ನಟಿ ಸಂಜನಾ ಗಲ್ರಾನಿಗೆ ವಂಚನೆ ಕೇಸ್: 6 ತಿಂಗಳು ಜೈಲು ಶಿಕ್ಷೆಗೆ ಕೋರ್ಟ್ ಆದೇಶ
ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. ವಂಚನೆ ಕೇಸ್ ಸಂಬಂಧ ರಾಹುಲ್ ತೋನ್ಸೆ ಎಂಬುವವರನ್ನು ಅಪರಾಧಿ ಎಂದು ಪರಿಗಣಿಸಿರುವ ಕೋರ್ಟ್, 61.50 ಲಕ್ಷ ರೂಪಾಯಿ ದಂಡದ ಜೊತೆಗೆ 6 ತಿಂಗಳ ಕಾಲ ಜೈಲು ಶಿಕ್ಷೆಯನ್ನೂ ವಿಧಿಸಿದೆ. ಬೆಂಗಳೂರಿನ ಬನಶಂಕರಿ 3ನೇ ಹಂತದ ನಿವಾಸಿಯಾದ ರಾಹುಲ್ ತೋನ್ಸೆ ವಿರುದ್ಧ ನಟಿ ಸಂಜನಾ ಅವರು ವಂಚನೆ ಆರೋಪ ಮಾಡಿದ್ದರು. ಈ ಸಂಬಂಧ ಪ್ರಕರಣದ ಆರೋಪಿ ವಿರುದ್ಧ ತೀರ್ಪು ಪ್ರಕಟವಾಗಿದೆ.
ರಾಹುಲ್ ತೋನ್ಸೆ 2018ರಲ್ಲಿ ನಟಿ ಸಂಜನಾ ಗಲ್ರಾನಿ ಅವರಿಂದ ಸುಮಾರು 45 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು. ಸಂಜನಾಗೆ ಸ್ನೇಹಿತನೂ ಆಗಿದ್ದ ರಾಹುಲ್, ಗೋವಾ ಹಾಗೂ ಕೊಲಂಬೋದಲ್ಲಿ ಕ್ಯಾಸಿನೋಗಳ ಮ್ಯಾನೇಜರ್ ಆಗಿದ್ದೇನೆ. ಹಾಗಾಗಿ ನಾನು ಹೇಳಿದ ಕಡೆ ಹಣ ಇನ್ವೆಸ್ಟ್ ಮಾಡಿದರೆ ಅಧಿಕ ಲಾಭ ಸಿಗಲಿದೆ ಎಂದು ಸಂಜನಾಗೆ ತಿಳಿಸಿದ್ದರು. ಇದನ್ನು ನಂಬಿದ್ದ ಸಂಜನಾ ಅವರು 45 ಲಕ್ಷ ರೂಪಾಯಿಯನ್ನ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಿದ್ದರು.

ಆದರೆ ಹಲವು ದಿನಗಳಾದರೂ ಯಾವುದೇ ಆಸ್ತಿ ನೋಂದಣಿ ಮಾಡಿಸಿಕೊಡಲಿಲ್ಲ. ಬಳಿಕ ಹಣ ವಾಪಸ್ ಕೇಳಿದಾಗ ರಾಹುಲ್ ಕೊಡಲಿಲ್ಲ ಎಂದು ಸಂಜನಾ ಆರೋಪಿಸಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ರಾಹುಲ್ ಅವರನ್ನ ಬಂಧಿಸಿದ್ದರು.
ಇದೀಗ ದಂಡದ ಮೊತ್ತದಲ್ಲಿ ₹10 ಸಾವಿರ ರೂಪಾಯಿ ಕೋರ್ಟ್ ಶುಲ್ಕ ಕಡಿತಗೊಳಿಸಿ ಉಳಿದ 61.40 ಲಕ್ಷ ರೂಪಾಯಿಯನ್ನ ನಟಿ ಸಂಜನಾ ಅವರಿಗೆ ನೀಡಬೇಕು ಎಂದು ಕೋರ್ಟ್ ಹೇಳಿದೆ. ನಿಗದಿತ ಸಮಯದಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಿದರೆ, ಕೋರ್ಟ್ ನೀಡಿರುವ 6 ತಿಂಗಳ ಶಿಕ್ಷೆಯನ್ನು ಮಾಫಿ ಮಾಡಲಾಗುವುದು ಮಾಡಲಾಗುತ್ತದೆ. ಇಲ್ಲದಿದ್ರೆ 6 ತಿಂಗಳ ಕಾಲ ಶಿಕ್ಷೆ ಹಾಗೂ ದಂಡವನ್ನು ಪಾವತಿ ಮಾಡಬೇಕೆಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ನಟಿ ಸಂಜನಾ ಗಲ್ರಾನಿ ಅವರು ಬೆಂಗಳೂರಿನ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ರಾಹುಲ್ ಹಾಗೂ ಆತನ ಕುಟುಂಬದ ವಿರುದ್ಧ ಕೇಸ್ ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಕೋರ್ಟ್ ವಿಚಾರಣೆಯಲ್ಲಿ ರಾಹುಲ್ ತೋನ್ಸೆ ಅಪರಾಧಿ ಎಂದು ಸಾಬೀತಾಗಿ ಶಿಕ್ಷೆ ಕೂಡ ವಿಧಿಸಲಾಗಿದೆ.
ಇನ್ನು ರಾಹುಲ್ ದೊಡ್ಡ ಉದ್ಯಮಿ ಎಂದು ತಿಳಿದುಬಂದಿದ್ದು, ಪಕ್ಕದ ಗೋವಾ ಹಾಗೂ ಕೊಲಂಬೋಗಳಲ್ಲಿ ಕ್ಯಾಸಿನೊಗಳನ್ನ ನಡೆಸುತ್ತಿದ್ದ. ಈ ಕೇಸ್ನಲ್ಲಿ ರಾಹುಲ್ ಅವರ ಪೋಷಕರು ಕೂಡ ಶಾಮೀಲಾಗಿದ್ದರು ಎಂದು ಆರೋಪಿಸಲಾಗಿದೆ. ಹಾಗಾಗಿ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಮತ್ತೊಬ್ಬ ಉದ್ಯಮಿಗೆ ಬರೋಬ್ಬರಿ 25 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವೂ ರಾಹುಲ್ ಮೇಲಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications