ಸ್ಟಾರ್ ನಟನ ಸಿನಿಮಾ ಶೂಟಿಂಗ್ ವೇಳೆ 'ಮಿಲನ' ನಟಿ ಪಾರ್ವತಿಗೆ ಕೆಟ್ಟ ಅನುಭವ
ನಟ ಪುನೀತ್ ರಾಜ್ಕುಮಾರ್ ಅವರ 'ಮಿಲನ' ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ಪಾರ್ವತಿ ತಿರುವೊತ್ತು (Parvathy Thiruvothu), ಕನ್ನಡದ ಕೆಲವೇ ಸಿನಿಮಾಗಳಲ್ಲಿ ನಟಿಸಿದ್ದರೂ ಅಪಾರ ಜನಪ್ರಿಯತೆ ಹೊಂದಿದ್ದಾರೆ. ಮೂಲತಃ ಮಲಯಾಳಂ ಚಿತ್ರರಂಗದವರಾದ ಪಾರ್ವತಿ, ಚಿತ್ರರಂಗದಲ್ಲಿ ತಮಗೆ ಆದ ಕಹಿ ಅನುಭವವೊಂದನ್ನು ಬಹಿರಂಗಪಡಿಸಿದ್ದಾರೆ. ಸ್ಟಾರ್ ನಟನ ಸಿನಿಮಾ ಶೂಟಿಂಗ್ ವೇಳೆ ಈ ಘಟನೆ ನಡೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.
ಕನ್ನಡದ ಸೂಪರ್ಹಿಟ್ ಸಿನಿಮಾ 'ಮಿಲನ' ನಟಿಯೆಂದೇ ಪ್ರೇಕ್ಷಕರಿಗೂ ಪರಿಚಿತರಾಗಿರುವ ಪಾವರ್ತಿ ಅವರು ಚಿತ್ರರಂಗದಲ್ಲಿರುವ ಸಂವೇದನಾಶೀಲವಲ್ಲದ ಕೆಲಸದ ವಾತಾವರಣದ ಬಗ್ಗೆ ಆತಂಕಕಾರಿ ಅನುಭವವನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಾನು ತಮಿಳು ಖ್ಯಾತ ನಟ ಧನುಷ್ ಅಭಿನಯದ ಚಿತ್ರದ ಶೂಟಿಂಗ್ ವೇಳೆ ನಡೆದ ಘಟನೆ ಬಿಚ್ಚಿಟ್ಟಿದ್ದಾರೆ. ಅವರ ಮಾತುಗಳು ಮಹಿಳಾ ಕಲಾವಿದರ ಸುರಕ್ಷತೆ, ಆರೋಗ್ಯ ಮತ್ತು ಗೌರವದ ಬಗ್ಗೆ ಚರ್ಚೆಗೆ ಗ್ರಾಸವಾಗಿವೆ.

'ಪಿರಿಯಡ್ಸ್ ಆಗಿದ್ರೂ ಕೇಳಲಿಲ್ಲ'
'ನಟಿ ಪಾರ್ವತಿ ಹೇಳುವಂತೆ, ಆ ಚಿತ್ರದ ಶೂಟಿಂಗ್ ಸಮಯದಲ್ಲಿ ಒಂದು ದೃಶ್ಯಕ್ಕಾಗಿ ದಿನವಿಡೀ ತಮ್ಮ ಮೇಲೆ ನಿರಂತರವಾಗಿ ನೀರನ್ನು ಸುರಿಯಲಾಗುತ್ತಿತ್ತು. ಈ ವೇಳೆ ತಾವು ಮಾಸಿಕ ಋತುಚಕ್ರ (ಪಿರಿಯಡ್ಸ್) ಎದುರಿಸಿದ್ದರಿಂದ ತೀವ್ರ ಮುಜುಗರ ಉಂಟು ಮಾಡಿತ್ತು ಎಂದಿದ್ದಾರೆ. ಅದಕ್ಕಿಂತಲೂ ಕಷ್ಟಕರ ಸಂಗತಿ ಎಂದರೆ, ಆ ದಿನಕ್ಕೆ ಅವರು ಹೆಚ್ಚುವರಿ ಬಟ್ಟೆಗಳನ್ನು ತಂದುಕೊಂಡಿರಲಿಲ್ಲ' ಎಂದು ವಿವರಿಸಿದ್ದಾರೆ.
'ಕೋಪದಿಂದ ಜೋರಾಗಿ ಕೂಗಿದೆ'
'ಈ ಬಗ್ಗೆ ಸಿನಿಮಾ ನಿರ್ದೇಶಕರ ಬಳಿ ತಮ್ಮ ಸಮಸ್ಯೆ ತಿಳಿಸಿ, ಹೋಟೆಲ್ಗೆ ಹೋಗಿ ಬಟ್ಟೆ ಬದಲಿಸಿ ಬರಲು ಅನುಮತಿ ಕೇಳಿದೆ. ಆದರೆ, ಅವರು ಸಮಯವಿಲ್ಲ, ಶೂಟಿಂಗ್ ತಕ್ಷಣ ಮುಗಿಸಬೇಕು ಎಂದು ಹೇಳಿ ನಿರ್ದೇಶಕರು ಗದರಿದ್ದರು ಎಂದು ಪಾರ್ವತಿ ತಮ್ಮ ಕೆಟ್ಟ ಅನುಭವ ವಿವರಿಸಿದ್ದಾರೆ. ಅಲ್ಲದೆ ಈ ಘಟನೆಯಿಂದ ನಾನು ಅಸ್ವಸ್ಥತೆ ಮತ್ತು ಅಸಹಾಯತೆ ಅನುಭವಿಸಿದ್ದಾಗಿ ಹೇಳಿದ್ದಾರೆ. ಆ ಸೆಟ್ನಲ್ಲಿ ಮಹಿಳೆಯರು ಕೆಲವೇ ಮಂದಿ ಇದ್ದರು. ಕೊನೆಗೆ ಸಹಿಸಲಾಗದೆ, ಕೋಪ ಮತ್ತು ನೋವಿನಿಂದ "ನನಗೆ ಪಿರಿಯಡ್ಸ್ ಆಗಿದೆ!" ಎಂದು ಜೋರಾಗಿ ಕೂಗಬೇಕಾದ ಪರಿಸ್ಥಿತಿ ಎದುರಾಯಿತು' ಎಂದಿದ್ದಾರೆ.
ಈ ಘಟನೆ ಕುರಿತು ಮಾತನಾಡುತ್ತಾ, 'ಸಮಾಜದಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಪಿರಿಯಡ್ಸ್ ವಿಷಯವನ್ನು ಅಡಗಿಸಿಕೊಳ್ಳಬೇಕಾದ ಪರಿಸ್ಥಿತಿ ಇನ್ನೂ ಮುಂದುವರಿದಿದೆ. ಇದು ಏಕೆ ಎಂದು ಪ್ರಶ್ನಿಸಿದ್ದಾರೆ. ಪಿರಿಯಡ್ಸ್ ಒಂದು ಸಹಜ ಪ್ರಕ್ರಿಯೆ. ಆದರೆ ಅದನ್ನು ಹೇಳಲು ಹೆದರಬೇಕಾದ ಅಥವಾ ನಾಚಿಕೆಪಡಬೇಕಾದ ವಾತಾವರಣ ಇನ್ನೂ ಇದೆ. ಅನೇಕ ಮಹಿಳೆಯರು ಭಯದಿಂದ ತಮ್ಮ ದೈಹಿಕ ಸಮಸ್ಯೆಗಳನ್ನು ಮೌನವಾಗಿ ಸಹಿಸಿಕೊಳ್ಳುತ್ತಾರೆ. ಇದು ಚಿತ್ರರಂಗದಲ್ಲಿ ಮಾತ್ರವಲ್ಲ, ಬಹುತೇಕ ಎಲ್ಲ ಕೆಲಸದ ಸ್ಥಳಗಳಲ್ಲಿ ಇರುವ ದೊಡ್ಡ ಸಮಸ್ಯೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಟಿಯ ಈ ಬಹಿರಂಗ ಹೇಳಿಕೆ, ಚಿತ್ರರಂಗದಲ್ಲಿ ಮಹಿಳಾ ಸ್ನೇಹಿ ವಾತಾವರಣ, ಆರೋಗ್ಯ ಸಂಬಂಧಿತ ಸಂವೇದನೆ ಮತ್ತು ಗೌರವಪೂರ್ಣ ಕೆಲಸದ ವಾತಾವರಣ ಎಷ್ಟು ಅಗತ್ಯ ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ. ಪಾರ್ವತಿ ಅವರ ಈ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಅನೇಕರು ಅವರ ಧೈರ್ಯವನ್ನು ಶ್ಲಾಘಿಸುತ್ತಿದ್ದಾರೆ. ಜೊತೆಗೆ, ಮಹಿಳೆಯರ ಆರೋಗ್ಯ ಮತ್ತು ಗೌರವಕ್ಕೆ ಸಂಬಂಧಿಸಿದಂತೆ ಚಿತ್ರರಂಗ ಇನ್ನಷ್ಟು ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.
-
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Prem controversy: ಅಸಹ್ಯ ಆಗ್ತಿದೆ ಪ್ರೇಮ್, ಎಲ್ಲಿ ಹೋದ್ರು ವಕೀಲರು: ಕೆಡಿ ಹಾಡಿನ ವಿರುದ್ಧ ತಣಿಯದ ಆಕ್ರೋಶ -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications