Mungaru Male: 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದೆ 'ಮುಂಗಾರು ಮಳೆ' ಜೋಡಿ
ಬೆಂಗಳೂರು, ಜೂನ್. 09: 'ಮುಂಗಾರು ಮಳೆ' ಕನ್ನಡ ಸಿನಿಮಾ ರಂಗಕ್ಕೆ ಕೊಟ್ಟ ಕೊಡುಗೆ ಅಷ್ಟಿಷ್ಟಲ್ಲ. ಎವರ್ಗ್ರೀನ್ ಸಿನಿಮಗಳ ಪಟ್ಟಿಯಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಹೊಸ ಅಲೆ ಸೃಷ್ಟಿಸಿದ ಸಿನಿಮಾಗಳಲ್ಲಿ ಮುಂಗಾರು ಮಳೆಗೆ ದೊಡ್ಡ ಸ್ಥಾನವಿದೆ. ಸಿನಿಮಾದ ಹಾಡುಗಳು ಇಂದಿಗೂ ಹಲವರು ಗುನುಗುತ್ತಾರೆ.
ಕನ್ನಡ ಸಿನಿಮಾ ರಂಗದಲ್ಲಿ ಗೋಲ್ಡನ್ ಹಿಟ್ ಮುಂಗಾರು ಮಳೆಯು ಗಣೇಶ್ ಅವರನ್ನು ಗೋಲ್ಡನ್ ಸ್ಟಾರ್ ಮಾಡಿದೆ. ನಟಿ ಪೂಜಾ ಗಾಂಧಿ ಅವರನ್ನು ಸ್ಯಾಂಡಲ್ವುಡ್ಗೆ ಪರಿಚಯಿಸಿತು. ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಮತ್ತಷ್ಟು ಹಿಟ್ ಆದರು. ಈಗ ಸಿನಿಮಾ ಬಿಡುಗಡೆಯಾಗಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.

16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದೆ ಮುಂಗಾರು ಮಳೆ ಜೊಡಿ
ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಹೊಸ ಚಿತ್ರವೊಂದಕ್ಕೆ ಈ ಹಿಟ್ ಜೋಡಿ ಸಿದ್ಧರಾಗುತ್ತಿದ್ದು, ತಮ್ಮ ಮುಂದಿನ ಸಿನಿಮಾಕ್ಕೆ ಮತ್ತೆ ಹೊಸ ಮುಖಗಳನ್ನು ಪರಿಚಯಿಸುವ ಕೆಲಸದಲ್ಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ.
ನಟ ಗಣೇಶ್ ಅಭಿನಯದ 'ಮುಂಗಾರು ಮಳೆ' ಕನ್ನಡ ಚಲನಚಿತ್ರೋದ್ಯಮದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತು. ಮೊದಲಿಗೆ ಎಲ್ಲರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಿನಿಮಾ ಬಾಯಿ ಮಾತಿನಿಂದಲೇ ಜನರು ಪ್ರಚಾರ ನೀಡಿದ್ದರು. ದಿನ ಕಳೆದಂತೆ ಪ್ರದರ್ಶನಗಳು ಹೆಚ್ಚಾದವಿ, ಸಿನಿಮಾ ಮಂದಿರಗಳ ಸಂಖ್ಯೆ ಹೆಚ್ಚಾಯಿತು.

ಇನ್ನು, ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ಉಡೀಸ್ ಮಾಡಡಿದ ಮುಂಗಾರು ಮಳೆ ಒಂದು ಮಲ್ಟಿಪ್ಲೆಕ್ಸ್ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಓಡಿದ ಭಾರತದ ಮೊದಲ ಚಲನಚಿತ್ರವಾಗಿ ಇದು ಇತಿಹಾಸವನ್ನು ನಿರ್ಮಿಸಿತು. ಕನ್ನಡ ಸಿನಿಮಾವನ್ನೇ ನೋಡದ ಅನೇಕ ಬೆಂಗಳೂರಿಗರು ಮುಂಗಾರು ಮಳೆಯಲ್ಲಿ ನೆಂದಿದ್ದು ಇತಿಹಾಸವೇ ಸರಿ.
ಎಲ್ಲಾ ಅಡೆತಡೆಗಳನ್ನು ಮುರಿದು, ಇದು ದಕ್ಷಿಣ ಭಾರತದ ಚಿತ್ರರಂಗಕ್ಕೆ ಒಂದು ಮೈಲಿಗಲ್ಲು ಸ್ಥಾಪಿಸಿದ ಈ ಸಿನಿಮಾ ಹಲವು ಭಾಷೆಗಳಲ್ಲಿ ರಿಮೇಕ್ ಆಯಿತು. ಚಿತ್ರರಂಗದಲ್ಲಿ ವೃತ್ತಿ ಕಟ್ಟಿಕೊಳ್ಳಲು ಕಷ್ಟಪಡುತ್ತಿದ್ದ ಹಾಸ್ಯ ನಟ ಗಣೇಶ್ ಅವರನ್ನು 'ಗೋಲ್ಡನ್ ಸ್ಟಾರ್' ಪಟ್ಟಕ್ಕೆ ಏರಿಸಿ ಸ್ಯಾಂಡಲ್ವುಡ್ನಲ್ಲಿ ಗಟ್ಟಿ ನೆಲೆ ಒದಗಿಸಿತು.
ಇಂತಹ ಅದ್ಭುತ ಸೃಷ್ಟಿಸಿದ್ದ ನಿರ್ಮಾಪಕ ಈ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ 16 ವರ್ಷಗಳ ನಂತರ ಮತ್ತೆ ಇತಿಹಾಸ ಸೃಷ್ಟಿಸಲು ಮುಂದಾಗಿದ್ದಾರೆ. ಸದ್ಯ ಹೊಸ ಚಿತ್ರದ ಪ್ರಿ-ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿರುವ ನಿರ್ದೇಶಕರು ಇದೇ ತಿಂಗಳು ಚಿತ್ರೀಕರಣ ಆರಂಭಿಸುವ ಸಾಧ್ಯತೆಯಿದೆ. ಈ ಬಗ್ಗೆ ಅಧಿಕೃತ ಘೋಷಣೆಗಳು ಬಾಕಿಯಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications