Rajinikanth: 33 ವರ್ಷಗಳ ಬಳಿಕ ಜೊತೆಯಾದ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್
ಜೈಲರ್ ಸಿನಿಮಾದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಈಗ ತಮ್ಮ 170ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ಅಮಿತಾಬ್ ಬಚ್ಚನ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಬುಧವಾರ ಸೆಟ್ನಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿರುವ ನಟ ರಜನಿಕಾಂತ್, ದಿಗ್ಗಜ ನಟನ ಜೊತೆ ಕೆಲಸ ಮಾಡಲು ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, "33 ವರ್ಷಗಳ ನಂತರ, ನಾನು ನನ್ನ ಗುರು, ಅಮಿತಾಬ್ ಬಚ್ಚನ್ ಅವರೊಂದಿಗೆ ಮುಂಬರುವ ಲೈಕಾ ನಿರ್ಮಾಣದ, ಟಿ.ಜೆ ಜ್ಞಾನವೇಲ್ ನಿರ್ದೇಶನದ "ತಲೈವರ್ 170" ಸಿನಿಮಾದಲ್ಲಿ, ಮತ್ತೆ ಕೆಲಸ ಮಾಡುತ್ತಿದ್ದೇನೆ. ನನ್ನ ಹೃದಯವು ಸಂತೋಷದಿಂದ ಮಿಡಿಯುತ್ತಿದೆ! " ಎಂದು ಹೇಳಿದ್ದಾರೆ.

ಬಿಳಿ ಶರ್ಟ್ ಮತ್ತು ವಿಗ್ನಲ್ಲಿ ರಜನಿಕಾಂತ್ ಗುಲಾಬಿ ಮತ್ತು ನೀಲಿ ಬಣ್ಣದ ಜಾಕೆಟ್ ಮತ್ತು ದೊಡ್ಡ ಕನ್ನಡಕವನ್ನು ಧರಿಸಿರುವ ಅಮಿತಾಬ್ ಬಚ್ಚನ್ ಪಕ್ಕದಲ್ಲಿ ನಗುತ್ತಿರುವುದನ್ನು ಫೋಟೋ ಫೋಟೊದಲ್ಲಿ ನೋಡಬಹುದಾಗಿದೆ.
ಅಭಿಮಾನಿಗಳ ಮೆಚ್ಚುಗೆ
ರಜನಿಕಾಂತ್ ಅವರ ಟ್ವೀಟ್ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ಅವರ ಸರಳತೆಯನ್ನು ಹಾಡಿ ಹೊಗಳಿದ್ದಾರೆ. "ಇವರು ರಜನಿಕಾಂತ್, ಹಿರಿಯರಿಗೆ ಅವರು ತೋರಿಸುವ ಗೌರವವನ್ನು ನೋಡಿ, ಕಳೆದ 5 ದಶಕಗಳಿಂದ ಅವರು ತಮಿಳು ಚಿತ್ರರಂಗವನ್ನು ಆಳಲು ಇದೇ ಕಾರಣ" ಎಂದು ಹೇಳಿದ್ದಾರೆ.
"ರಜನಿ ಸರ್ ಮಾತನಾಡುವಾಗ ಗೌರವ ಯಾವಾಗಲೂ ಹೆಚ್ಚಾಗುತ್ತದೆ, ಅವರು ಎಂತಹ ಅದ್ಭುತ ವ್ಯಕ್ತಿ!" ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.
After 33 years, I am working again with my mentor, the phenomenon, Shri Amitabh Bachchan in the upcoming Lyca’s "Thalaivar 170" directed by T.J Gnanavel. My heart is thumping with joy!@SrBachchan @LycaProductions @tjgnan#Thalaivar170 pic.twitter.com/RwzI7NXK4y
— Rajinikanth (@rajinikanth) October 25, 2023
1991ರಲ್ಲಿ ಒಟ್ಟಿಗೆ ಕೆಲಸ
ಅಮಿತಾಬ್ ಬಚ್ಚನ್ ಮತ್ತು ರಜನಿಕಾಂತ್ ಕೊನೆಯದಾಗಿ 1991 ರಲ್ಲಿ ಮುಕುಲ್ ಆನಂದ್ ನಿರ್ದೇಶನದ ಹಮ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಮಾರ್ಚ್ನಲ್ಲಿ ಘೋಷಣೆಯಾದ ಪ್ರಸ್ತುತ ಹೆಸರಿಡದ ಚಿತ್ರವನ್ನು ಜೈ ಭೀಮ್ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ.
ನಟರಾದ ಫಹಾದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ರಜನಿಕಾಂತ್ ಹೊಸ ಚಿತ್ರದಲ್ಲಿ ನಟಿಸುವುದು ಖಚಿತವಾಗಿದ್ದು, ಚಿತ್ರದ ಮೇಲೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಸುಭಾಸ್ಕರನ್ ನಿರ್ಮಿಸಲಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ತಾರಾಗಣದಲ್ಲಿ ರಿತಿಕಾ ಸಿಂಗ್, ಮಂಜು ವಾರಿಯರ್ ಮತ್ತು ದುಶಾರಾ ವಿಜಯನ್ ಕೂಡ ಇದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications