Mohanlal: ಮಲಯಾಳಂ ನಟ ಮೋಹನ್ಲಾಲ್ ಆಸ್ಪತ್ರೆಗೆ ದಾಖಲು
ಖ್ಯಾತ ಮಲಯಾಳಂ ನಟ ಮೋಹನ್ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಇತರೆ ರೋಗಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಕೊಚ್ಚಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನಿಡಲಾಗುತ್ತಿದೆ. ವೈದ್ಯಕೀಯ ಹೇಳಿಕೆಯ ಪ್ರಕಾರ, ಮೋಹನ್ಲಾಲ್ ಅವರಿಗೆ ಉಸಿರಾಟದ ಸೋಂಕು ಇರಬಹುದು ಎಂದು ಶಂಕಿಸಲಾಗಿದೆ.
ಚಿತ್ರರಂಗದ ಬಗ್ಗೆ ಅಪ್ಡೇಟ್ ನೀಡುವ ಶ್ರೀಧರ್ ಪಿಳ್ಳೈ ಎನ್ನುವವರು ಮೋಹನ್ಲಾಲ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, 64 ವರ್ಷದ ಹಿರಿಯ ನಟ ಮೋಹನ್ಲಾಲ್ ಅವರಿಗೆ ಐದು ದಿನಗಳ ಕಾಲ ಸಾರ್ವಜನಿಕ ಸಂವಹನ ತಪ್ಪಿಸಲು ಮತ್ತು ಕೊಟ್ಟಿರುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ.

'ಲೂಸಿಫರ್ 2: ಎಂಪುರಾನ್' ಚಿತ್ರೀಕರಣವನ್ನು ಮುಗಿಸಿದ ನಂತರ ಮತ್ತು ಅವರ ನಿರ್ದೇಶನದ ಚೊಚ್ಚಲ 'ಬರೋಜ್' ನ ನಿರ್ಮಾಣದ ನಂತರ, ಮೋಹನ್ ಲಾಲ್ ಗುಜರಾತ್ನಿಂದ ಕೊಚ್ಚಿಗೆ ಮರಳಿದರು, ಅಲ್ಲಿ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತು. ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ ನಟನ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಬಿಡುಗಡೆಗೆ ಸಿದ್ದವಾದ ಬರೋಜ್
ಅಕ್ಟೋಬರ್ 2ರಂದು ಮೋಹನ್ ಲಾಲ್ ಅವರ ನಿರ್ದೇಶನದ ಮೊದಲ ಸಿನಿಮಾ ಬರೋಜ್ ಬಿಡುಗಡೆಯಾಗಲಿದೆ. ಇದು ಹಿರಿನ ನಟ ಮೋಹನ್ಲಾಲ್ ಅವರ ಮೊದಲ ನಿರ್ದೇಶನದ ಸಿನಿಮಾವಾಗಿದ್ದು, ಹೆಚ್ಚಿನ ಕುತೂಹಲ ಕೆರಳಿಸಿದೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral











Click it and Unblock the Notifications