Bhama Kurup: ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನಕ್ಕೆ ಗುಡ್ ಬೈ: ಪತಿಯಿಂದ ದೂರಾದ ನಟಿ ಭಾಮಾ
ಬಹುಭಾಷಾ ನಟಿ ಭಾಮಾ ಕುರುಪ್ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿರುವ ಬಗ್ಗೆ ಖಚಿತಪಡಿಸಿದ್ದಾರೆ. ಇತ್ತೀಚಿಗೆ ಪತಿಯಿಂದ ದೂರವಿದ್ದ ನಟಿ ಭಾಮಾ, ಇದೀಗ ಪತಿಯಿಂದ ಸಂಪೂರ್ಣ ದೂರವಾಗಿರುವ ಬಗ್ಗೆ ಅಧೀಕೃತವಾಗಿ ತಿಳಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಗುವಿನ ಜೊತೆಗಿರುವ ಫೋಟೋ ಹಂಚಿಕೊಂಡಿರುವ ನಟಿ ಭಾಮಾ, 'ನಾನು ಎಷ್ಟು ಬಲಶಾಲಿ ಎಂದು ನನಗೆ ತಿಳಿದಿರಲಿಲ್ಲ. ನಾನು ಸಿಂಗಲ್ ಮದರ್ ಆಗುವವರೆಗೂ ಇದು ಗೊತ್ತಿರಲಿಲ್ಲ. ಸ್ಟ್ರಾಂಗ್ ಆಗಿರುವುದು ಸದ್ಯದ ನನ್ನ ಏಕೈಕ ಆಯ್ಕೆಯಾಗಿದೆ. ಮೀ ಆ್ಯಂಡ್ ಮೈ ಗರ್ಲ್' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಟಿವಿ ನಿರೂಪಕಿಯಾಗಿ ತೆರೆ ಮೇಲೆ ಬಂದ ನಟಿ ಭಾಮಾ ಕುರುಪ್, ನಿರ್ದೇಶಕ ಲೋಹಿತ್ ದಾಸ್ ಅವರ ನಿವೇದ್ಯಂ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದರು. ಮಾಲಿವುಡ್ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹಾಗೂ ಜನಪ್ರಿಯತೆ ಪಡೆದಿರುವ ನಟಿ ಭಾಮಾ , ಕನ್ನಡ ಚಿತ್ರರಂಗದಲ್ಲಿಯೂ ಮಿಂಚಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಮೊದಲಾ ಸಲ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಶೈಲೂ ಹಾಗೂ ಮಿತ್ರ ಅವರ ರಾಗ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಭಾಮಾ ಕುರುಪ್ ಅವರು ನಾಲ್ಕು ವರ್ಷದ ಹಿಂದೆ 2020ರಲ್ಲಿ ಉದ್ಯಮಿ ಅರುಣ್ ಜಗದೀಶ್ ಎನ್ನುವರನ್ನು ವಿವಾಹವಾಗಿದ್ದರು. ಮದುವೆ ಬಳಿಕ ಭಾಮಾ ನಟನೆ ತೊರೆದು ಪತಿಯೊಂದಿಗೆ ಉದ್ಯಮಕ್ಕಿಳಿಯುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇನ್ನು ಇತ್ತೀಚಿಗೆ ನಟಿ ಭಾಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿದ್ದ ಪತಿಯ ಫೋಟೋಗಳನ್ನು ತೆಗೆದು ಹಾಕಿದ್ದರು. ಅಲ್ಲದೇ ತಮ್ಮದೇ ಉದ್ಯಮ ಆರಂಭಿಸಿದ್ದರು. ಇದೀಗ ಪತಿಯಿಂದ ದೂರಾದ ಬಗ್ಗೆ ನಟಿ ಭಾಮಾ ಕುರುಪ್ ಅಧೀಕೃತವಾಗಿ ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications