Darshan Thoogudeepa: ದರ್ಶನ್ ವಿರುದ್ಧ ಸಿಕ್ಕಿದೆ ಮತ್ತೊಂದು ಪ್ರಬಲ ಸಾಕ್ಷಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಸಾಕ್ಷಿಗಳು ಕಲೆಹಾಕುತ್ತಿದ್ದಾರೆ. ದರ್ಶನ್ ಮನೆ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯುವಲ್ಲಿ ಯಶಸ್ವಿಯಾದ ಬಳಿಕ, ಮತ್ತೊಂದು ಮಹತ್ವದ ಸಾಕ್ಷಿಯನ್ನು ಕಲೆಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸಂದರ್ಭದಲ್ಲಿ ನಟ ದರ್ಶನ್ ತೂಗುದೀಪ ಬಳಸಿದ್ದ ಸಿಮ್ ಕಾರ್ಡ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ದರ್ಶನ್ ಬಳಸುತ್ತಿದ್ದ ಸಿಮ್ ಕಾರ್ಡ್ ದರ್ಶನ್ ಅವರ ಹೆಸರಿನಲ್ಲಿಇರಲಿಲ್ಲ, ಬೇರೆಯವರ ಸಿಮ್ ಕಾರ್ಡ್ ಬಳಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದುಬಂದಿದೆ.

ನಟ ದರ್ಶನ್ಗೆ ಬೇರೆಯವರ ಹೆಸರಿನಲ್ಲಿದ್ದ ಸಿಮ್ ಕಾರ್ಡ್ ಬಳಸುವ ಅಗತ್ಯವೇನಿತ್ತು ಎನ್ನುವುದರ ಬಗ್ಗೆ ಪೊಲೀಸರು ಈಗ ತನಿಖೆ ಮಾಡುತ್ತಿದ್ದಾರೆ. ಸಿಮ್ ಕಾರ್ಡ್ ಯಾರ ಹೆಸರಿನಲ್ಲಿತ್ತು ಎನ್ನುವುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಆತನನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 164 ರ ಪೊಲೀಸರು ಈಗಾಗಲೇ ದರ್ಶನ್ ಬಳಸುತ್ತಿದ್ದ ಸಿಮ್ ಕಾರ್ಡ್ ಯಾರ ಹೆಸರಿನಲ್ಲಿತ್ತೋ ಆತನ ಹೇಳಿಕೆಯನ್ನು ದಾಖಲಿಸಿದ್ದಾರೆ. ಇದು ಕೂಡ ದರ್ಶನ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗುವ ಸಾಧ್ಯತೆ ಇದೆ. ಸಿಮ್ ಕಾರ್ಡ್ ಬಳಸುತ್ತಿದ್ದ ವ್ಯಕ್ತಿಯನ್ನು ಆತನ ಮತ್ತೊಂದು ನಂಬರ್ ಮೂಲಕ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಸಿಸಿಟಿವಿ ದೃಶ್ಯಗಳು ಪರೀಕ್ಷೆಗೆ ರವಾನೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯಾವಳಿಗಳು ಕೂಡ ಪ್ರಮುಖ ಸಾಕ್ಷಿಯಾಗಲಿವೆ. ಪಟ್ಟಣಗೆರೆ ಶೆಡ್ ಬಳಿ ರೇಣುಕಾಸ್ವಾಮಿ ಕೊಲೆಯಾದ ದಿನ ಹಲವು ವಾನಹಗಳ ಓಡಾಟವನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಇದೀಗ ದರ್ಶನ್ ಮನೆಯಲ್ಲಿ ಡಿಲೀಟ್ ಆಗಿದ್ದ ಸಿಸಿಟಿವಿ ದೃಶ್ಯಗಳನ್ನು ಕೂಡ ಪೊಲೀಸರು ರಿಟ್ರೈವ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳಿಸಲಾಗಿದ್ದು, ಶಂಕಿತರ ಜೊತೆಗೆ ದೃಶ್ಯಗಳ ಹೋಲಿಕೆ ಬಗ್ಗೆ ಸ್ಪಷ್ಟನೆ ಸಿಗಲಿದೆ. ಇದು ಕೂಡ ಪ್ರಕರಣದಲ್ಲಿ ಮತ್ತೊಂದು ಪ್ರಬಲ ಸಾಕ್ಷಿಯಾಗಲಿದೆ.
ದರ್ಶನ್ಗೆ ಆಗಸ್ಟ್ 1ರಂದು ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಆಗಸ್ಟ್ 14ರವರೆಗೆ ದರ್ಶನ್ ಮತ್ತು ತಂಡ ಜೈಲಿನಲ್ಲೇ ಇರಬೇಕಾಗುತ್ತದೆ. ಮನೆ ಊಟಕ್ಕಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿ ಕೂಡ ವಜಾ ಆಗಿದ್ದು, ಜೈಲೂಟಕ್ಕೆ ಹೊಂದಿಕೊಳ್ಳುವುದು ಮತ್ತೊಂದು ಸಮಸ್ಯೆಯಾಗಿದೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications