Kantara Chapter 1: ₹68,920 ಕೊಟ್ಟು ಕಾಂತಾರ ಚಾಪ್ಟರ್-1 ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ
ರಿಷಬ್ ಶೆಟ್ಟಿಯ ಕಾಂತಾರ ಚಾಪ್ಟರ್-1 ಸಿನಿಮಾ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಲ್ಲೆಡೆ ಸಿನಿಮಾ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ. ಗುರುವಾರ ಮೊದಲ ದಿನವೇ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಕಂಡುಬಂದಿದ್ದು, ಇಂದು ಕೂಡ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಜನ ಕಾಂತಾರ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೂಡ ಕಾಂತಾರ ಚಾಪ್ಟರ್-1 ಸಿನಿಮಾ ವೀಕ್ಷಿಸಲು ಟಿಕೆಟ್ ಬುಕ್ ಮಾಡಿದ್ದಾರೆ. ಬರೋಬ್ಬರಿ ₹68,920 ಕೊಟ್ಟು ಟಿಕೆಟ್ ಬುಕ್ ಮಾಡಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಹೌದು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಪ್ರೀಕ್ವೆಲ್ ಕೂಡ ಥಿಯೇಟರ್ಗಳಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಸಿನಿಮಾ ವೀಕ್ಷಿಸಿ ಸೂಪರ್ ಎಂದಿದ್ದಾರೆ. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ಸಿನಿಮಾ ವೀಕ್ಷಿಸಲು ಉತ್ಸುಕರಾಗಿದ್ದಾರೆ. ಹೀಗಾಗಿ 68,920 ರೂಪಾಯಿ ಕೊಟ್ಟು ಟಿಕೆಟ್ ಖರೀದಿಸಿದ್ದಾರೆ.

ಪ್ರತಾಪ್ ಸಿಂಹ ಅವರು ಕೇವಲ ತಾವು ಮಾತ್ರವಲ್ಲದೆ, ತಮ್ಮ ಕಾರ್ಯಕರ್ತರಿಗೂ ಸೇರಿ ಅವರು ಟಿಕೆಟ್ ಬುಕ್ ಮಾಡಿದ್ದಾರೆ. ನಾಳೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ ಸಿನಿಮಾ ನೋಡೋಣ, ಡಿಆರ್ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ ಎಂದು ಪ್ರತಾಪ್ ಸಿಂಹ ಮಾಹಿತಿ ಹಂಚಿಕೊಂಡಿದ್ದಾರೆ. ಲಕ್ಸುರಿ, ಪ್ರೀಮಿಯಂ, ಸ್ಟ್ಯಾಂಡರ್ಡ್ ಸೇರಿ ಫುಲ್ ಸ್ಕ್ರೀನ್ನ 197 ಸೀಟುಗಳನ್ನು ಬುಕ್ ಮಾಡಿದ್ದಾರೆ. ಇದರ ಒಟ್ಟು ಟಿಕೆಟ್ ಮೊತ್ತ 68,920 ರೂಪಾಯಿ ಎಂದು ವಿವರ ಹಂಚಿಕೊಂಡಿದ್ದಾರೆ.
ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು?
ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರ ಗುರುವಾರ ಭಾರತದಲ್ಲಿ ₹60 ಕೋಟಿ ಲಾಭ ಗಳಿಸಿದೆ ಎಂದು ವರದಿಯಾಗಿದೆ. ಕನ್ನಡ ಆವೃತ್ತಿಯಿಂದಲೇ ₹18 ಕೋಟಿ ಬಂದರೆ, ಹಿಂದಿ-ಡಬ್ ಮಾಡಿದ ಆವೃತ್ತಿಯಿಂದ ₹19 ಕೋಟಿ ಕಲೆಕ್ಷನ್ ಮಾಡಿದೆಯಂತೆ. ತಮಿಳು, ತೆಲುಗು ಮತ್ತು ಮಲಯಾಳಂ ಆವೃತ್ತಿಗಳು ಸಹ ಮೊದಲ ದಿನದಂದು ಉತ್ತಮ ಗಳಿಕೆ ಕಂಡಿದ್ದು, ಪ್ಯಾನ್-ಇಂಡಿಯಾ ಮಟ್ಟದಲ್ಲೂ ಮೊದಲ ದಿನವೇ ಯಶಸ್ಸು ಕಂಡಿದೆ.
ಶುಕ್ರವಾರ ಸಂಜೆ 5 ಗಂಟೆಯ ವೇಳೆಗೆ ಈ ಚಿತ್ರವು ದೇಶೀಯವಾಗಿ ₹20.56 ಕೋಟಿ ನಿವ್ವಳ ಗಳಿಕೆ ಮಾಡಿದ್ದು, ಭಾರತದಲ್ಲಿ ₹ 80.56 ಕೋಟಿ ಗಳಿಸಿದೆ. ಈ ಮೂಲಕ ಕಾಂತಾರ ಈಗಾಗಲೇ ವರ್ಷದ ಎರಡನೇ ಅತಿ ಹೆಚ್ಚು ಗಳಿಕೆಯ ಕನ್ನಡ ಚಿತ್ರವಾಗಿ ಹೊರಹೊಮ್ಮಿದೆ. ಕಳೆದ ತಿಂಗಳು ಸು ಫ್ರಮ್ ಸೋ ಸಿನಿಮಾ ಭಾರತದಲ್ಲಿ ₹92 ಕೋಟಿ ನಿವ್ವಳ ಗಳಿಸಿತ್ತು. ಶನಿವಾರದ ವೇಳೆಗೆ ರಿಷಬ್ ಸಿನಿಮಾ ಈ ದಾಖಲೆ ಮುರಿಯಲಿದೆ ಎಂದು ನಿರೀಕ್ಷಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications