಿನಲ್ಲಿ ಜೀವ ಬಿಟ್ಟಿದ್ದರು. ಹೀಗಿದ್ದಾಗಲೇ, ಮೇಘನಾ ರಾಜ್ 2ನೇ ಮದುವೆ ವಿಚಾರ, ಆ ವ್ಯಕ್ತಿ ಒಪ್ಪಿದರೆ ಮದುವೆ ಫಿಕ್ಸ್...
2ನೇ ಮದುವೆ ವಿಚಾರ ಪ್ರಸ್ತಾಪದ ಬಗ್ಗೆ...
ನಟಿ ಮೇಘನಾ ರಾಜ್ ಅವರು ತಮ್ಮ 2ನೇ ಮದುವೆ ಬಗ್ಗೆ ಈಗ ಮಹತ್ವದ ಹೇಳಿಕೆಯನ್ನು ನೀಡಿದ್ದು, '2ನೇ ಮದುವೆ ಬಗ್ಗೆ ಜನ ಏನು ಆಲೋಚಿಸುತ್ತಾರೆ ಎಂದು ನಾನು ಯೋಚಿಸಲ್ಲ ಎಂದಿದ್ದಾರೆ. 'ಯಾವುದಾದರೂ ವ್ಯಕ್ತಿ ನನ್ನ ಜೀವನದಲ್ಲಿ ಬರುತ್ತಾರೋ ಗೊತ್ತಿಲ್ಲ. ಚಿರುಗೆ ಈ ವ್ಯಕ್ತಿ ಸರಿ ಅಂತಾ ಅನಿಸಿದರೆ ಆಗ ಚಿರು ಅದನ್ನ ಮಾಡಿಸುತ್ತಾರೆ. ಯಾವ ವ್ಯಕ್ತಿಯೂ ಸರಿ ಇಲ್ಲ ಅಂತಾ ಅನಿಸಿದರೆ ಚಿರು ಕಳಿಸೋದೆ ಇಲ್ಲ. ಆಗ ನಾನು ಹೀಗೇ ಇದ್ದು ಬಿಡುತ್ತೇನೆ' ಎನ್ನುವ ಮೂಲಕ ನಟಿ ಮೇಘನಾ ರಾಜ್ ತಮ್ಮ 2ನೇ ಮದುವೆಯ ಬಗ್ಗೆ ಮಾತನಾಡಿದ್ದೂ ಅಲ್ಲದೆ, ಚಿರು ಅಂದ್ರೆ ಚಿರಂಜೀವಿ ಅವರನ್ನ ಈಗಲೂ ಎಷ್ಟು ಪ್ರೀತಿ ಮಾಡುತ್ತಾರೆ ಎಂಬುದನ್ನ ತಿಳಿಸಿದ್ದಾರೆ. ಈ ಮೂಲಕ ನಟಿ ಮೇಘನಾ ರಾಜ್ ಅವರು ಇದೀಗ ತಮ್ಮ 2ನೇ ಮದುವೆ ಚರ್ಚೆಗೂ ಮುಕ್ತಿ ಹಾಡಿದ್ದಾರೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications