ವಿಜಯಲಕ್ಷ್ಮಿ ದರ್ಶನ್ಗೆ ಅಶ್ಲೀಲ ಕಾಮೆಂಟ್ ಕೇಸ್; ಮತ್ತೆ ಇಬ್ಬರ ಬಂಧನ
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ಗಳನ್ನು ಹಾಕಿದ್ದ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಈವರೆಗೆ ಒಟ್ಟು ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಲಕ್ಷ್ಮಿ ಅವರ ದೂರಿನ ಮೇರೆಗೆ ತನಿಖೆಗೆ ಮುಂದಾಗಿದ್ದ ಪೊಲೀಸರು ಈ ಮೊದಲಿಗೆ ಚಿಕ್ಕಬಾಣಾವರ ಆಟೋ ಚಾಲಕ ಚಂದ್ರು ಮತ್ತು ದಾವಣಗೆರೆಯ ನಿತಿನ್ ಎಂಬುವವರನ್ನು ಬಂಧಿಸಿದ್ದರು. ಇದೀಗ ಹುಬ್ಬಳ್ಳಿ ನಾಗರಾಜ್ ತಳವಾರ ಹಾಗೂ ಧಾರವಾಡದ ಪ್ರಶಾಂತ್ ತಳವಾರ ಎಂಬುವವರನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ತಾರಕಕ್ಕೇರಿತ್ತು. ನಂತರ ವಿಜಯಲಕ್ಷ್ಮಿ ಅವರಿಗೆ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ಕಾಮೆಂಟ್ಗಳನ್ನು ಮಾಡಿದ್ದರು. ಈ ಸ್ಕ್ರೀನ್ಶಾಟ್ಗಳೊಂದಿಗೆ ವಿಜಯಲಕ್ಷ್ಮಿಅವರು ಪೊಲೀಸರಿಗೆ ದೂರು ನೀಡಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಅವರ ಮತ್ತು ಕುಟುಂಬದ ಬಗ್ಗೆ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳು ಮತ್ತು ಸಂದೇಶಗಳು ಬಂದಿರುವುದಾಗಿ ಆರೋಪಿಸಿದ್ದರು. ಇದು ಕಿಚ್ಚ ಸುದೀಪ್-ದರ್ಶನ್ ಅಭಿಮಾನಿಗಳ ನಡುವಿನ ಕಿತ್ತಾಟದಿಂದ ಶುರುವಾಗಿತ್ತು. ವಿಜಯಲಕ್ಷ್ಮಿ ಅವರು ಡಿಸೆಂಬರ್ 24ರಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸ್ಕ್ರೀನ್ಶಾಟ್ಗಳನ್ನು ಅವರೂ ಹಂಚಿಕೊಂಡು ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದರು.
ಇದಾದ ಕೆಲ ದಿನಗಳ ನಂತರ ತಮ್ಮ ಪ್ರಕರಣದ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ವಿಜಯಲಕ್ಷ್ಮಿಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅವರು ವಿಳಂಬದ ಬಗ್ಗೆ ಬೇಸರ ಹಂಚಿಕೊಂಡಿದ್ದರು.
ಪೊಲೀಸರ ಬಗ್ಗೆ ವಿಜಯಲಕ್ಷ್ಮಿ ಅಸಮಾಧಾನ
ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದ ವಿಜಯಲಕ್ಷ್ಮಿ ಅವರು, ಮತ್ತೊಬ್ಬ ಮಹಿಳೆ ಸಲ್ಲಿಸಿದ ದೂರಿಗೆ ಕೇವಲ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ನಟಿ ರಮ್ಯಾ ಅವರ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದರು. ನಾನು ಯಾವಾಗಲೂ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದೆ ಎಂದು ನಂಬಿದ್ದೆ. ನಾನು ದಾಖಲಿಸಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಆದರೆ ಮತ್ತೊಬ್ಬ ಮಹಿಳೆ ಸಲ್ಲಿಸಿದ ದೂರಿನ ಮೇಲೆ ಕೇವಲ ಒಂದು ದಿನದಲ್ಲೇ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ನನ್ನ ದೂರಿಗೆ ಮಹತ್ವವೇ ಇಲ್ಲವೇ? ಅಥವಾ ಅದು ಮಾನ್ಯವಲ್ಲವೇ? ಎಂಬ ಪ್ರಶ್ನೆ ಮೂಡಿದೆ ಎಂದಿದ್ದರು.
ನಮ್ಮ ವಕೀಲರು ಈ ಕೇಸ್ ವಿಚಾರವಾಗಿ ನಿರಂತರವಾಗಿ ಫಾಲೋ-ಅಪ್ ಮಾಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ದೂರನ್ನು ಇನ್ನೂ ಪರಿಶೀಲಿಸಿಲ್ಲ ಎಂದು ನೆನಪಿಸಲು ನಾನೇ ಸ್ವತಃ ಪೊಲೀಸ್ ಕಮೀಷನರ್ ಕಚೇರಿಗೆ ಹೋಗಬೇಕಾಯಿತು. ಈ ವಿಳಂಬಕ್ಕೆ ಯಾವುದೇ ಹೊರಗಿನ ಒತ್ತಡ ಅಥವಾ ಪ್ರಭಾವ ಕಾರಣವೇ ಎಂದು ಪ್ರಶ್ನಿಸಿದ್ದರು. ನಂತರ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications