ಕಾಂತಾರ ಚಾಪ್ಟರ್-1 ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 ಸಿನಿಮಾಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೇರೆ ಬೇರೆ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ಈ ಸಿನಿಮಾ ರಾಷ್ಟ್ರಪತಿ ಭವನದಲ್ಲಿ ಕೂಡ ಪ್ರದರ್ಶನಗೊಳ್ಳಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಕಾಂತಾರ ಚಾಪ್ಟರ್ 1 ಸಿನಿಮಾ ವೀಕ್ಷಿಸಲಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಸೇರಿದಂತೆ ಸಿನಿಮಾ ತಂಡದ ಜೊತೆಗೆ ಸಿನಿಮಾ ಪ್ರದರ್ಶನ ನಡೆಯಲಿದ್ದು, ಬಳಿಕ ರಾಷ್ಟ್ರಪತಿಗಳು ಸಿನಿಮಾ ತಂಡವನ್ನು ಗೌರವಿಸಲಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಾಪ್ಟರ್ 1 ಈಗ ವಿಶೇಷ ಗೌರವಕ್ಕೆ ಸಾಕ್ಷಿಯಾಗುತ್ತಿದೆ. ಪ್ರೇಕ್ಷಕರು ಮೆಚ್ಚಿದ ಈ ಚಿತ್ರವನ್ನು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶಿಸಲು ಮುಂದಾಗಿದ್ದು, ಇಡೀ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ. ಅಕ್ಟೋಬರ್ 5ರ ಭಾನುವಾರದಂದು ಚಿತ್ರವನ್ನು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶಿಸುವುದಾಗಿ ವರದಿಯಾಗಿದೆ. ಕಾಂತಾರ ಯಶಸ್ಸಿನ ಮಧ್ಯೆ ರಾಷ್ಟ್ರಪತಿ ಭವನದಲ್ಲಿ ಚಿತ್ರದ ವಿಶೇಷ ಪ್ರದರ್ಶನ ನಡೆಯುತ್ತಿರುವುದು ರಿಷಬ್ ಸಿನಿಮಾಗೆ ಸಿಕ್ಕಿರುವ ಮತ್ತೊಂದು ಗೌರವ ಎಂದು ಹೇಳಲಾಗುತ್ತಿದೆ.

ಪಂಜುರ್ಲಿ ಅವತಾರದಲ್ಲಿ ಪ್ರತ್ಯಕ್ಷ
ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ದಿಂಡಿಗಲ್ನಲ್ಲಿ ನಡೆದ ಕಾಂತಾರ ಚಿತ್ರ ಪ್ರದರ್ಶನದ ಸಮಯದಲ್ಲಿ ಅಭಿಮಾನಿಯೊಬ್ಬರು ಪಂಜುರ್ಲಿ ದೇವರ ಮಾದರಿಯ ವೇಷಭೂಷಣದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆಧ್ಯಾತ್ಮಿಕವಾಗಿ ಪ್ರತಿಧ್ವನಿಸುವ ಚಿತ್ರವನ್ನು ನಿರ್ಮಿಸಿದ್ದಕ್ಕಾಗಿ ಸಿನಿಪ್ರಿಯರೆಲ್ಲರೂ ರಿಷಬ್ ಶೆಟ್ಟಿಗೆ ಕೃತಜ್ಞತೆ ಸಲ್ಲಿಸಲು ಪ್ರಾರಂಭಿಸಿದ್ದಾರೆ. ರಿಷಬ್ ಶೆಟ್ಟಿಯ ಈ ಪ್ಯಾನ್-ಇಂಡಿಯಾ ಸಿನಿಮಾ ಮೂರು ದಿನಗಳಲ್ಲಿ 150 ಕೋಟಿ ಗಡಿ ದಾಟಿದೆ. ಚಿತ್ರದ ತ್ವರಿತ ಯಶಸ್ಸಿನ ಜೊತೆಗೆ ಭಕ್ತಿ ಸಂಪ್ರದಾಯಗಳಿಗೆ ಜನ ಮಾರು ಹೋಗಿದ್ದಾರೆ.
ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಕೂಡ ತಮ್ಮ ಕುಟುಂಬದೊಂದಿಗೆ ಕಾಂತಾರ ಸಿನಿಮಾ ನೋಡಿ ರಿಷಬ್ ಶೆಟ್ಟಿಗೆ ಅಭಿನಂದಿಸಿದ್ದಾರೆ. ಪ್ರೀತಿಯ ರಿಷಬ್ ಶೆಟ್ಟಿ ಅವರೇ, ನನ್ನ ತಾಯಿ, ಸಹೋದರ, ಹರ್ಮನ್ ಮತ್ತು ಫಾಲ್ಗುಣಿ ಅವರೊಂದಿಗೆ ಕಾಂತಾರ ವೀಕ್ಷಿಸಿದೆ. ನಾನಂತೂ ಮೂಕವಿಸ್ಮಿತನಾದೆ. ನಿಮ್ಮ ಮತ್ತು ನಿಮ್ಮ ಇಡೀ ತಂಡದ ಮಾಂತ್ರಿಕ ಪ್ರತಿಭೆಯನ್ನು ವಿವರಿಸಲು ನನಗೆ ಹೆಚ್ಚಿನ ಪದಗಳು ಬೇಕು. ಭಗವಾನ್ ರಾಮನು ನಿಮ್ಮನ್ನು ಆಶೀರ್ವದಿಸಲಿ. ನಿಮ್ಮೆಲ್ಲರಿಗೂ ಜೈ ಹೋ! ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಕಾಂತಾರ: ಚಾಪ್ಟರ್ 1 ಭಾರತದಲ್ಲಿ ತನ್ನ ಮೊದಲ ವಾರಾಂತ್ಯದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ದಕ್ಷಿಣ ಚಿತ್ರಗಳಲ್ಲಿ ಒಂದಾಗಿದೆ. ರಜನಿಕಾಂತ್, ದಳಪತಿ ವಿಜಯ್ ಮತ್ತು ಪ್ರಭಾಸ್ ನಟಿಸಿದ ಚಲನಚಿತ್ರಗಳನ್ನು ರಿಷಬ್ ಮೀರಿಸಿದೆ. ಕಾಂತಾರ ತನ್ನ ಮೊದಲ ವಾರಾಂತ್ಯದಲ್ಲಿ ವಿಶ್ವದಾದ್ಯಂತ ಮೂರನೇ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡ ಚಿತ್ರವಾಗಿದ್ದು, ಯಶ್ ಅಭಿನಯದ ಕೆಜಿಎಫ್: ಅಧ್ಯಾಯ 1 ಅನ್ನು ಹಿಂದಿಕ್ಕಿದೆ. ಇದು ಈಗ ಕಾಂತಾರ ಮತ್ತು ಕೆಜಿಎಫ್: ಅಧ್ಯಾಯ 2 ನಂತರ 3ನೇ ಸ್ಥಾನವನ್ನು ಪಡೆದುಕೊಂಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications