Pawan Kalyan: ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಮಗ ಮಾರ್ಕ್ ಶಂಕರ್, ಸಿಂಗಾಪೂರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದಾರೆ. ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಾರ್ಕ್ ಶಂಕರ್ ಬೆಂಕಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಬೆಂಕಿ ಅವಘಡದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ಹೋದ ಹಿನ್ನೆಲೆ ತೀವ್ರ ಅನಾರೋಗ್ಯಕ್ಕಿಡಾಗಿದ್ದಾರೆ.
ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ಗಾಯಗೊಂಡಿದ್ದು, ಅಧಿಕೃತ ಪ್ರವಾಸವನ್ನು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮೊಟಕುಗೊಳಿಸಿದ್ದಾರೆ. ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಯಾಣ್ ಅವರ ಜನ ಸೇನಾ ಪಕ್ಷ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಎಂಟು ವರ್ಷದ ಬಾಲಕನ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಹೊಗೆಯನ್ನು ಉಸಿರಾಡಿದ್ದರಿಂದ ಉಸಿರಾಟದ ತೊಂದರೆಯೂ ಉಂಟಾಗಿದೆ.
ಮಾರ್ಕ್ ಶಂಕರ್ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಂಕಿಗೆ ಕಾರಣವೇನೆಂದು ಇಲ್ಲಿಯವರೆಗೆ ತಿಳಿದಿಲ್ಲ. ಇನ್ನೂ ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಾಲೆ ಕಲಿಯುತ್ತಿದ್ದಾರೆ. ಪವನ್ ಕಲ್ಯಾಣ ಅವರು ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಆಂಧ್ರಪ್ರದೇಶದಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ವಾರಕ್ಕೆ ಒಮ್ಮೆ ಸಿಂಗಪುರಕ್ಕೆ ಹೋಗಿ ಮಕ್ಕಳು, ಕುಟುಂಬವನ್ನು ಭೇಟಿ ಆಗಿ ಬರುತ್ತಾರೆ ಎನ್ನಲಾಗುತ್ತಿದೆ.
ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ತೀವ್ರ ಗಾಯಗೊಂಡ ಹಿನ್ನಲೆ ಇದೀಗ ಪವನ್ ಕಲ್ಯಾಣ್ ತಮ್ಮ ಈ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇಂದು ಕುರಿಡಿ ಗ್ರಾಮದ ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಆ ನಂತರ ಅಲ್ಲಿರುವ ದೇವಸ್ಥಾನಕ್ಕೆ ತೆರಳಲಿರುವ ಪವನ್ ಕಲ್ಯಾಣ್ ಆ ನಂತರ ಸಿಂಗಾಪೂರಗೆ ತೆರಳಲಿದ್ದಾರೆ. ಇನ್ನು ಕುರಿಡಿ ಗ್ರಾಮದ ನಂತರ ಪವನ್ ಕಲ್ಯಾಣ್ ವಿಶಾಖಪಟ್ಟಣಂನಲ್ಲಿರುವ ಸ್ಟೀಲ್ ಪ್ಲಾಂಟ್ಗೆ ಭೇಟಿ ನೀಡಬೇಕಿತ್ತು. ಮುಂದಿನ ಮೂರು ದಿನಗಳ ಕಾಲ ವಿಶಾಖಪಟ್ಟಣಂನಲ್ಲಿ ಇರಬೇಕಿತ್ತು. ಆದರೆ ತಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications