Rachita Ram: ನನ್ನ ಆಸೆ ಕೊನೆಗೂ ಈಡೇರಿತು: ನವರಾತ್ರಿಯಂದೇ ಸಿಹಿಸುದ್ದಿ ಕೊಟ್ಟ ರಚಿತಾ ರಾಮ್
ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಇತ್ತೀಚೆಗೆ "ಕೂಲಿ" ಸಿನಿಮಾದಲ್ಲಿ ನಟಿಸಿದ ಮೇಲೆ ಸಿಕ್ಕಾಪಟ್ಟೆ ಹೈಪ್ನಲ್ಲಿದ್ದಾರೆ. ಈ ಸಿನಿಮಾದಲ್ಲಿ ಕಲ್ಯಾಣಿ ಪಾತ್ರದಲ್ಲಿ ರಚಿತಾ ನಟಿಸಿದ್ದರು. ನೆಗೆಟಿವ್ ಶೇಡ್ನಲ್ಲಿ ರಚಿತಾರನ್ನ ಕಂಡು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದರು. ಸದ್ಯ ಡಿಂಪಲ್ ಕ್ವೀನ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಇದರ ಜೊತೆಗೆ ಸಂಭ್ರಮದಿಂದ ನವರಾತ್ರಿ ಆಚರಣೆಯಲ್ಲೂ ಅವರು ಬ್ಯುಸಿಯಾಗಿದ್ದಾರೆ. ಈ ವೇಳೆ ಸಿಹಿಸುದ್ದಿಯೊಂದನ್ನು ನಟಿ ಹೇಳಿಕೊಂಡಿದ್ದು, ನನ್ನ ಬಹಳ ದಿನಗಳ ಆಸೆ ಈಡೇರಿದೆ ಎಂದು ಖುಷಿಯ ವಿಚಾರ ಹಂಚಿಕೊಂಡಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸ್ಪೆಷಲ್ ಫೋಟೋ ಹಂಚಿಕೊಂಡಿರುವ ರಚಿತಾ ರಾಮ್ ಎಲ್ಲರಿಗೂ ನವರಾತ್ರಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ರಚಿತಾ ರಾಮ್ ಅವರಿಗೆ ಬಹಳ ದಿನಗಳಿಂದಲೂ ಒಂದು ಆಸೆ ಇತ್ತಂತೆ. ಅದಕ್ಕೆ ನವರಾತ್ರಿಯಂದ ಕಾಲ ಕೂಡಿ ಬಂದಿದೆ. ಈ ಸಂತೋಷದ ವಿಚಾರ ಏನೆಂದು ನಟಿ ಕುತೂಹಲಕಾರಿಯಾಗಿ ಬಹಿರಂಗಪಡಿಸಿದ್ದಾರೆ. ಅದೇನು ಗೊತ್ತಾ?

ಏನದು ರಚಿತಾ ರಾಮ್ ಆಸೆ?
ಸೋಷಿಯಲ್ ಮೀಡಿಯಾದಲ್ಲಿ ಫೋಟೋದೊಂದಿಗೆ ಬರೆದುಕೊಂಡಿರುವ ರಚಿತಾ ರಾಮ್, "ನನಗೆ ಮೂಗು ಚುಚ್ಚಿಸಿಕೊಳ್ಳಬೇಕು ಎನ್ನುವ ಆಸೆ ಬಹಳ ದಿನಗಳಿಂದ ಇತ್ತು. ಈ ವಿಶೇಷ ದಿನದಂದು ಅದು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ" ಎಂದು ರಚಿತಾ ರಾಮ್ ತಿಳಿಸಿದ್ದಾರೆ. ಮೂಗುತಿಯಲ್ಲಿ ರಚಿತಾ ಸಿಕ್ಕಾಪಟ್ಟೆ ಕ್ಯೂಟ್ ಆಗಿ ಕಾಣುತ್ತಿದ್ದಾರೆ.
ಮದುವೆ ಸುಳಿವು ಕೊಟ್ರಾ ಡಿಂಪಲ್?
ಮೂಗುತಿಯಲ್ಲಿ ರಚಿತಾ ರಾಮ್ ಅವರ ಲುಕ್ ನೋಡಿ ಅವರ ಫ್ಯಾನ್ಸ್ ಫಿದಾ ಆಗಿದ್ದಾರೆ. ನಿಮಗೆ ಡಿಂಪಲ್ ಹಾಗೂ ಮೂಗುತಿ ಡಬಲ್ ಧಮಾಕಾ ಎನ್ನುತ್ತಿದ್ದಾರೆ. ಕೆಲವರು ಮದುವೆಗೆ ರೇಡಿಯಾಗುತ್ತಿದ್ದೀರ ಅಂತ ಗೊತ್ತಾಯಿತು. ಆದಷ್ಟು ಬೇಗ ಶುಭ ಸುದ್ದಿ ಕೊಡುತ್ತೀರಾ ಅಂತ ಗೊತ್ತು ಎಂದು ಮದುವೆ ವಿಚಾರ ಪ್ರಸ್ತಾಪಿಸಿ ಕಾಮೆಂಟ್ ಮಾಡಿದ್ದಾರೆ.
ರಚಿತಾ ರಾಮ್ ಅವರ ಮೂಗುತಿ ಫೋಟೋ ವೈರಲ್ ಆಗಿದ್ದು, ಕೆಲವರು ಮದುವೆಯಾಗುವ ಕಾರಣಕ್ಕೆ ರಚಿತಾ ರಾಮ್ ಅವರು ಮೂಗುತಿ ಧರಿಸಿದ್ದಾರೆ ಎಂದೆಲ್ಲ ಮಾತುಗಳನ್ನಾಡುತ್ತಿದ್ದಾರೆ. ಒಳ್ಳೆಯ ಹುಡುಗ ಸಿಕ್ಕರೆ ಖಂಡಿತವಾಗಿ ಮದುವೆ ಆಗ್ತೀನಿ ಎಂದು ರಚಿತಾ ಹಲವು ಬಾರಿ ಹೇಳಿದ್ದರು. ಹೀಗಾಗಿ ಸದ್ಯದಲ್ಲೇ ರಚಿತಾ ರಾಮ್ ಅವರು ಮದುವೆ ಬಗ್ಗೆ ಸಿಹಿಸುದ್ದಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಚಿತಾ ರಾಮ್ ಅವರು ಮೂಗುತಿ ಧರಿಸುವ ಮೂಲಕ ಸಂಪ್ರದಾಯ ಪಾಲಿಸಿದ್ದಾರೆ. ಸಾಮಾನ್ಯವಾಗಿ ಮದುವೆ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಮೂಗು ಚುಚ್ಚಿಸುವ ವಾಡಿಕೆಯೂ ಇದೆ. ಹೀಗಾಗಿ ರಚಿತಾ ಅವರು ಏನೋ ದೊಡ್ಡ ಸುದ್ದಿ ಕೊಡಲು ತಯಾರಿ ನಡೆಸಿದ್ದಾರೆ. ಹೀಗಾಗಿ ಫೋಟೋ ಹಂಚಿಕೊಂಡಿದ್ದಾರೆ ಎಂದು ಫೋಟೋ ಹಂಚಿಕೊಂಡಿದ್ದಾರೆ. ಡಿಂಪಲ್ ಹುಡುಗ ಯಾರು ಎಂದು ನೋಡಲು ತುಂಬಾ ಕುತೂಹಲದಿಂದ ಕಾದಿದ್ದೇವೆ ಎನ್ನುತ್ತಿದ್ದಾರೆ ಅವರ ಅಭಿಮಾನಿಗಳು.
-
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
ಸೋಷಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ತೆರೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶ: 473 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications