ಕೊರಿಯೋಗ್ರಫರ್ ಜಾನಿ ಮಾಸ್ಟರ್ಗೆ ಮತ್ತೊಂದು ದೊಡ್ಡ ಶಾಕ್!
ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಫರ್) ಜಾನಿ ಮಾಸ್ಟರ್ ಅವರ ಲೈಂಗಿಕ ಕಿರುಕುಳ ಕೇಸ್ನಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಜಾನಿ ಮಾಸ್ಟರ್ಗೆ ದೊಡ್ಡ ಆಘಾತವೊಂದು ಎದುರಾಗಿದೆ. ಈ ಕೇಸ್ನಿಂದಾಗಿ ಜಾನಿ ಮಾಸ್ಟರ್ ಕೆರಿಯರ್ಗೆ ಹಿನ್ನಡೆ ಶುರುವಾಗಿದೆ.
ತೆಲುಗು, ಕನ್ನಡ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ತಮ್ಮ ನೃತ್ಯದ ಮೂಲಕ ಮೋಡಿ ಮಾಡಿದ್ದ ಜಾನಿ ಮಾಸ್ಟರ್ ಅವರಿಗೆ ಅತ್ಯಾಚಾರ ಕೇಸ್ ಸುರುಳಿಯಂತೆ ಸುತ್ತಿಕೊಂಡಿದೆ. ಇದೇ ಆರೋಪದಿಂದಾಗಿ ಜಾನಿ ಮಾಸ್ಟರ್ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆದಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ಜಾನಿ ಮಾಸ್ಟರ್ ಅವರಿಗೆ ನೃತ್ಯ ಸಂಯೋಜನೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿತ್ತು. ಆದರೆ ಇದೇ ಸಮಯದಲ್ಲಿ ಜಾನಿ ಮಾಸ್ಟರ್ ಅರೆಸ್ಟ್ ಆಗಿದ್ದರು. ತಿರುಚಿತ್ರಂಬಲಂ ಸಿನಿಮಾದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಅನೌನ್ಸ್ ಆಗಿತ್ತು.
ಆದರೆ ಅತ್ಯಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕೋಶವು ಜಾನಿ ಮಾಸ್ಟರ್ ಅವರ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ ಎಂದು ತಿಳಸಿದೆ. ನವದೆಹಲಿಯಲ್ಲಿ ಅಕ್ಟೋಬರ್ 8ರಂದು ನಡೆಯುತ್ತಿರುವ ಈ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಾನಿ ಮಾಸ್ಟರ್ಗೆ ನೀಡಿದ್ದ ಆಹ್ವಾನವನ್ನೂ ವಾಪಸ್ ಪಡೆಯಲಾಗಿದೆಯಂತೆ.
ಜಾನಿ ಮಾಸ್ಟರ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಹೋದ್ಯೋಗಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಸಂಬಂಧ ಜಾನಿ ಮಾಸ್ಟರ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. 21 ವರ್ಷದ ಯುವತಿಯೊಬ್ಬರು ಜಾನಿ ಮಾಸ್ಟರ್ ವಿರುದ್ಧ ಈ ಆರೋಪ ಮಾಡಿದ್ದು, ಇವರೂ ಕೂಡ ನೃತ್ಯ ಸಂಯೋಜಕಿ ಎನ್ನಲಾಗಿದೆ.

ಯುವತಿ ದೂರು ಆಧರಿಸಿ ಹೈದರಾಬಾದ್ನ ರಾಯದುರ್ಗಂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ದೂರುದಾರ ಯುವತಿಯು ಜಾನಿ ಮಾಸ್ಟರ್ ಅವರೊಂದಿಗೆ ಕೆಲಸ ಮಾಡುತ್ತಿದ್ದರು, ಔಟ್ಡೋರ್ ಶೂಟಿಂಗ್ ಸಮಯದಲ್ಲಿ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.
ಚೆನ್ನೈ, ಮುಂಬೈ, ಹೈದರಾಬಾದ್ ಸೇರಿದಂತೆ ಶೂಟಿಂಗ್ಗಾಗಿ ವಿವಿಧ ನಗರಗಳಿಗೆ ಜಾನಿ ಅವರೊಂದಿಗೆ ನಾನು ತೆರಳಿದ್ದೆ. ಈ ವೇಳೆ ಅವರು ನನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದರು. ನನ್ನ ನರ್ಸಿಂಗಿ ನಿವಾಸದಲ್ಲೂ ಜಾನಿ ನನಗೆ ಹಲವು ಬಾರಿ ದೌರ್ಜನ್ಯ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದರು. ಯುವತಿಯ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಈ ಕೇಸ್ ಅನ್ನು ನರ್ಸಿಂಘಿ ಪೊಲೀಸರಿಗೆ ಹೆಚ್ಚಿನ ತನಿಖೆಗಾಗಿ ವರ್ಗಾಯಿಸಿದ್ದರು.
ಬಳಿಕ ಗೋವಾದಲ್ಲಿ ಜಾನಿ ಮಾಸ್ಟರ್ ಅವರನ್ನು ಬಂಧಿಸಿ, ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇತ್ತೀಚೆಗೆ ಜಾಮೀನು ಕೂಡ ಪಡೆದಿದ್ದರು. ಆದರೆ, ಮೊದಲ ಬಾರಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ನಾನಿನ್ನೂ ಬಾಲಕಿಯಾಗಿದ್ದೆ ಎಂದು ಸಂತ್ರಸ್ತೆ ಆರೋಪ ಮಾಡಿರುವುದರಿಂದ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಕೇಸ್ ಕೂಡ ದಾಖಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications