Poonam Pandey: ನಾನು ಸತ್ತಿಲ್ಲ: ವಿಡಿಯೋ ಮೂಲಕ ನಟಿ ಪೂನಂ ಪಾಂಡೆ ಸ್ಪಷ್ಟನೆ
ಬಾಲಿವುಡ್ ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ ಎನ್ನುವ ಸುದ್ದಿ ಎಲ್ಲಡೆ ಹಬ್ಬಿತ್ತು. ಗರ್ಭಕಂಠ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೂನಂ 32ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿತ್ತು. ಆದರೆ ಇದೀಗ ಪೂನಂ ಪಾಂಡೆ ಬದುಕಿದ್ದಾರೆ ಎನ್ನುವ ಸ್ಪಷ್ಟನೆ ಸಿಕ್ಕಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಇಂದು ಬೆಳಗ್ಗೆ ವಿಡಿಯೋ ಹೇಳಿಕೆ ಮೂಲಕ ಪೂನಂ ಪಾಂಡೆ ಸಾವಿನ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. "ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ನಾನು ಬಯಸುತ್ತಿದ್ದೇನೆ. ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದೇ ತನ್ನ ಸಾವಿನ ಸುದ್ದಿಯ ಉದ್ದೇಶ" ಎಂದು ಪೂನಂ ಪಾಂಡೆ ವಿಡಿಯೋದಲ್ಲಿ ಹೇಳಿದ್ದಾರೆ.

ಮಾಡೆಲ್ ಹಾಗೂ ನಟಿಯಾಗಿದ್ದ ಪೂನಂ ಪಾಂಡೆ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದ್ದರು. ಇದೀಗ ಸಾವಿನ ವಿಚಾರದಲ್ಲೂ ವಿವಾದ ಎದಿದ್ದು, ಪೂನಂ ಪಾಂಡೆ ಸ್ಪಷ್ಟನೆ ವಿಡಿಯೋಗೆ ಕಮೆಂಟ್ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೊಂದು ಕೆಟ್ಟ ಪ್ರಚಾರ, ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ ಸರಿಯಲ್ಲ, ಕೆಲವು ಅಭಿಮಾನಿಗಳು ಸೂಕ್ಷ್ಮವಾಗಿರುತ್ತಾರೆ. ನಿಮ್ಮ ಪ್ರಚಾರಕ್ಕೆ ಜನರ ಭಾವನೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ.
ನಿನ್ನೆ ಪೂನಂ ಪಾಂಡೆ ಸಾವಿನ ಸುದ್ದಿ ಹೊರಬಿದ್ದ ಬಳಿಕ ಸತ್ಯಾಸತ್ಯತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದ್ದು. ಕೆಲವರು ಪೂನಂ ಪಾಂಡೆ ಸತ್ತಿರುವುದು ಸತ್ಯ ಒಪ್ಪಿಕೊಂಡಿದ್ದರೆ, ಇನ್ನೂ ಕೆಲವರು ಇದು ಆಕೆಯ ಪ್ರಚಾರದ ಸ್ಟಂಟ್ ಎಂದು ಊಹಿಸಿದ್ದರು. ಆದರೆ ಪೂನಂ ಪಾಂಡೆ ಸಾವಿನ ಬಗ್ಗೆ ಆಕೆಯ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಳ್ಳಲಾಗಿತ್ತು ಹೊರತು. ಆಕೆಯ ಕುಟುಂಬಸ್ಥರಿಂದ ಅಧಿಕೃತವಾಗಿ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಈ ಚರ್ಚೆಗಳು ವಿಪರೀತವಾಗುತ್ತಿದಂತೆ ಇದೀಗ ನಟಿಯಿಂದಲೇ ಸ್ಪಷ್ಟನೆ ಸಿಕ್ಕಿದೆ.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications