Nayanthara: ಡಿವೋರ್ಸ್ ವದಂತಿ ನಡುವೆ ನಯನತಾರಾಗೆ ಬಿಗ್ ಶಾಕ್, ₹5 ಕೋಟಿ ಪರಿಹಾರ ಕೇಳಿ ನೋಟಿಸ್
ದಕ್ಷಿಣ ಸಿನಿಮಾರಂಗದ ಖ್ಯಾತ ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಬಗ್ಗೆ ನಯನತಾರಾ ಅವರು ಯಾವುದೇ ಅಧಿಕೃತ ಹೇಳಿಕೆ ಅಥವಾ ಸ್ಪಷ್ಟನೆ ನೀಡಿರಲಿಲ್ಲ. ಆದರೆ ನಯನತಾರಾ ಹಾಗೂ ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರಿಂದ ಡಿವೋರ್ಸ್ ವದಂತಿ ಸುಳ್ಳು ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ನಯನತಾರಾ ಅವರ ಸಿನಿಮಾ ನಿರ್ಮಾಪಕರು ಬರೋಬ್ಬರಿ ₹5 ಕೋಟಿ ಪರಿಹಾರ ನೀಡುವಂತೆ ಲೀಗಲ್ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನಯನತಾರಾ ನಟನೆಯ ನೆಟ್ಫ್ಲಿಕ್ಸ್ ಡಾಕ್ಯುಮೆಂಟರಿ 'Nayanthara: Beyond The Fairytale' ಮತ್ತೆ ವಿವಾದದಲ್ಲಿ ಸಿಲುಕಿದೆ. 2005ರಲ್ಲಿ ತೆರೆಕಂಡಿದ್ದ ಸೂಪರ್ಹಿಟ್ ತಮಿಳು ಚಿತ್ರ "ಚಂದ್ರಮುಖಿ"ಯ ಹಕ್ಕುದಾರರಾದ ಎಪಿ ಇಂಟರ್ನ್ಯಾಷನಲ್ ಕಂಪನಿಯವರು ಈ ಡಾಕ್ಯುಮೆಂಟರಿಯಲ್ಲಿ ತಮ್ಮ ಸಿನಿಮಾದ ದೃಶ್ಯಗಳನ್ನು ಅನುಮತಿ ಇಲ್ಲದೆ ಬಳಸಿದ್ದಾರೆ ಎಂದು ಆರೋಪಿಸಿ ಅದರ ನಿರ್ಮಾಪಕರಿಗೆ ಹಾಗೂ ನೆಟ್ಫ್ಲಿಕ್ಸ್ಗೆ ₹5 ಕೋಟಿ ಪರಿಹಾರ ನೀಡುವಂತೆ ಲೀಗಲ್ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಎಪಿ ಇಂಟರ್ನ್ಯಾಷನಲ್ ಕಂಪನಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ, ಡಾಕ್ಯುಮೆಂಟರಿ ನಿರ್ಮಾಪಕರಾದ ಟಾರ್ಕ್ ಸ್ಟುಡಿಯೋ ಹಾಗೂ ನೆಟ್ಫ್ಲಿಕ್ಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅವರ ಪ್ರಕಾರ, ಸಾಕ್ಷ್ಯಚಿತ್ರ ನಿರ್ಮಾಪಕರು ಯೂಟ್ಯೂಬ್ನಿಂದ ಚಂದ್ರಮುಖಿ ಸಿನಿಮಾದ ದೃಶ್ಯಗಳನ್ನು ಪಡೆದು ಯಾವುದೇ ಪೂರ್ವಾನುಮತಿ ಅಥವಾ ಪರವಾನಗಿ ಇಲ್ಲದೆ ಬಳಸಿದ್ದಾರೆ. ಈ ಬಗ್ಗೆ ಈಗಾಗಲೇ ನಿರ್ಮಾಪಕರಿಗೆ ನೋಟಿಸ್ ನೀಡಿದ್ದು, ₹5 ಕೋಟಿ ಹಾನಿ ಪರಿಹಾರಕ್ಕೂ ಬೇಡಿಕೆ ಇಟ್ಟಿದ್ದಾರೆ.
ಜೊತೆಗೆ, ಡಾಕ್ಯುಮೆಂಟರಿಯಿಂದ ಚಂದ್ರಮುಖಿ ದೃಶ್ಯಗಳನ್ನು ತೆಗೆದು ಹಾಕುವಂತೆ ಮತ್ತು ಡಾಕ್ಯುಮೆಂಟರಿಯಿಂದ ಆದ ಆದಾಯವನ್ನು ಬಹಿರಂಗಪಡಿಸುವಂತೆ ಕೂಡ ಕೋರಿ ಅರ್ಜಿ ಸಲ್ಲಿಸಲಾಗಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಸೆಂತಿಲ್ ಕುಮಾರ್ ರಾಮಮೂರ್ತಿ ಅವರು, ನಿರ್ಮಾಪಕರಿಗೆ ಮತ್ತು ನೆಟ್ಫ್ಲಿಕ್ಸ್ಗೆ ಎರಡು ವಾರಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ನಟ ಧನುಷ್ ಅವರ "ನಾನುಂ ರೌಡಿ ಧಾನ್" ಸಿನಿಮಾದ ದೃಶ್ಯಗಳನ್ನು ಅನುಮತಿ ಇಲ್ಲದೆ ಬಳಸಿದ ಕಾರಣಕ್ಕೂ ₹10 ಕೋಟಿ ಮೊತ್ತದ ದಾವೆ ಸಲ್ಲಿಸಲಾಗಿತ್ತು. ನಯನತಾರಾ ಅವರ ಮೇಲೆ ಇರುವ ಕಾನೂನು ಪ್ರಕರಣಗಳು ಮತ್ತು ವಿವಾದಗಳು ಅವರ ಮುಂದಿನ ಚಿತ್ರರಂಗದ ಅವಕಾಶಗಳಿಗೆ ತಾತ್ಕಾಲಿಕವಾಗಿ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣದ ನ್ಯಾಯಾಲಯದ ತೀರ್ಪು ಮತ್ತು ಅವರ ತಂಡದ ಸ್ಪಷ್ಟನೆಗಳು ಪ್ರಾಮುಖ್ಯತೆ ಪಡೆದುಕೊಂಡಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications