ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಸಚಿವ ಎಂ.ಬಿ ಪಾಟೀಲ
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಟಿಸಿರುವ ಕಾಂತಾರ- ಚಾಪ್ಟರ್ 1 ಸಿನಿಮಾಕ್ಕೆ ಸರ್ಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ ಡಿಎಲ್) ಸುಗಂಧ ಭಾಗಿದಾರ (ಫ್ರ್ಯಾಗ್ರನ್ಸ್ ಪಾರ್ಟನರ್) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗವು ಸ್ಯಾಂಡಲ್ ವುಡ್ ಎಂದೇ ಹೆಸರಾಗಿದೆ. ಹಾಗೆಯೇ ಕೆಎಸ್ಡಿಎಲ್ ಸಂಸ್ಥೆಯು ಸ್ಯಾಂಡಲ್ ಸೋಪ್ ಮತ್ತು ಗಂಧದ ಎಣ್ಣೆಗೆ ಹೆಸರಾಗಿದೆ. ಈಗ ಸಂಸ್ಥೆ ಮತ್ತು ಸ್ಯಾಂಡಲ್ ವುಡ್ ಚಿತ್ರತಂಡದ ನಡುವೆ ಒಪ್ಪಂದ ಆಗಿದೆ. ಚಿತ್ರತಂಡವು ತನ್ನ ಪ್ರತೀ ಪ್ರದರ್ಶನದಲ್ಲೂ ಕೆಎಸ್ಡಿ ಎಲ್ ಉತ್ಪನ್ನಗಳಿಗೆ ಪ್ರಚಾರ ನೀಡಲಿದೆ ಎಂದಿದ್ದಾರೆ.

ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳಂ, ಇಂಗ್ಲಿಷ್ ಅಲ್ಲದೆ ಸ್ಪ್ಯಾನಿಷ್ ಹೀಗೆ 7 ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಚಿತ್ರ ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇಂತಹ ಚಿತ್ರತಂಡದ ಜತೆ ಕೆಎಸ್ ಡಿಎಲ್ ಕೈಜೋಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೆಎಸ್ಡಿಎಲ್ ಕಳೆದ ನೂರಾಹತ್ತು ವರ್ಷಗಳಿಂದಲೂ ಕರ್ನಾಟಕದ ಪರಂಪರೆ ಮತ್ತು ಅಸ್ಮಿತೆಯನ್ನು ಪ್ರತಿನಿಧಿಸುತ್ತಿರುವ ಬ್ರ್ಯಾಂಡ್ ಆಗಿದೆ ಎಂದು ಅವರು ಹೇಳಿದ್ದಾರೆ.
ಎರಡು ವರ್ಷಗಳಿಂದ ಈಚೆಗೆ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು ಹೊಂದಿದೆ. ಜೊತೆಗೆ ರಫ್ತು ವಹಿವಾಟಿಗೆ ಒತ್ತು ನೀಡಿದ್ದು, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಪ್ರಚಾರ ಮತ್ತು ಅತ್ಯುತ್ಕೃಷ್ಟತೆಗೆ ಗಮನ ಹರಿಸಿದೆ. ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳಲಾಗಿದೆ. ಇದರಿಂದ ಅಖಿಲ ಭಾರತ ಮಟ್ಟದಲ್ಲಿ ಹೊಸ ತಲೆಮಾರಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಈಗ ಕಾಂತಾರ ತಂಡದ ಜತೆ ಸಂಸ್ಥೆಯು ಕೈಜೋಡಿಸುತ್ತಿದ್ದು, ತನ್ನ ಉತ್ಪನ್ನಗಳ ಮಾರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶ ಈಡೇರಲಿದೆ ಎಂದು ಅವರು ತಿಳಿಸಿದ್ದಾರೆ.
ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, ಶತಮಾನಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಸಂಸ್ಥೆಯ ಮೈಸೂರು ಸ್ಯಾಂಡಲ್ ಸೋಪ್ ಒಂದು ವಿಶ್ವಾಸಾರ್ಹ ಬ್ರ್ಯಾಂಡ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೊಂದಿದೆ. ಜನಪ್ರಿಯ ಮಾಧ್ಯಮವಾಗಿರುವ ಸಿನಿಮಾ ಮೂಲಕ ನಾವು ಜನರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಲು ಸಾಧ್ಯವಾಗಲಿದೆ ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications