Pavithra Gowda: ನಟ ದರ್ಶನ್ ಅಡ್ಡಾದಲ್ಲಿ ಪವಿತ್ರಾ ಗೌಡ ಪ್ರತ್ಯಕ್ಷ, ವಿಡಿಯೋ ವೈರಲ್
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಹಾಗೂ ನಟಿ ಪವಿತ್ರಾ ಗೌಡ ಒಂದೇ ಕೇಸ್ನಲ್ಲಿ ಜೈಲು ಸೇರಿದ್ದರು. ಪವಿತ್ರಾ ಗೌಡ ದರ್ಶನ್ ಅವರ ಅತ್ಯಾಪ್ತೆಯೂ ಹೌದು. ಇದೇ ಕಾರಣಕ್ಕೆ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ಇಬ್ಬರೂ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ಜೈಲಿನಿಂದ ಹೊರಬಂದ ನಂತರ ಇಬ್ಬರ ನಡುವೆ ಮಾತಿಲ್ಲ, ಕಥೆಯಿಲ್ಲ ಎನ್ನುವಂತಿತ್ತು. ವಿಚಾರಣೆ ವೇಳೆ ಕೋರ್ಟ್ನಲ್ಲಿ ಅಕ್ಕಪಕ್ಕ, ಎದುರು ಬದುರಾಗಿದ್ದು ಬಿಟ್ಟರೆ ಬೇರೆಲ್ಲೂ ಮುಖಾಮುಖಿ ಭೇಟಿಯಿಲ್ಲ. ಆದರೆ, ಇದೀಗ ಖುದ್ದು ಪವಿತ್ರಾ ಗೌಡ ಅವರೇ ದರ್ಶನ್ ಅವರ ಫೇವರೇಟ್ ಅಡ್ಡಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ದರ್ಶನ್ ಆಪ್ತೆಯೂ ಆಗಿರುವ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನ ದರ್ಶನ್, ಪವಿತ್ರಾ ಹಾಗೂ ಇನ್ನಿತರರು ಸೇರಿ ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡಿರುವ ಆರೋಪವಿದೆ. ಇದೇ ಕೇಸ್ನಲ್ಲಿ ಇಬ್ಬರೂ ಕೂಡ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬಳಿಕ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹಲವು ತಿಂಗಳ ಕಾಲ ಇಬ್ಬರೂ ಸೆರೆವಾಸದಲ್ಲೇ ಇದ್ದರು. ಬಳಿಕ ಜಾಮೀನು ಸಿಕ್ಕಿದ್ದರಿಂದ ಕೆಲ ತಿಂಗಳ ಹಿಂದೆ ಜೈಲಿಂದ ರಿಲೀಸ್ ಆಗಿದ್ರು. ಅಚ್ಚರಿ ಎಂದರೆ ಜಾಮೀನು ಸಿಕ್ಕ ನಂತರ ಇವರಿಬ್ಬರ ನಡುವೆ ಮಾತುಕತೆಯೂ ಇರಲಿಲ್ಲ.
ಮೊದಲಿನಿಂದಲೂ ಪರಿಚಯ ಇದ್ದ ಇವರು ಒಂದೇ ಕೇಸ್ನಲ್ಲಿ ಜೈಲು ಸೇರಿದ ನಂತರ ಅಂತರ ಕಾಯ್ದುಕೊಂಡಿದ್ದು ಎಲ್ಲರ ಅಚ್ಚರಿಗೂ ಕಾರಣವಾಗಿತ್ತು. ಕೋರ್ಟ್ ವಿಚಾರಣೆಗೆ ಹಾಜರಾಗುವ ಸಂದರ್ಭದಲ್ಲಿ ಮಾತ್ರವೇ ಇಬ್ಬರು ಮುಖಾಮುಖಿಯಾಗುತ್ತಿದ್ದರು. ಆದರೆ ಯಾವುದೇ ಮಾತುಕತೆ ಇರುತ್ತಿರಲಿಲ್ಲ. ಹೀಗಾಗಿ ದರ್ಶನ್ ಪವಿತ್ರಾ ಗೌಡ ಅವರ ಮೇಲೆ ಮುನಿಸಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಇದೀಗ ದರ್ಶನ್ ಅವರ ಅಡ್ಡಾ ಎಂದೇ ಕರೆಯಲ್ಪಡುವ ಜಾಗದಲ್ಲಿ ಪವಿತ್ರಾ ಗೌಡ ಕಾಣಿಸಿಕೊಂಡಿದ್ದಾರೆ. ಅದೂ ಬೆಂಗಳೂರಿನಲ್ಲಿರುವ ಜಾಗದಲ್ಲೇ.

ಡಿಬಾಸ್ ಸಫಾರಿಗೆ ಪವಿತ್ರಾ ಗೌಡ ಭೇಟಿ
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ "ಸ್ಟೋನಿ ಬ್ರೂಕ್" ರೆಸ್ಟೋರೆಂಟ್ ನಟ ದರ್ಶನ್ ಅವರ ಅಡ್ಡಾ ಎಂದೇ ಕರೆಯಲಾಗುತ್ತದೆ. ಏಕೆಂದರೆ ದರ್ಶನ್ ಅವರು ಈ ರೆಸ್ಟೋರೆಂಟ್ಗೆ ಹೆಚ್ಚಾಗಿ ಭೇಟಿ ನೀಡಿ, ಪಾರ್ಟಿಗಳನ್ನು ಮಾಡುತ್ತಿದ್ದರು. ಮತ್ತೊಂದು ವಿಶೇಷ ಅಂದ್ರೆ ಇದೇ ರೆಸ್ಟೋರೆಂಟ್ನಲ್ಲಿ ದರ್ಶನ್ ಅವರ ನೆನಪಿನಲ್ಲಿ "ಡಿಬಾಸ್ ಸಫಾರಿ" ಎನ್ನುವ ವಿಶೇಷ ಮಿನಿ ಮ್ಯೂಸಿಯಂ ಕೂಡ ಇದೆ. ಇದರಲ್ಲಿ ಪ್ರಾಣಿಪ್ರಿಯರೂ ಆದ ದರ್ಶನ್ ಅವರು ಸೆರೆಹಿಡಿದಿದ್ದ ಅಪರೂಪದ ವನ್ಯಜೀವಿ ಫೋಟೋಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇದನ್ನು ದರ್ಶನ್ ಅವರೇ ಉದ್ಘಾಟಿಸಿದ್ದರು.
ಈ ಡಿಬಾಸ್ ಸಫಾರಿಗೆ ಪವಿತ್ರಾ ಗೌಡ ಭೇಟಿ ನೀಡಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ದರ್ಶನ್ ಕ್ಲಿಕ್ಕಿಸಿರುವ ಫೋಟೋಗಳನ್ನು ನೋಡಿ ಪವಿತ್ರಾ ಗೌಡ ಫುಲ್ ಖುಷ್ ಆಗಿದ್ದಾರೆ. ಡಿಬಾಸ್ ಸಫಾರಿ ಎಂಬ ಬೋರ್ಡ್ ಮುಂದೆ ನಿಂತು ಜೋರಾಗಿ ನಕ್ಕಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಅವರು ಅಕ್ಕಾ ನೀವು ಯಾವಾಗಲೂ ಖುಷಿಯಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಅನ್ನು ಪವಿತ್ರಾ ಗೌಡ ಕೂಡ ರೀಪೋಸ್ಟ್ ಮಾಡಿಕೊಂಡು ಥ್ಯಾಂಕ್ಯು ಪ್ರದೀಪ್ ಎಂದು ಬರೆದಿಕೊಂಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications