KGF 3: ಕೆಜಿಎಫ್ 3 ಸ್ಕ್ರಿಪ್ಟ್ ಸಿದ್ಧವಾಗಿದೆ ಎಂದ ಪ್ರಶಾಂತ್ ನೀಲ್
ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವದಾದ್ಯಂತ ಹರಡಿದ್ದು ಕೆಜಿಎಫ್ ಸಿನಿಮಾ ಸರಣಿ. ಕನ್ನಡ ಸಿನಿಮಾ ಕೂಡ ನೂರಾರು ಕೋಟಿ ವ್ಯವಹಾರ ಮಾಡಬಹುದು ಎಂದು ಮೇಲ್ಪಂಕ್ತಿ ಹಾಕಿಕೊಟ್ಟ ಸಿನಿಮಾ. ನಾಯಕ ಯಶ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರ ಜನಪ್ರಿಯತೆ ಉತ್ತುಂಗಕ್ಕೇರಿಸಿದ್ದು ಈ ಎರಡು ಸಿನಿಮಾಗಳು.
ಕೆಜಿಎಫ್ 2 ಸಿನಿಮಾ ನಂತರ ಮುಂದುವರೆದ ಭಾಗವಾಗಿ ಕೆಜಿಎಫ್ 3 ಬರುತ್ತಾ ಎನ್ನುವ ಪ್ರಶ್ನೆಗಳು ಇದ್ದವು. ಈ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಆದರೆ, ಪ್ರಶಾಂತ್ ನೀಲ್ ಸಲಾರ್ ಚಿತ್ರದಲ್ಲಿ ತೊಡಗಿಸಿಕೊಂಡರು, ಎರಡು ಭಾಗಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ, ಡಿಸೆಂಬರ್ 22ರಂದು ಮೊದಲ ಭಾಗ ಬಿಡುಗಡೆಯಾಗಲಿದೆ. ನಂತರ ಪ್ರಶಾಂತ್ ನೀಲ್ ಜ್ಯೂನಿಯರ್ ಎನ್ಟಿಆರ್ ಜೊತೆಗೆ ಚಿತ್ರ ಮಾಡಲಿದ್ದಾರೆ.

ಇತ್ತ ಯಶ್ ಕೂಡ ತಮ್ಮ 19ನೇ ಸಿನಿಮಾ ಟೈಟಲ್ ಘೊಷಣೆ ಮಾಡುವುದಾಗಿ ಹೇಳಿದ್ದಾರೆ. ಡಿಸೆಂಬರ್ 8ರಂದು ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಇದೆಲ್ಲದರ ನಡುವೆ ಅಭಿಮಾನಿಗಳಿಗೆ ಮತ್ತೊಂದು ಅಚ್ಚರಿ ಸುದ್ದಿ ಸಿಕ್ಕಿದೆ. ಹೌದು, ಕೆಜಿಎಫ್ 3 ಬರೋದು ಪಕ್ಕಾ ಆಗಿದೆ.
ಚಿತ್ರಕಥೆ ಸಿದ್ದವಾಗಿದೆ ಎಂದ ಪ್ರಶಾಂತ್ ನೀಲ್
ಇತ್ತೀಚೆಗೆ ಪಿಂಕ್ವಿಲ್ಲಾಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ನೀಲ್ ಕೆಜಿಎಫ್ 3 ಸಿನಿಮಾ ಬಗ್ಗೆ ಮಾತನಾಡಿದ್ದು, ಸ್ಕ್ರಿಪ್ಟ್ ಸಿದ್ದವಾಗಿದೆ ಎನ್ನುವ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ.
"ಕೆಜಿಎಫ್ 3 ಆಗಲಿದೆ. ನಾನು ನಿರ್ದೇಶಕನೋ ಇಲ್ಲವೋ ನನಗೆ ಗೊತ್ತಿಲ್ಲ, ಆದರೆ ಯಶ್ ಅದರ ಭಾಗವಾಗಿರುತ್ತಾನೆ. ನಾವು ಅದರ ಸಲುವಾಗಿ ಅದನ್ನು ಘೋಷಿಸಲಿಲ್ಲ" ಎಂದು ಪ್ರಶಾಂತ್ ನೀಲ್ ಹೇಳಿದ್ದಾರೆ.
"ಈಗಾಗಲೇ ಸ್ಕ್ರಿಪ್ಟ್ ಸಿದ್ಧವಾಗಿದೆ. ನಾವು ಘೋಷಣೆ ಮಾಡುವ ಮೊದಲು ಸ್ಕ್ರಿಪ್ಟ್ ಅನ್ನು ಮತ್ತೆ ನೋಡುತ್ತೇವೆ. ಯಶ್ ತುಂಬಾ ಜವಾಬ್ದಾರಿಯುತ ವ್ಯಕ್ತಿ ಮತ್ತು ಕೇವಲ ವ್ಯವಹಾರಕ್ಕಾಗಿ ವಿಷಯಗಳನ್ನು ತಿಳಿಸುವುದಿಲ್ಲ, ನಾವು ಅದನ್ನು ಘೋಷಣೆ ಮಾಡುವ ಮೊದಲು ಎಲ್ಲಾ ಸಿದ್ಧತೆ ಮಾಡಿಕೊಂಡಿರಬೇಕು" ಎಂದು ಹೇಳಿದ್ದಾರೆ.
ಎನ್ಟಿಆರ್ ಜೊತೆ ನೀಲ್ ಸಿನಿಮಾ
ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್ಟಿಆರ್ನೊಂದಿಗೆ ತಮ್ಮ ಮೊದಲ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ, ತಾತ್ಕಾಲಿಕವಾಗಿ ಎನ್ಟಿಆರ್ 31 ಎಂದು ಹೆಸರಿಸಲಾಗಿದೆ. ಅದರ ಕುರಿತು ಮಾತನಾಡಿದ ಅವರು, 'ಸಲಾರ್' ನಂತರ ಅವರು 2024 ರಲ್ಲಿ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವುದಾಗಿ ಹೇಳಿದರು.
ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಅವರ 'ಸಲಾರ್: ಭಾಗ 1 - ಕದನ ವಿರಾಮ' ಡಿಸೆಂಬರ್ 22 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೊಂಬಾಳೆ ಫಿಲ್ಮ್ಸ್ 'ಸಲಾರ್' ಚಿತ್ರಕ್ಕೆ 400 ಕೋಟಿ ರೂಪಾಯಿ ಬಂಡವಾಳ ಹಾಕಿದೆ ಎನ್ನಲಾಗಿದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
April OTT releases: ಏಪ್ರಿಲ್ನಲ್ಲಿ ಓಟಿಟಿ ಅಬ್ಬರ: ಬಿಡುಗಡೆಗೆ ಸಜ್ಜಾಗಿರುವ ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications