Prem: ಹುಟ್ಟುಹಬ್ಬದಂದೇ ನಟ ಪ್ರೇಮ್ಗೆ ಶ್ರುತಿ ನಾಯ್ಡು ಲೀಗಲ್ ನೋಟಿಸ್, ಕಾರಣವೇನು?
ನೆನಪಿರಲಿ ಸಿನಿಮಾ ಖ್ಯಾತಿಯ ಸ್ಯಾಂಡಲ್ವುಡ್ ನಟ ಪ್ರೇಮ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿತ್ರರಂಗದ ಅನೇಕರು ಪ್ರೇಮ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಅವರ ಮುಂದಿನ ಸಿನಿಮಾಗಳು ಕೂಡ ಘೋಷಣೆಯಾಗಿ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ. ಇದೇ ಸಂಭ್ರಮದಲ್ಲಿದ್ದ ಪ್ರೇಮ್ ಅವರಿಗೆ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಆ ಒಂದು ಎಡವಟ್ಟಿನಿಂದಾಗಿ ನಟ ಪ್ರೇಮ್ ಅವರಿಗೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆಯೂ ಇದೆ. ಇಷ್ಟಕ್ಕೂ ಪ್ರೇಮ್ ಅವರ ಬರ್ತ್ಡೇ ದಿನವೇ ನಡೆದಿರುವ ಕಹಿ ಘಟನೆ ಏನು ಎಂಬ ಎಕ್ಸ್ಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ..
ನಟ ಪ್ರೇಮ್ ಅವರು "ಸ್ಪಾರ್ಕ್" ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ಅಂಗವಾಗಿ ಈ ಸಿನಿಮಾದಲ್ಲಿ ಪ್ರೇಮ್ ಅವರ ಪೋಸ್ಟರ್ವೊಂದನ್ನು ಚಿತ್ರತಂಡ ರಿಲೀಸ್ ಮಾಡಿದೆ. ಆದರೆ ಇದೇ ಪೋಸ್ಟರ್ನಿಂದಾಗಿ ಪ್ರೇಮ್ಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಪೋಸ್ಟರ್ನಲ್ಲಿ ಪ್ರೇಮ್ ಅವರು ಸಖತ್ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಹಾಕಿಕೊಂಡಲ್ಲಿ ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಪೋಸ್ ಅವರ ಅಭಿಮಾನಿಗಳಂತೂ ಖುಷಿಯಾಗಿದ್ದಾರೆ. ಆದ್ರೆ ಇದೇ ಪೋಸ್ಟರ್ ನೋಡಿ ಖ್ಯಾತ ನಿರ್ಮಾಪಕಿ ಶ್ರುತಿ ನಾಯ್ಡು ಅವರು ಗರಂ ಆಗಿದ್ದಾರೆ.

ಇಷ್ಟಕ್ಕೂ ಶ್ರುತಿ ನಾಯ್ಡು ಅವರು ಕೋಪಗೊಳ್ಳುವ ವಿಚಾರ ಕೂಡ ಈ ಪೋಸ್ಟರ್ನಲ್ಲಿದೆ. ಶ್ರುತಿ ನಾಯ್ಡು ಅವರ ಪತಿ ರಮೇಶ್ ಇಂದಿರಾ ಅವರು ಕೂಡ ಸಿನಿಮಾಗಳಲ್ಲಿ ಮಿಂಚುತ್ತಿರುವುದು ಗೊತ್ತೇ ಇದೆ. ಪ್ರೇಮ್ ಅವರ ಈ ಸಿನಿಮಾ ಪೋಸ್ಟರ್ನಲ್ಲೂ ರಮೇಶ್ ಇಂದಿರಾ ಅವರ ಫೋಟೋ ಬಳಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ರಮೇಶ್ ಇಂದಿರಾ ಇರುವ ಪೇಪರ್ಗೆ ಬೆಂಕಿ ಹಚ್ಚಲಾಗಿದ್ದು, ಅದರಿಂದ ಪ್ರೇಮ್ ಅವರು ಸಿಗರೇಟ್ ಹೊತ್ತಿಸಿಕೊಂಡಿರುವಂತೆ ಪೋಸ್ ಕೊಟ್ಟಿದ್ದಾರೆ. ಇದನ್ನು ಕಂಡು ಇಂದಿರಾ ರಮೇಶ್ ಪತ್ನಿ ಶ್ರುತಿ ಅವರು ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಎಲ್ಲರಿಗೂ ನಮಸ್ಕಾರ, ಈ ಚಿತ್ರ ತಂಡದವರು ತುಂಬಾ ಅನೈತಿಕವಾಗಿ ನಡೆದುಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ನಲ್ಲಿ ಪತ್ರಿಕೆಯ ಕಟಿಂಗ್ನಲ್ಲಿರುವ ನಟನ ಅನುಮತಿ ಪಡೆಯದೇ ಇರುವುದು, ಸುದ್ದಿ ಪತ್ರಿಕೆಗಳು ಮತ್ತು ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಪ್ರಕಟವಾಗುತ್ತಿರುವ ಈ ಪೋಸ್ಟರ್ ಬಗ್ಗೆ ಯಾರೇ ಆದರೂ ಕಾಳಜಿ ವಹಿಸಿಲ್ಲ ಎಂದು ಶ್ರುತಿ ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಪೋಸ್ಟರ್ನಲ್ಲಿ ಬಳಸಲಾದ ಈ ಚಿತ್ರವು ಪತಿ ರಮೇಶ್ ಇಂದಿರಾ ಅವರು ರಾಜಕಾರಣಿಯ ಪಾತ್ರವನ್ನು ನಿರ್ವಹಿಸಿದ ಭೀಮಾ ಚಿತ್ರದಿಂದ ಬಂದಿದೆ. ಈ ನಿರ್ದಿಷ್ಟ ಫೋಟೋವನ್ನು ಭೀಮಾ ಚಿತ್ರಕ್ಕಾಗಿ ತೆಗೆದುಕೊಳ್ಳಲಾಗಿದೆ. ರಮೇಶ್ ಇಂದಿರಾ ಪರವಾಗಿ ಈ ಚಿತ್ರ ತಂಡ ಮತ್ತು ನಟ ಪ್ರೇಮ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗುತ್ತಿದೆ ಎಂದು ಶ್ರುತಿ ಅವರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ವಿವಾದ ಸ್ಯಾಂಡಲ್ವುಡ್ನಲ್ಲಿ ಸಖತ್ ಸದ್ದು ಮಾಡುತ್ತಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications