KGF 3: ಕೆಜಿಎಫ್ 3 ಸ್ಕ್ರಿಪ್ಟ್ ಸಿದ್ಧವಾಗಿದೆ ಎಂದ ಪ್ರಶಾಂತ್ ನೀಲ್
ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವದಾದ್ಯಂತ ಹರಡಿದ್ದು ಕೆಜಿಎಫ್ ಸಿನಿಮಾ ಸರಣಿ. ಕನ್ನಡ ಸಿನಿಮಾ ಕೂಡ ನೂರಾರು ಕೋಟಿ ವ್ಯವಹಾರ ಮಾಡಬಹುದು ಎಂದು ಮೇಲ್ಪಂಕ್ತಿ ಹಾಕಿಕೊಟ್ಟ ಸಿನಿಮಾ. ನಾಯಕ ಯಶ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರ ಜನಪ್ರಿಯತೆ ಉತ್ತುಂಗಕ್ಕೇರಿಸಿದ್ದು ಈ ಎರಡು ಸಿನಿಮಾಗಳು.
ಕೆಜಿಎಫ್ 2 ಸಿನಿಮಾ ನಂತರ ಮುಂದುವರೆದ ಭಾಗವಾಗಿ ಕೆಜಿಎಫ್ 3 ಬರುತ್ತಾ ಎನ್ನುವ ಪ್ರಶ್ನೆಗಳು ಇದ್ದವು. ಈ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಆದರೆ, ಪ್ರಶಾಂತ್ ನೀಲ್ ಸಲಾರ್ ಚಿತ್ರದಲ್ಲಿ ತೊಡಗಿಸಿಕೊಂಡರು, ಎರಡು ಭಾಗಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ, ಡಿಸೆಂಬರ್ 22ರಂದು ಮೊದಲ ಭಾಗ ಬಿಡುಗಡೆಯಾಗಲಿದೆ. ನಂತರ ಪ್ರಶಾಂತ್ ನೀಲ್ ಜ್ಯೂನಿಯರ್ ಎನ್ಟಿಆರ್ ಜೊತೆಗೆ ಚಿತ್ರ ಮಾಡಲಿದ್ದಾರೆ.

ಇತ್ತ ಯಶ್ ಕೂಡ ತಮ್ಮ 19ನೇ ಸಿನಿಮಾ ಟೈಟಲ್ ಘೊಷಣೆ ಮಾಡುವುದಾಗಿ ಹೇಳಿದ್ದಾರೆ. ಡಿಸೆಂಬರ್ 8ರಂದು ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಇದೆಲ್ಲದರ ನಡುವೆ ಅಭಿಮಾನಿಗಳಿಗೆ ಮತ್ತೊಂದು ಅಚ್ಚರಿ ಸುದ್ದಿ ಸಿಕ್ಕಿದೆ. ಹೌದು, ಕೆಜಿಎಫ್ 3 ಬರೋದು ಪಕ್ಕಾ ಆಗಿದೆ.
ಚಿತ್ರಕಥೆ ಸಿದ್ದವಾಗಿದೆ ಎಂದ ಪ್ರಶಾಂತ್ ನೀಲ್
ಇತ್ತೀಚೆಗೆ ಪಿಂಕ್ವಿಲ್ಲಾಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ನೀಲ್ ಕೆಜಿಎಫ್ 3 ಸಿನಿಮಾ ಬಗ್ಗೆ ಮಾತನಾಡಿದ್ದು, ಸ್ಕ್ರಿಪ್ಟ್ ಸಿದ್ದವಾಗಿದೆ ಎನ್ನುವ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ.
"ಕೆಜಿಎಫ್ 3 ಆಗಲಿದೆ. ನಾನು ನಿರ್ದೇಶಕನೋ ಇಲ್ಲವೋ ನನಗೆ ಗೊತ್ತಿಲ್ಲ, ಆದರೆ ಯಶ್ ಅದರ ಭಾಗವಾಗಿರುತ್ತಾನೆ. ನಾವು ಅದರ ಸಲುವಾಗಿ ಅದನ್ನು ಘೋಷಿಸಲಿಲ್ಲ" ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ.
"ಈಗಾಗಲೇ ಸ್ಕ್ರಿಪ್ಟ್ ಸಿದ್ಧವಾಗಿದೆ. ನಾವು ಘೋಷಣೆ ಮಾಡುವ ಮೊದಲು ಸ್ಕ್ರಿಪ್ಟ್ ಅನ್ನು ಮತ್ತೆ ನೋಡುತ್ತೇವೆ. ಯಶ್ ತುಂಬಾ ಜವಾಬ್ದಾರಿಯುತ ವ್ಯಕ್ತಿ ಮತ್ತು ಕೇವಲ ವ್ಯವಹಾರಕ್ಕಾಗಿ ವಿಷಯಗಳನ್ನು ತಿಳಿಸುವುದಿಲ್ಲ, ನಾವು ಅದನ್ನು ಘೋಷಣೆ ಮಾಡುವ ಮೊದಲು ಎಲ್ಲಾ ಸಿದ್ಧತೆ ಮಾಡಿಕೊಂಡಿರಬೇಕು" ಎಂದು ಹೇಳಿದ್ದಾರೆ.
ಎನ್ಟಿಆರ್ ಜೊತೆ ನೀಲ್ ಸಿನಿಮಾ
ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್ಟಿಆರ್ನೊಂದಿಗೆ ತಮ್ಮ ಮೊದಲ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ, ತಾತ್ಕಾಲಿಕವಾಗಿ ಎನ್ಟಿಆರ್ 31 ಎಂದು ಹೆಸರಿಸಲಾಗಿದೆ. ಅದರ ಕುರಿತು ಮಾತನಾಡಿದ ಅವರು, 'ಸಲಾರ್' ನಂತರ ಅವರು 2024 ರಲ್ಲಿ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವುದಾಗಿ ಹೇಳಿದರು.
ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಅವರ 'ಸಲಾರ್: ಭಾಗ 1 - ಕದನ ವಿರಾಮ' ಡಿಸೆಂಬರ್ 22 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೊಂಬಾಳೆ ಫಿಲ್ಮ್ಸ್ 'ಸಲಾರ್' ಚಿತ್ರಕ್ಕೆ 400 ಕೋಟಿ ರೂಪಾಯಿ ಬಂಡವಾಳ ಹಾಕಿದೆ ಎನ್ನಲಾಗಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications