ಮನೆ ಖಾಲಿ, ಮೊಬೈಲ್ ಸ್ವಿಚ್ಡ್ ಆಫ್: ಯಾರ ಸಂಪರ್ಕಕ್ಕೂ ಸಿಗದ ನಿವೇದಿತಾ ಗೌಡ ಫ್ಯಾಮಿಲಿ
ಕನ್ನಡದ ಸಂಗೀತ ನಿರ್ದೇಶಕ, ನಟ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ನಡುವೆ ಬಿರುಕು ಮೂಡಿದ್ದು, ದಾಂಪತ್ಯ ಜೀವನ ಮುರಿದುಬಿದ್ದಿದೆ. ಪರಸ್ಪರ ಪ್ರೀತಿಸಿ ಮದುವೆಯಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇದೀಗ ದೂರಾಗಿದ್ದಾರೆ. ಇಬ್ಬರ ಒಪ್ಪಿಗೆಯ ಮೇರೆಗೆ ಚಂದನ್ ಶೆಟ್ಟಿ - ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ.
ಕಳೆದ ಒಂದು ವರ್ಷಗಳಿಂದ ಕಾಯ್ದುಕೊಂಡಿದ್ದ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಜೂನ್ 06 ಗುರುವಾರ ವಿಚ್ಛೇದನಕ್ಕಾಗಿ ಶಾಂತಿನಗರದ ಫ್ಯಾಮಿಲಿ ಕೋರ್ಟ್ಗೆ ತೆರಳಿದ್ದರು. ಶುಕ್ರವಾರ ಕೋರ್ಟ್ ವಿಚ್ಛೇದನವನ್ನು ಕೂಡ ಮಂಜೂರು ಮಾಡಿದೆ. ಡಿವೋರ್ಸ್ ಬಳಿಕ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದು, ತಮ್ಮ ಖಾಸಗಿ ಜೀವನ ಗೌರವಿಸುವಂತೆ ಮನವಿ ಮಾಡಿದ್ದರು.

ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ಸುದ್ದಿ ವೈರಲ್ ಆಗುತ್ತಿದ್ದಂತೆ ನಿವೇದಿತಾ ಗೌಡ ಅವರ ಮನೆ ಖಾಲಿಯಾಗಿದೆ. ಮೈಸೂರಿನ ರಾಜರಾಜೇಶ್ವರಿ ನಗರದಲ್ಲಿ ನಿವೇದಿತಾ ಗೌಡ ಫ್ಯಾಮಿಲಿ ವಾಸವಿದ್ದು, ಘಟನೆ ಬಳಿಕ ಕುಟುಂಬಸ್ಥರು ಮನೆಯಿಂದ ಹೊರಗೆ ಹೋಗಿದ್ದಾರೆ. ಮಾಹಿತಿ ಪ್ರಕಾರ ಗುರುವಾರದಿಂದ ಮನೆಗೆ ಬೀಗ ಹಾಕಿದ್ದಾರೆ ಎನ್ನಲಾಗುತ್ತಿದೆ.
ನಿವೇದಿತಾ ತಂದೆ ರಮೇಶ್, ತಾಯಿ ಹೇಮ ಗುರುವಾರ ಮಧ್ಯಾಹ್ನದವರಗೆ ಮನೆಯಲ್ಲಿದ್ದರು. ಆದರೆ ಮಧ್ಯಾಹ್ನದ ಬಳಿಕ ಮನೆಗೆ ಬೀಗ ಹಾಕಿದ್ದಾರೆ. ಸದ್ಯ ನಿವೇದಿತಾ ಕುಟುಂಬದವರು ಮಾಧ್ಯಮದವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ ಆಪ್ತರ ಕರೆಗೂ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಖಾಸಗಿ ಜೀವನ ಗೌರವಿಸುವಂತೆ ಮನವಿ
ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ಸುದ್ದಿ ವೈರಲ್ ಆಗುತ್ತಿದ್ದಂತೆ ತಮ್ಮ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಈ ಮೂಲಕ ತಾವು ದೂರಾದ ಬಗ್ಗೆ ಅಧೀಕೃತವಾಗಿ ತಿಳಿಸಿದ್ದರು. 'ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು' ಎಂದು ನಿವೇದಿತಾ ಗೌಡ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಿಳಿಸಿದ್ದರು. ಇದೇ ರೀತಿ ಚಂದನ್ ಶೆಟ್ಟಿ ಕೂಡ ಪೋಸ್ಟ್ ಮಾಡಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications