ದರ್ಶನ್ ಫ್ಯಾನ್ ಅನ್ಕೊಂಡು ರೋಡಿಗಿಳಿದ್ರೆ ಒದೆ ಬೀಳೋದು ಪಕ್ಕಾ!
ನಟ ದರ್ಶನ್ ಕೊಲೆ ಆರೋಪದಲ್ಲಿ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರು ಎರಡು ದಿನಗಳಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನನ್ನು ನೋಡಲು ಠಾಣೆ ಬಳಿ ಹೋದ ಅಭಿಮಾನಿಗಳಿಗೆ ಪೊಲೀಸರು ಲಾಠಿ ಏಟಿನ ರುಚಿ ತೋರಿಸಿದ್ದಾರೆ.
ನಟ ದರ್ಶನ್ ಅಪಾರ ಅಭಿಮಾನಿ ಬಳಗ ಹೊಂದಿರುವುದು ನಿಜ, ಆದರೆ ಕೆಲವು ಹುಚ್ಚು ಅಭಿಮಾನಿಗಳು, ದರ್ಶನ್ ಕೊಲೆ ಆರೋಪಿಯಾಗಿದ್ದರೂ ಅವರಿಗೆ ಬೆಂಬಲ ಕೊಡುತ್ತಿದ್ದಾರೆ. ಅದರಲ್ಲೂ ಕೊಲೆ ಮಾಡಿದ್ದರೂ ನಮ್ಮ ಬಾಸ್ ಮಾಡಿದ್ದು ಸರಿ ಎನ್ನುವಂತಹ ತಿಕ್ಕಲುತನದ ಪೋಸ್ಟ್ಗಳನ್ನು ಮಾಡುತ್ತಿದ್ದಾರೆ.

ಹೀಗೆ ತಮ್ಮ ನೆಚ್ಚಿನ ನಟನನ್ನು ನೋಡಲು ಠಾಣೆ ಬಳಿ ಹೋದ ಅಭಿಮಾನಿಗಳು ಈಗ ಲಾಠಿ ಏಟಿನ ರುಚಿ ನೋಡಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಎದುರು ಡಿ ಬಾಸ್ ಎಂದು ಕೂಗುತ್ತಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಅಲ್ಲಿಂದ ಓಡಿಸಿದ್ದಾರೆ.
ದರ್ಶನ್ ಮತ್ತು ಪವಿತ್ರಾ ಗೌಡರನ್ನು ಕೊಲೆಯಾದ ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೆಚ್ಚಿನ ಅಭಿಮಾನಿಗಳು ಜಮಾಯಿಸಿದ್ದ ಕಾರಣ ಪೊಲೀಸರು ಗುಂಪು ಚದುರಿಸಲು ಲಾಠಿ ಬೀಸಬೇಕಾಯಿತು.
ಅಲ್ಲದೆ ಪಟ್ಟಣಗೆರೆ ಬಳಿ ಇರುವ ಶೆಡ್ನಲ್ಲಿ ಸ್ಥಳ ಮಹಜರು ಮಾಡಲು ತೆರಳಿದ್ದ ವೇಳೆ ಕೂಡ ಹೆಚ್ಚಿನ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದರು. ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಹೆಣಗಾಡಿದರು.
ಜಾಮೀನು ಸಿಗೋದು ಅನುಮಾನ
ಕೊಲೆ ಪ್ರಕರಣವಾಗಿರುವ ಕಾರಣ ನಟ ದರ್ಶನ್ಗೆ ಶೀಘ್ರದಲ್ಲೇ ಜಾಮೀನು ಸಿಗುವುದು ಕಷ್ಟ ಎನ್ನಲಾಗಿದೆ. ನಟ ದರ್ಶನ್ ವಿರುದ್ಧ ಪ್ರಬಲ ಸಾಕ್ಷಿಗಳು ಇರುವ ಕಾರಣ ಪ್ರಕರಣ ಹೆಚ್ಚು ಗಂಭೀರವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ.
ಅಭಿಮಾನ ಇರಲಿ ಅಂಧಾಭಿಮಾನ ಬೇಡ
ಯಾವುದೇ ನಟ, ರಾಜಕಾರಣಿ, ಪಕ್ಷದ ಬಗ್ಗೆ ಅಭಿಮಾನ ಇರಲಿ, ಆದರೆ ಅಂಧಾಭಿಮಾನ ಯಾವುದೇ ಕಾರಣಕ್ಕೂ ಒಳ್ಳೆಯದಲ್ಲ. ನಿಮಗೆ ಹೆಚ್ಚು ಕಡಿಮೆಯಾದರೆ ಯಾವ ನಟನೂ ನಿಮ್ಮ ಕುಟುಂಬದ ಜೊತೆ ಇರುವುದಿಲ್ಲ ಎನ್ನುವುದು ನೆನಪಿದ್ದರೆ ಉತ್ತಮ. ನಾಳೆ ಏನಾದರೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮುಂದೆ ನಾನು ಡಿ ಬಾಸ್ ಅಭಿಮಾನಿ ಎಂದು ಹೋದರೆ, ಲಾಠಿ ಏಟು ಬೀಳುವುದು ಗ್ಯಾರಂಟಿ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications