Pushpa 2: ಬಿಡುಗಡೆಗೂ ಮುನ್ನ ದಾಖಲೆ ಸೃಷ್ಟಿಸಿದ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2
ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಅಲ್ಲು ಅರ್ಜುನ್ ಸದ್ಯಕ್ಕೆ ಸಖತ್ ಸುದ್ದಿಯಲ್ಲಿದ್ದಾರೆ. ಅವರ ಮುಂಬರುವ ಚಿತ್ರ 'ಪುಷ್ಪ 2' ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇದು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದೆ. ಅವರ ಈ ಚಿತ್ರ 15 ಆಗಸ್ಟ್ 2024 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನ ಟೀಸರ್ ಮೂಲಕ ಸಿನಿಮಾ ಭಾರೀ ಕುತೂಹಲ ಮೂಡಿಸಿದೆ.
ಹೌದು... ಅಲ್ಲು ಅರ್ಜುನ್ ಸಿನಿಮಾ ಅಂದ್ರನೇ ಹಾಗೆ. ಕಥೆಯಿಂದ ಹಿಡಿದು ಸಿನಿಮಾ ರಿಲೀಸ್ ಆಗೋವರೆಗೂ ಅಭಿಮಾನಿಗಳ ಕುತೂಹಲವನ್ನು ಹಿಡಿದಿಟ್ಟುಕೊಂಡಿರುತ್ತೆ. ಸದ್ಯ ಪುಷ್ಪ 2 ಆಡಿಯೋ ಹಕ್ಕನ್ನು ಪ್ರತಿಷ್ಠಿತ ಟಿ-ಸೀರೀಸ್ 60 ಕೋಟಿ ರೂಪಾಯಿಗೆ ಖರೀದಿಸಿದೆ ಎಂದು ವರದಿಯಾಗಿದೆ. ಇದಲ್ಲದೆ ಚಿತ್ರದ ಒಟಿಟಿ ಹಕ್ಕು ನೆಟ್ಫ್ಲಿಕ್ಸ್ಗೆ 100 ಕೋಟಿ ರೂಪಾಯಿಗೆ ಮಾರಟವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ಪ್ರಕಟಿಸಬೇಕಿದೆ.

ಇನ್ನೂ ಚಿತ್ರದಲ್ಲಿ ಅಲ್ಲು ಅರ್ಜುನ್ ಗಂಗಮ್ಮ ತಲ್ಲಿ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಈ ಒಂದು ಸೀನ್ಗಾಗಿ ನಿರ್ಮಾಪಕರು 60 ಕೋಟಿ ವ್ಯಯಿಸಿದ್ದಾರೆ ಎಂದು ತಿಳಿದು ಬಂದಿದೆ. ಆರು ನಿಮಿಷಗಳ ಈ ಸೀನ್ ಅನ್ನು ಸುಮಾರು ಒಂದು ತಿಂಗಳು ಚಿತ್ರೀಕರಿಸಲಾಗಿದೆ. ಇದಕ್ಕಾಗಿ ವಿಶೇಷ ಸೆಟ್ ನಿರ್ಮಿಸಲಾಗಿತ್ತು ಎಂದು ವರದಿಯಾಗಿದೆ. ಹೀಗಾಗಿ ಈ ಸಿನಿಮಾ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.
ಅಲ್ಲು ಅರ್ಜುನ್ ಹುಟ್ಟುಹಬ್ಬ
ತೆಲುಗು ಅಲ್ಲದೆ, 'ಪುಷ್ಪ ದಿ ರೈಸ್' ಚಿತ್ರದ ಹಾಡುಗಳು ಹಿಂದಿ ಮತ್ತು ತಮಿಳಿನಲ್ಲೂ ಹಿಟ್ ಆಗಿದ್ದವು. ಈಗ 'ಪುಷ್ಪ-ದಿ ರೂಲ್' ಸಂಗೀತದ ಬಗ್ಗೆ ಜನರಲ್ಲಿ ಸಾಕಷ್ಟು ಕುತೂಹಲ ಕಂಡು ಬರುತ್ತಿದೆ. 'ಪುಷ್ಪ 2' ನ ಟೀಸರ್ ಅನ್ನು ಸೂಪರ್ಸ್ಟಾರ್ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಅಂದರೆ 8 ಏಪ್ರಿಲ್ 2024 ರಂದು ಬಿಡುಗಡೆ ಮಾಡಲಾಗಿದೆ.

ಅಲ್ಲು ಅರ್ಜುನ್ ಸೀರೆ ಮತ್ತು ಘುಂಗ್ರು
ಚಿತ್ರದ ಟೀಸರ್ನಲ್ಲಿ, ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅಲಿಯಾಸ್ ಡಿಎಸ್ಪಿ ಅವರ ಬೀಟ್ಗಳಿಗೆ ನೃತ್ಯ ಮಾಡುವಾಗ ಅಲ್ಲು ಅರ್ಜುನ್ ಸೀರೆ ಮತ್ತು ಘುಂಗ್ರು ಧರಿಸಿರುವ ವಿಭಿನ್ನ ನೋಟವನ್ನು ಜನರು ನೋಡಿದ್ದಾರೆ. ಟೀಸರ್ನಲ್ಲಿರುವ ಸಂಗೀತ ಸಂಯೋಜಕ ಡಿಎಸ್ಪಿ ಅವರ ಟ್ಯೂನ್ ಅನ್ನು ಜನರು ಇಷ್ಟಪಡುತ್ತಿದ್ದಾರೆ.
'ಪುಷ್ಪ 2' ಚಿತ್ರದ ಪವರ್ಫುಲ್ ಟೀಸರ್
'ಪುಷ್ಪ 2' ಚಿತ್ರದ ಈ ಪವರ್ ಫುಲ್ ಟೀಸರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾದ ತಕ್ಷಣ ಕೆಲವೇ ಗಂಟೆಗಳಲ್ಲಿ ಅತಿ ವೇಗದ ಲೈಕ್ ಪಡೆದ ಚಿತ್ರದ ಟೀಸರ್ ಎಂಬ ದಾಖಲೆ ಸೃಷ್ಟಿಸಿದೆ. ಹಿಂದಿನ ಚಿತ್ರದಂತೆ ಈ ಬಾರಿಯೂ ಅಲ್ಲು ಅರ್ಜುನ್ ಜೊತೆ ದಕ್ಷಿಣದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಮಲಯಾಳಂ ಚಿತ್ರರಂಗದ ಅದ್ಭುತ ನಟ ಫಹದ್ ಫಾಸಿಲ್ ಕೂಡ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications