ಕರೋಡ್ಪತಿ ಶೋನಲ್ಲಿ 'ಆಪರೇಷನ್ ಸಿಂಧೂರ್' ಸೇನಾಧಿಕಾರಿಗಳು; ಬಿಗ್ಬಾಸ್ಗೂ ಹೋಗ್ತಾರೆ ಎಂದ ಪ್ರಕಾಶ್ ರಾಜ್
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ನಡೆಸಿತ್ತು. ಈ ಮೂಲಕ ಪಾಕ್ನ ಹುಟ್ಟಡಗಿಸಿತ್ತು. ಈ ಆಪರೇಷನ್ನಲ್ಲಿ ಮುಖ್ಯ ಪಾತ್ರ ವಹಿಸಿದ್ದ ಭಾರತೀಯ ಸೇನೆಯ ಹಿರಿಯ ಮಹಿಳಾಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ನಟ ಅಮಿತಾಭ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಶೋ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಕಾಣಿಸಿಕೊಂಡಿದ್ದಾರೆ. ಕೆಬಿಸಿಯ ವಿಶೇಷ ಸಂಚಿಕೆಯಲ್ಲಿ ಸೇನಾಧಿಕಾರಿಗಳು ಸಮವಸ್ತ್ರದಲ್ಲೇ ಕಾಣಿಸಿಕೊಳ್ಳಲಿದ್ದಾರೆ. ಈ ಸಂಚಿಕೆಯ ಪ್ರೋಮೋ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಕೂಡ ವ್ಯಂಗ್ಯವಾಡಿದ್ದಾರೆ.
ಕರೋಡ್ಪತಿ ಕಾರ್ಯಕ್ರಮದಲ್ಲಿ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಮಾತ್ರವಲ್ಲದೆ, ಕಳೆದ ವರ್ಷ ಭಾರತೀಯ ನೌಕಾಪಡೆಯಲ್ಲಿ ಯುದ್ಧನೌಕೆಯ ಕಮಾಂಡರ್ ಹುದ್ದೆಯನ್ನು ಹಸ್ತಾಂತರಿಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಮಾಂಡರ್ ಪ್ರೇರಣಾ ದಿಯೋಸ್ತಲಿ ಕೂಡ ಕಾಣಿಸಿಕೊಂಡಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಈ ಮೂವರೂ ಅಧಿಕಾರಿಗಳು ಸೇನೆಯ ಸಮವಸ್ತ್ರದಲ್ಲೇ ಇರುವುದನ್ನು ಹಲವರು ಟೀಕಿಸುತ್ತಿದ್ದಾರೆ.

ಆಗಸ್ಟ್ 15ರಂದು ಈ ಸಂಚಿಕೆ ಪ್ರಸಾರವಾಗಲಿದ್ದು, ಇದರ ಸಣ್ಣ ಟೀಸರ್ ಅನ್ನು ಇತ್ತೀಚೆಗೆ ಹಂಚಿಕೊಂಡಿದ್ದು, ಇದರಲ್ಲಿ ಸೇನಾಧಿಕಾರಿಗಳಿಗೆ ಕೆಬಿಸಿ ನಿರೂಪಕ ಅಮಿತಾಬ್ ಬಚ್ಚನ್ ಭವ್ಯ ಸ್ವಾಗತ ನೀಡಿದ್ದಾರೆ. ಇದೇ ಪ್ರೋಮೋದಲ್ಲಿ ಕರ್ನಲ್ ಖುರೇಷಿ ಅವರು ಪಹಲ್ಗಾಮ್ ದಾಳಿಯ ನಂತರ ಭಾರತದ ಆಪರೇಷನ್ ಸಿಂಧೂರ ಏಕೆ ಅಗತ್ಯವಾಗಿತ್ತು ಎಂಬುದನ್ನು ವಿವರಿಸಿದ್ದಾರೆ.
ಪಾಕಿಸ್ತಾನವು ಭಯೋತ್ಪಾದಕ ಕೃತ್ಯಗಳನ್ನು ಪದೇ ಪದೇ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯೆ ಅಗತ್ಯವಾಗಿತ್ತು. ಅದಕ್ಕಾಗಿಯೇ ಆಪರೇಷನ್ ಸಿಂಧೂರ್ ನಡೆಯಿತು ಎನ್ನುತ್ತಾರೆ. ಇನ್ನು ಮನರಂಜನಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಿ, ಅಲ್ಲಿಯೂ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡುತ್ತಿರುವುದನ್ನು ನೆಟ್ಟಿಗರು ಟೀಕಿಸಿದ್ದಾರೆ. ಸೇನೆ ಸಮವಸ್ತ್ರ ಧರಿಸಿದ ಅಧಿಕಾರಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.
ಯಾವುದೇ ಗಂಭೀರ ಮಿಲಿಟರಿ ಕಾರ್ಯಾಚರಣೆಯ ನಂತರ ನೀವು ಎಲ್ಲಾದರೂ ಇಂತದ್ದನ್ನ ನೋಡಿದ್ದೀರಾ? ಸೇವೆಯಲ್ಲಿರುವ ಯಾರಿಗಾದರೂ ಇದನ್ನು ಹೇಗೆ ಅನುಮತಿಸಲಾಗುತ್ತದೆ? ಈಗಿನ ಸರ್ಕಾರಗಳು ನಮ್ಮ ಸೇನೆಯನ್ನು ತನ್ನ ಕ್ಷುಲ್ಲಕ ರಾಜಕೀಯಕ್ಕಾಗಿ ನಾಚಿಕೆಯಿಲ್ಲದೆ ಬಳಸುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕರೋಡ್ಪತಿಯಂತಹ ರಿಯಾಲಿಟಿ ಶೋಗಳಿಗೆ ಅಧಿಕಾರಿಗಳನ್ನು ಕಳುಹಿಸಲು ಸಶಸ್ತ್ರ ಪಡೆಗಳ ನಿಯಮಗಳು ಒಪ್ಪುತ್ತವೆಯೇ ಎಂದು ಕೇಳಿದ್ದಾರೆ.
'ಬಿಗ್ಬಾಸ್ನಲ್ಲೂ ಕಾಣಿಸ್ತಾರೆ'
ಇದೇ ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಟೀಕಿಸಿದ್ದಾರೆ. 'ಶೀಘ್ರದಲ್ಲೇ ನಾವು ಅವರನ್ನು "ಬಿಗ್ ಬಾಸ್" ನಲ್ಲಿಯೂ ನೋಡಬಹುದು' ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಈ ಪೋಸ್ಟ್ ಅನ್ನು ಪ್ರಕಾಶ್ ರಾಜ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಸೇನೆಯ ಶಿಷ್ಟಾಚಾರದ ಪ್ರಕಾರ ಸೇನಾ ಉಡುಪುಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು ಅಥವಾ ಸಾಮಾಜಿಕ ಕೂಟಗಳಲ್ಲಿ ಧರಿಸುವಂತಿಲ್ಲ ಎಂದು ಷರತ್ತು ವಿಧಿಸುತ್ತವೆ. ಹಿರಿಯ ಅಧಿಕಾರಿಯಿಂದ ಲಿಖಿತವಾಗಿ ಅನುಮತಿ ಪಡೆಯದ ಹೊರತು, ಇದಕ್ಕೆ ಅವಕಾಶವಿಲ್ಲ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications