Manjummel Boys: 'ಕಣ್ಮಣಿ' ಎಂದು ಹಾಡಿದ 'ಮಂಜುಮ್ಮೆಲ್ ಬಾಯ್ಸ್'ಗೆ ಸಂಕಷ್ಟ
ತಿರುವನಂತಪುರಂ, ಮೇ. 24: ಈ ವರ್ಷ ಬಿಡುಗಡೆಯಾಗಿ ಕೋಟ್ಯಾಂತರ ರೂಪಾಯಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡ ಮಲಯಾಳಂ ಸಿನಿಮಾ ಮಂಜುಮ್ಮೆಲ್ ಬಾಯ್ಸ್. ಈ ಸಿನಿಮಾ ಹಿಟ್ ಆಗಲು ಕಮಲ್ ಹಾಸನ್ ಅಭಿನಯದ 'ಗುಣ' (1991) ಸಿನಿಮಾದ 'ಕಣ್ಮಣಿ ಅನ್ಬೋದು' ಹಾಡು ಕೂಡ ಕೊಡುಗೆ ನೀಡಿದೆ. ಈಗ ಇದೆ ಚಿತ್ರತಂಡಕ್ಕೆ ದೊಡ್ಡ ಸಮಸ್ಯೆ ತಂದೊಡ್ಡಿದೆ.
ಹೌದು.. ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ಕಮಲ್ ಹಾಸನ್ ಅಭಿನಯದ 'ಗುಣ' (1991) ಸಿನಿಮಾಗಾಗಿ 'ಕಣ್ಮಣಿ ಅನ್ಬೋದು' ಹಾಡನ್ನು ರಚಿಸಿದ್ದರು. ಈ ಹಾಡನ್ನು ಅನುಮತಿಯಿಲ್ಲದೆ ಬಳಸಿದ್ದಕ್ಕಾಗಿ ಮಲಯಾಳಂ ಚಲನಚಿತ್ರ "ಮಂಜುಮ್ಮೆಲ್ ಬಾಯ್ಸ್" ನಿರ್ಮಾಪಕರಿಗೆ ಕಾನೂನು ನೋಟಿಸ್ ಜಾರಿಗೊಳಿಸಿದ್ದಾರೆ.

ಮಂಜುಮ್ಮೆಲ್ ಬಾಯ್ಸ್ ನಿರ್ಮಾಪಕರಿಗೆ ನೋಟಿಸ್
ಮಂಜುಮ್ಮೆಲ್ ಬಾಯ್ಸ್ ಚಿತ್ರದಲ್ಲಿ ಮಹತ್ವದ ಪಾತ್ರ ನಿರ್ವಹಿಸಿರುವ ಸೌಬಿನ್ ಶಾಹಿರ್ ಹಾಗೂ ಪರವ ಫಿಲ್ಮ್ಸ್ನ ಬಾಬು ಶಾಹಿರ್ ಮತ್ತು ಶಾನ್ ಆಂಟೋನಿ ಅವರಿಗೆ ನೋಟಿಸ್ ನೀಡಲಾಗಿದೆ. ಸಂಗೀತ ಮಾಂತ್ರಿಕ ಇಳಯರಾಜ ಅವರು "ಕಣ್ಮಣಿ ಅನ್ಬೋದು ಕಾದಲನ್" ಹಾಡಿನ ಮೇಲೆ ತಮ್ಮ ಕಾನೂನು, ನೈತಿಕ ಮತ್ತು ವಿಶೇಷ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ.
ಮಂಜುಮ್ಮೆಲ್ ಬಾಯ್ಸ್ ಚಲನಚಿತ್ರದಲ್ಲಿ ತಮ್ಮ ಮೂಲ ಸಂಗೀತವನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಇಳಯರಾಜ ಅವರು ಕಣ್ಮಣಿ ಹಾಡಿನ ಅಸಮರ್ಪಕ ಮತ್ತು ಅನಧಿಕೃತ ಬಳಕೆಗಾಗಿ ಕಾನೂನು ಕ್ರಮವನ್ನು ದಾಖಲಿಸುವ ಎಲ್ಲಾ ಹಕ್ಕನ್ನು ಉಳಿಸಿಕೊಂಡಿದ್ದಾರೆ. ಹೀಗಾಗಿ ಚಿತ್ರದ ನಿರ್ಮಾಪಕರ ಮೇಲೆ ತಿರುಗಿಬಿದಿದ್ದು, ನೋಟಿಸ್ ಕಳುಹಿಸಿದ್ದಾರೆ.
ಮಂಜುಮ್ಮೆಲ್ ಬಾಯ್ಸ್ ಎಂಬ ಸರ್ವೈವಲ್ ಥ್ರಿಲ್ಲರ್
ನೈಜ ಘಟನೆಯನ್ನು ಆಧರಿಸಿದ ಮಲಯಾಳಂ ಸರ್ವೈವಲ್ ಥ್ರಿಲ್ಲರ್ 'ಮಂಜುಮ್ಮೆಲ್ ಬಾಯ್ಸ್' ಸಿನಿಮಾ ಮೇ 5 ರಿಂದ ಡಿಸ್ನಿ+ ಹಾಟ್ಸ್ಟಾರ್ನಲ್ಲಿ ಸ್ಟ್ರೀಮ್ ಆಗುತ್ತಿದೆ. ಚಿದಂಬರಂ ಬರೆದು ನಿರ್ದೇಶಿಸಿರುವ ಈ ಸಿನಿಮಾ ಫೆಬ್ರವರಿ 22 ರಂದು ಕೇರಳ ಮತ್ತು ತಮಿಳುನಾಡಿನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು.

ಈ ಚಲನಚಿತ್ರವು 200 ಕೋಟಿ ರೂಪಾಯಿಗಳನ್ನು ಗಳಿಸಿ ಅತಿ ಹೆಚ್ಚು ಗಳಿಕೆ ಮಾಡಿದ ಮಲಯಾಳಂ ಚಲನಚಿತ್ರವಾಯಿತು. 2024 ರ ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ಪ್ರವೇಶವಾದ "2018" ಸಿನಿಮಾದ ದಾಖಲೆಯನ್ನು ಮೀರಿಸಿತು. ಡಿಸ್ನಿ+ ಹಾಟ್ಸ್ಟಾರ್ನಲ್ಲಿ 'ಮಂಜುಮ್ಮೆಲ್ ಬಾಯ್ಸ್' ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ.
ಮಂಜುಮ್ಮೆಲ್ ಬಾಯ್ಸ್ ಚಿತ್ರದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಎಸ್. ಪೊದುವಾಲ್, ಲಾಲ್ ಜೂನಿಯರ್, ದೀಪಕ್ ಪರಂಬೋಲ್, ಅಭಿರಾಮ್ ರಾಧಾಕೃಷ್ಣನ್, ಅರುಣ್ ಕುರಿಯನ್, ಖಾಲಿದ್ ರೆಹಮಾನ್, ಚಂದು ಸಲೀಂಕುಮಾರ್, ಶೆಬಿನ್ ಬೆನ್ಸನ್ ಮತ್ತು ವಿಷ್ಣು ರೇಘು ಅಭಿನಯಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications