Pavithra Gowda: ಆಗಸ್ಟ್ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.?
Pavithra Gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇನ್ನು ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಆಗಸ್ಟ್ 28) ವಿಚಾರಣೆ ನಡೆಸಿದ ಬೆಂಗಳೂರು ಸಿಸಿಎಚ್ 57 ಕೊರ್ಟ್ ಆದೇಶವನ್ನು ಕಾಯ್ದಿರಿಸಿದೆ. ಮಾಹಿತಿ ಇಲ್ಲಿದೆ ನೋಡಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆಯನ್ನು ಸಿಸಿಎಚ್ 57 ಕೊರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ಪವಿತ್ರಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದು, ಸರ್ಕಾರಿ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಸರ್ಕಾರಿ ಪರ ವಾದ ಮಂಡನೆ ಮಾಡಿದ ಎಸ್ಪಿಪಿ ಪ್ರಸನ್ನ ಕುಮರ್ ವಾದ ಮಂಡನೆ ಮಾಡಿದ್ದು, ಈಗಾಗಲೇ ಜಾಮೀನು ನೀಡಬಾರದು ಎನ್ನುವುದಕ್ಕೆ ಕಾರಣಗಳನ್ನೂ ನೀಡಿದ್ದಾರೆ. "ಪಟ್ಟಣಗೆರೆ ಶಡ್ಗೆ ಬಂದವರ ಎಲ್ಲರ ಗುರುತು ಪತ್ತೆಯಾಗಿದೆ. ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಆತ ಎಲ್ಲರನ್ನು ಗುರುತು ಪತ್ತೆ ಮಾಡಿದ್ದಾನೆ," ಎಂದು ವಾದ ಮಂಡನೆ ಮಾಡಿದ್ದಾರೆ.
'ಈಗಾಗಲೇ ಎಫ್ಎಸ್ಎಲ್ ವರದಿಗಳು ಬಂದಿವೆ. ಆರೋಪಿಗಳು ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿವೆ. ಬ್ಲಾಕ್ ಸ್ಕಾರ್ಫಿಯೋ ಕಾರಿನಲ್ಲಿ ದರ್ಶನ್, ಪವಿತ್ರ ಗೌಡ ಪಟ್ಟಣಗೆರೆ ಶೆಡ್ಗೆ ಬಂದಿರುವುದು ಸಹ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ ಎನ್ನಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದೆ," ಎಂದು ವಾದ ಮಾಡಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿರುವುದು ಬಟಾ ಬಯಲಾಗಿದೆ. ಪವಿತ್ರಗೌಡ ಕೇವಲ ಮಹಿಳೆ ಅನ್ನುವ ಕಾರಣಕ್ಕೆ ಜಾಮೀನು ನೀಡಲು ಅಗುವುದಿಲ್ಲ. ಅವರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳಿವೆ. ಮಹಿಳೆಯರು ಹೀನಿಯಸ್ ಕ್ರೈಂನಲ್ಲಿ ಭಾಗಿಯಾದಾಗ ಜಾಮೀನು ನಿರಾಕರಿಸಿದ ಆದೇಶಗಳನ್ನು ಉಲ್ಲೇಖಿಸಿದ್ದಾರೆ.
ಈ ಫೆಬ್ರವರಿಯಲ್ಲಿ ರೇಣುಕಾಸ್ವಾಮಿ ಪೋಟೋ ಕಳುಹಿಸಿದ್ದು, ಜೂನ್ನಲ್ಲಿ ಕೊಲೆ ನಡೆದಿದೆ. ಆಗ ಯಾವ ಉದ್ದೇಶ ಇರುತ್ತದೆ? ಹಲ್ಲೆ ಮಾಡಿದವರು ಬೇರೆ ಆರೋಪಿಗಳು. ದರ್ಶನ್ ಪವಿತ್ರಾಗೌಡ ಮನೆಗೆ ಹೋಗಿ ಕರೆದುಕೊಂಡು ಬಂದಿದ್ದಾರೆ. ಹೀಗಿರುವಾಗ ಪವಿತ್ರಾಗೌಡ ಅವರ ಸಂಚು ಏನಿದೆ? ಪವಿತ್ರಾಗೌಡ ಕೊಲೆಯ ಸಂಚಿನಲ್ಲಿ ಭಾಗಿಯಾಗಿಲ್ಲ. ಜಾಮೀನು ವಿಚಾರದಲ್ಲಿ ಮಹಿಳೆಗೆ ವಿನಾಯಿತಿ ಇದೆ ಎಂದು ಪವಿತ್ರಾ ಗೌಡ ಪರ ವಕೀಲರು ಹೇಳಿದ್ದರು. ಆದರೆ ಕೊನೆಗೆ ವಾದ-ಪ್ರತಿ ವಾದವನ್ನು ಆಲಿಸಿದ ಕೋರ್ಟ್ ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ.
-
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
ಇರಾನ್ ಹೇಳಿಕೆಯಲ್ಲಿ ಗೊಂದಲ ಸೃಷ್ಟಿಸಿದ HE ಪದ: ಇದು ಉದ್ದೇಶಪೂರ್ವಕವೇ? ಮಂಜುನಾಥ ಕೊಳ್ಳೇಗಾಲ ವಿಶ್ಲೇಷಣೆ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Iran Ceasefire: 2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಇರಾನ್; ಶಾಶ್ವತ ಕದನ ವಿರಾಮದ ಬಗ್ಗೆ ಹೇಳಿದ್ದೇನು












Click it and Unblock the Notifications