ಬೆಂಗಳೂರು ಚಲನಚಿತ್ರೋತ್ಸವ: ನಿವೇದಿತ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರಕ್ಕೆ ಭಾರೀ ಮೆಚ್ಚುಗೆ
ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ 'ಫೈರ್ ಫ್ಲೈ' ಚಿತ್ರ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರೋತ್ಸವದಲ್ಲಿ ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ ಈ ಮೊದಲ ಚಿತ್ರವು ಗಮನ ಸೆಳೆದಿದೆ.
ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿಬಂದಿರುವ 'ಫೈರ್ ಫ್ಲೈ' ಚಿತ್ರದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಭಿನ್ನ ಕಥಾವಸ್ತು, ನೈಸರ್ಗಿಕ ಅಭಿನಯ ಹಾಗೂ ತಾಂತ್ರಿಕ ಗುಣಮಟ್ಟಕ್ಕಾಗಿ ಚಿತ್ರಕ್ಕೆ ಚಿತ್ರೋತ್ಸವದಲ್ಲಿ ವೀಕ್ಷಕರಿಂದ ಪ್ರಶಂಸೆ ವ್ಯಕ್ತವಾಯಿತು.

ಚಿತ್ರ ಪ್ರದರ್ಶನದ ಬಳಿಕ ಮಾತನಾಡಿದ ನಿರ್ಮಾಪಕಿ ನಿವೇದಿತ ಶಿವರಾಜಕುಮಾರ್, "17ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಿರುವುದು ಅತ್ಯಂತ ಸಂತಸದ ವಿಚಾರ. ನಮ್ಮ ಮೊದಲ ನಿರ್ಮಾಣಕ್ಕೆ ಈ ವೇದಿಕೆ ದೊರೆತಿದ್ದು ಹೆಮ್ಮೆಯ ಸಂಗತಿ. ಚಿತ್ರೋತ್ಸವದ ಆಯೋಜಕರಿಗೆ ಹೃತ್ಪೂರ್ವಕ ಧನ್ಯವಾದಗಳು" ಎಂದು ತಮ್ಮ ಸಂತಸವನ್ನು ಹಂಚಿಕೊಂಡರು.
ಇದೇ ವೇಳೆ ಮಾತನಾಡಿದ ನಿರ್ದೇಶಕ ವಂಶಿಕೃಷ್ಣ ಶ್ರೀನಿವಾಸ್, "ಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡಿಗರ ಜೊತೆಗೆ ಹೊರ ರಾಜ್ಯ ಹಾಗೂ ವಿದೇಶಿ ಪ್ರೇಕ್ಷಕರೂ ನಮ್ಮ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿರುವುದು ನಮಗೆ ಬಹಳ ಖುಷಿ ತಂದಿದೆ. ಈಗಾಗಲೇ 'ಫೈರ್ ಫ್ಲೈ' ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿದ್ದು, ಹೆಚ್ಚಿನ ಪ್ರೇಕ್ಷಕರಿಗೆ ತಲುಪುತ್ತಿರುವುದು ಸಂತೋಷದ ವಿಷಯ" ಎಂದು ಹೇಳಿದರು.
ಚಿತ್ರದ ದೃಶ್ಯ ವೈಭವಕ್ಕೆ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಅವರ ಕ್ಯಾಮೆರಾ ಕೆಲಸವೂ ಪ್ರಮುಖ ಪಾತ್ರ ವಹಿಸಿದೆ. ಅವರು ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು, ಚಿತ್ರದ ನಿರ್ಮಾಣ ಅನುಭವಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಮೊದಲ ನಿರ್ಮಾಣದಲ್ಲೇ ನಿವೇದಿತ ಶಿವರಾಜಕುಮಾರ್ ಅವರು ಭರವಸೆಯ ಹೆಜ್ಜೆ ಇಟ್ಟಿದ್ದಾರೆ ಎಂಬ ಅಭಿಪ್ರಾಯ ಚಿತ್ರೋತ್ಸವದಲ್ಲಿ ವ್ಯಕ್ತವಾಗಿದ್ದು, 'ಫೈರ್ ಫ್ಲೈ' ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಶಂಸೆ ಪಡೆಯಲಿದೆ ಎಂಬ ನಿರೀಕ್ಷೆ ಮೂಡಿದೆ.
ಚಿತ್ರದ ದೃಶ್ಯ ಸಂಯೋಜನೆಗೆ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಅವರ ಕ್ಯಾಮೆರಾ ಕೆಲಸ ಮಹತ್ವದ ಪಾತ್ರ ವಹಿಸಿದೆ. ಬೆಳಕು-ನೆರಳಿನ ಬಳಕೆ, ಫ್ರೇಮಿಂಗ್ ಮತ್ತು ದೃಶ್ಯಗಳ ನೈಸರ್ಗಿಕತೆ ಚಿತ್ರಕ್ಕೆ ವಿಭಿನ್ನ ಛಾಪು ನೀಡಿದೆ ಎಂದು ಚಿತ್ರಾಸಕ್ತರು ಅಭಿಪ್ರಾಯಪಟ್ಟಿದ್ದಾರೆ. ಅವರು ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು ಚಿತ್ರ ನಿರ್ಮಾಣದ ಅನುಭವಗಳನ್ನು ಹಂಚಿಕೊಂಡರು.
ಒಟ್ಟಾರೆ, 'ಫೈರ್ ಫ್ಲೈ' ಚಿತ್ರದ ಮೂಲಕ ನಿವೇದಿತ ಶಿವರಾಜಕುಮಾರ್ ಅವರು ನಿರ್ಮಾಪಕಿಯಾಗಿ ಭರವಸೆಯ ಆರಂಭ ಮಾಡಿದ್ದಾರೆ ಎಂಬ ಅಭಿಪ್ರಾಯ ಚಿತ್ರೋತ್ಸವದಲ್ಲಿ ವ್ಯಾಪಕವಾಗಿ ಕೇಳಿಬಂದಿದ್ದು, ಈ ಚಿತ್ರ ಮುಂದಿನ ದಿನಗಳಲ್ಲಿ ಇನ್ನಷ್ಟು ರಾಷ್ಟ್ರಮಟ್ಟದ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಮೂಡಿಸಿದೆ.
-
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications