Get Updates
Get notified of breaking news, exclusive insights, and must-see stories!

C.Ilaiyaraja: ಸಂಗೀತ ಮಾಂತ್ರಿಕ ಇಳಯರಾಜಗೆ ದೇವಸ್ಥಾನದಲ್ಲಿ ಅವಮಾನ, ಅಸಲಿ ವಿಚಾರವೇನು?

ಖ್ಯಾತ ಸಂಗೀತ ನಿರ್ದೇಶಕ ಹಾಗೂ ರಾಜ್ಯಸಭಾ ಸದಸ್ಯ ಇಳಯರಾಜ ಅವರ ಬಗ್ಗೆ ದೊಡ್ಡ ಸುದ್ದಿಯೊಂದು ಹರಿದಾಡುತ್ತಿದೆ. ಇಳಯರಾಜ ಅವರನ್ನು ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ ಮಾಡಲಾಗಿದೆ. ಈ ಮೂಲಕ ಅವರನ್ನು ದೇವಸ್ಥಾನದ ಅರ್ಚಕರು ಅವಮಾನ ಮಾಡಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್‌ ಆಗಿದೆ.

ತಮಿಳುನಾಡಿನ ಶ್ರೀವಿಲ್ಲಿಪುತ್ತೂರ್ ಆಂಡಾಳ್ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಇಳಯರಾಜ ಅವರನ್ನು ದೇವಸ್ಥಾನದ ಒಳಗೆ ಪ್ರವೇಶಕ್ಕೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಳಯರಾಜ ಅವರು ಶ್ರೀವಿಲ್ಲಿಪುತ್ತೂರಿನ ಆಂಡಾಳ್ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರನ್ನು ಅಲ್ಲಿನವರು ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

Music Director Ilaiyaraaja Denied Entry At Srivilliputhur Temple Sparks Controversy

ಆದರೆ ಇಳಯರಾಜ ಅವರು ದೇವಸ್ಥಾನದ ಒಳಗೆ ದೇವರನ್ನು ಪ್ರಾರ್ಥಿಸಲು ಮುಂದೆ ಹೋದಾಗ ಅವರನ್ನು ಅಲ್ಲಿನ ಅರ್ಚಕರು ತಡೆದಿದ್ದಾರೆ ಎಂದು ವರದಿಯಾಗಿದೆ. ದೇವಸ್ಥಾನದಲ್ಲಿನ ಪ್ರೋಟೋಕಾಲ್ ಬಗ್ಗೆ ಸ್ಪಷ್ಟನೆ ನೀಡಿದ್ದು, ಅರ್ಚಕರು ಮತ್ತು ಜೀಯರ್ ಹೊರತುಪಡಿಸಿ ಗರ್ಭಗುಡಿಗೆ ಹೋಗುವ ಒಳಗಿನ ಕೋಣೆಗೆ ಬೇರೆ ಯಾರಿಗೂ ಪ್ರವೇಶವಿಲ್ಲ ಎಂದು ತಿಳಿದುಬಂದಿದೆ.

ಜಾತಿ ಕಾರಣಕ್ಕೆ ಪ್ರವೇಶ ನಿರಾಕರಣೆ ವದಂತಿ: ಈ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಅಲ್ಲದೆ ಜಾತಿ ಕಾರಣಕ್ಕೆ ಇಳಯರಾಜ ಅವರನ್ನು ದೇಗುಲ ಪ್ರವೇಶಿಸದಂತೆ ತಡೆಲಾಗಿದೆ ಎಂದೂ ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹಬ್ಬಿತ್ತು. ಇದಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಮಾಜ ಕಲ್ಯಾಣ ಸಚಿವರಾದ ಎಚ್‌.ಸಿ.ಮಹದೇವಪ್ಪ ಕೂಡ ಖಂಡನೆ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

Music Director Ilaiyaraaja Denied Entry At Srivilliputhur Temple Sparks Controversy

ಸಂಗೀತ ಮಾಂತ್ರಿಕ, ಹಾಲಿ ರಾಜ್ಯಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರವೇಶ ಮಾಡಲು ನಿರಾಕರಿಸಿದ ಘಟನೆಯು ನಿಜಕ್ಕೂ ಅವಮಾನಕರ ಸಂಗತಿ, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು ಇನ್ನೂ ಜೀವಂತವಾಗಿದೆ ಎಂಬುದನ್ನು ಸಾರಿ ಹೇಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದವರ ಸ್ಥಿತಿಯೇ ಹೀಗಿದ್ದರೆ, ಸಾಮಾನ್ಯರಾಗಿ ಜೀವಿಸುತ್ತಿರುವ ಪರಿಶಿಷ್ಟ ಸಮುದಾಯಗಳ ಪರಿಸ್ಥಿತಿ ಏನಾಗಿರಬೇಕು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಮಹದೇವಪ್ಪ ಕೂಡ ಖಂಡಿಸಿದ್ದಾರೆ.

ಈ ವಿಚಾರದ ಬಗ್ಗೆ ಎಲ್ಲೆಡೆ ಸುದ್ದಿ ಹರಿದಾಡಿದ್ದರಿಂದ ಹಲವು ಕಥೆಗಳನ್ನು ಕಟ್ಟಲಾಗಿತ್ತು. ಈ ಬಗ್ಗೆ ದೇವಸ್ಥಾನದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಶ್ರೀವಿಲ್ಲಿಪುತ್ತೂರ್ ಆಂಡಾಳ್ ದೇವಸ್ಥಾನದ ಸಂಪ್ರದಾಯದಂತೆ ಅರ್ಚಕರು, ಮಠಾಧೀಶರು ಸೇರಿದಂತೆ ಅಧಿಕೃತ ಸಿಬ್ಬಂದಿಗೆ ಮಾತ್ರವೇ ಗರ್ಭಗುಡಿ ಅಥವಾ ಮಂಟಪದ ಬಳಿ ಪ್ರವೇಶಕ್ಕೆ ಅವಕಾಶವಿದೆ. ಈ ಕಾರಣದಿಂದಷ್ಟೇ ಇಳಯರಾಜ ಅವರನ್ನು ತಡೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಳಯರಾಜ ಜಾತಿ ವಿಚಾರವಾಗಿಯೂ ಎಲ್ಲೆಡೆ ಗಾಳಿ ಸುದ್ದಿಗಳು ಹರಿದಾಡಿದ್ದರಿಂದ ಖುದ್ದು ಇಳಯರಾಜ ಅವರೇ ಎಲ್ಲದಕ್ಕೂ ಸ್ಪಷ್ಟನೆ ನೀಡಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನನ್ನ ವಿಚಾರವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ನಾನು ಯಾವುದೇ ಸಮಯದಲ್ಲಿ ಯಾವುದೇ ಸ್ಥಳದಲ್ಲಿ ನನ್ನ ಸ್ವಾಭಿಮಾನವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಲ್ಲ. ನನ್ನ ವಿಚಾರದಲ್ಲಿ ನಡೆಯದೇ ಇರುವ ಘಟನೆಯನ್ನು ನಡೆದಿದೆ ಎನ್ನುವಂತೆ ಬಿಂಬಿಸಲಾಗಿದೆ. ನನ್ನ ಅಭಿಮಾನಿಗಳು ಹಾಗೂ ಜನರು ಈ ವದಂತಿಗಳನ್ನು ನಂಬಬೇಡಿ ಎಂದು ಇಳಯರಾಜ ಸ್ಪಷ್ಟನೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+