Pavithra Gowda: ಪವಿತ್ರಾ ಗೌಡಗೆ ವಾರಕ್ಕೆ ಒಂದು ದಿನ ಮಾತ್ರ ಮನೆ ಊಟ ಸವಿಯುವ ಭಾಗ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡಗೆ ಜೈಲಿನಲ್ಲಿ ಮನೆ ಊಟ ನೀಡುವ ಕುರಿತು ನೀಡಿದ್ದ ಆದೇಶವನ್ನು ನ್ಯಾಯಾಲಯ ಇದೀಗ ಪರಿಷ್ಕರಿಸಿದೆ. ಜೈಲು ಊಟದಿಂದ ಚರ್ಮರೋಗ ಹಾಗೂ ಫುಡ್ ಪಾಯ್ಸನಿಂಗ್ ಸೇರಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಪವಿತ್ರಾ ಗೌಡ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ, ಆರಂಭದಲ್ಲಿ ಮನೆ ಊಟಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಜೈಲಾಧಿಕಾರಿಗಳ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಈಗ ವಾರಕ್ಕೆ ಒಂದು ದಿನ ಮಾತ್ರವೇ ಮನೆ ಊಟ ನೀಡಬೇಕು ಎಂದು ಸೂಚಿಸಿದೆ.
ಪವಿತ್ರಾ ಗೌಡ ಅವರು ತಮ್ಮ ಮನವಿಯಲ್ಲಿ, ಜೈಲಿನ ಆಹಾರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು, ವೈದ್ಯಕೀಯ ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆ ಮಾನವೀಯ ದೃಷ್ಟಿಯಿಂದ ನ್ಯಾಯಾಲಯವು ಮೊದಲಿಗೆ ಮನೆ ಊಟಕ್ಕೆ ಅವಕಾಶ ನೀಡಿತ್ತು. ಅಲ್ಲದೆ ಈ ಆದೇಶದ ಬಳಿಕ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಈ ಬಗ್ಗೆ ಜೈಲಾಧಿಕಾರಿಗಳು ಕೂಡ ನ್ಯಾಯಾಲಯದ ಮುಂದೆ ತಮ್ಮ ಆಕ್ಷೇಪಣೆ ಸಲ್ಲಿಸಿದ್ದರು.

ಜೈಲಾಧಿಕಾರಿಗಳಿಂದ ಆಕ್ಷೇಪಣೆ
ಜೈಲಿನಲ್ಲಿ ನೀಡುವ ಆಹಾರವು ನಿಗದಿತ ಆರೋಗ್ಯ ಮಾನದಂಡಗಳಿಗೆ ಅನುಗುಣವಾಗಿಯೇ ಇದೆ. ಇತರ ಕೈದಿಗಳಿಗೆ ಇಲ್ಲದ ವಿಶೇಷ ಸೌಲಭ್ಯವನ್ನು ಒಬ್ಬ ಆರೋಪಿಗೆ ನಿರಂತರವಾಗಿ ನೀಡುವುದು ಸಮಾನತೆಯ ತತ್ವಕ್ಕೆ ವಿರುದ್ಧ, ಇದರಿಂದ ಭದ್ರತೆ ಮತ್ತು ಆಡಳಿತಾತ್ಮಕ ಅಡಚಣೆಗಳು ಉಂಟಾಗುವ ಸಾಧ್ಯತೆ ಇದೆ. ಬೇರೆ ಕೈದಿಗಳೂ ಇದೇ ರೀತಿ ಬೇಡಿಕೆ ಇಟ್ಟರೆ, ಅವರ ಊಟ ಪರಿಶೀಲಿಸಲು ಸಿಬ್ಬಂದಿಗೂ ಹೊರೆ ಎಂಬ ಅಂಶಗಳನ್ನು ಮುಂದಿಟ್ಟರು.
ಈ ವಾದಗಳನ್ನು ಪರಿಶೀಲಿಸಿದ ನ್ಯಾಯಾಲಯ, ಜೈಲಿನ ಆಡಳಿತಾತ್ಮಕ ನಿಯಮಗಳು ಮತ್ತು ಕೈದಿಗಳ ಸಮಾನ ಹಕ್ಕುಗಳ ವಿಷಯವನ್ನು ಗಮನದಲ್ಲಿಟ್ಟುಕೊಂಡು, ಮೊದಲು ನೀಡಿದ್ದ ಆದೇಶವನ್ನು ಬದಲಾಯಿಸಿದೆ. ಅದರಂತೆ, ಪವಿತ್ರಾ ಗೌಡಗೆ ಪ್ರತಿದಿನ ಮನೆ ಊಟ ನೀಡುವ ಅನುಮತಿ ರದ್ದುಗೊಳಿಸಿ, ವಾರಕ್ಕೆ ಒಮ್ಮೆ ಮಾತ್ರವೇ ಮನೆ ಊಟ ಸವಿಯುವ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದೆ.
ನ್ಯಾಯಾಲಯದ ಈ ಆದೇಶದಿಂದ, ಆರೋಗ್ಯದ ಆಧಾರದ ಮೇಲೆ ನೀಡಲಾಗಿದ್ದ ಸೌಲಭ್ಯಕ್ಕೆ ಮಿತಿ ವಿಧಿಸಿದಂತಾಗಿದ್ದು, ಜೈಲು ವ್ಯವಸ್ಥೆಯ ನಿಯಮಾನುಸಾರ ಕಾರ್ಯಾಚರಣೆಗೂ ಒತ್ತು ನೀಡಿದಂತಾಗಿದೆ. ಜೊತೆಗೆ, ಅಗತ್ಯವಿದ್ದರೆ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಜೈಲಿನಲ್ಲಿಯೇ ಒದಗಿಸಬೇಕು ಎಂಬ ಅಂಶಕ್ಕೂ ಕೋರ್ಟ್ ಮಹತ್ವ ನೀಡಿದೆ.
ಪವಿತ್ರಾ ಗೌಡ ಅವರ ಆರೋಗ್ಯ ಸಂಬಂಧಿತ ಮನವಿ ಮತ್ತು ಜೈಲಾಧಿಕಾರಿಗಳ ಆಡಳಿತಾತ್ಮಕ ವಾದಗಳ ನಡುವೆ ಸಮತೋಲನ ಸಾಧಿಸುವ ಪ್ರಯತ್ನವಾಗಿ, ನ್ಯಾಯಾಲಯ ಈ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಗಳು ಮತ್ತು ಆದೇಶಗಳ ಮೇಲೆ ಈಗ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನ ಎಲ್ಲ ಆರೋಪಿಗಳು ಮಂಗಳವಾರ (ಜನವರಿ 13) ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications