Rajinikanth: 33 ವರ್ಷಗಳ ಬಳಿಕ ಜೊತೆಯಾದ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್
ಜೈಲರ್ ಸಿನಿಮಾದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಈಗ ತಮ್ಮ 170ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ಅಮಿತಾಬ್ ಬಚ್ಚನ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಬುಧವಾರ ಸೆಟ್ನಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿರುವ ನಟ ರಜನಿಕಾಂತ್, ದಿಗ್ಗಜ ನಟನ ಜೊತೆ ಕೆಲಸ ಮಾಡಲು ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, "33 ವರ್ಷಗಳ ನಂತರ, ನಾನು ನನ್ನ ಗುರು, ಅಮಿತಾಬ್ ಬಚ್ಚನ್ ಅವರೊಂದಿಗೆ ಮುಂಬರುವ ಲೈಕಾ ನಿರ್ಮಾಣದ, ಟಿ.ಜೆ ಜ್ಞಾನವೇಲ್ ನಿರ್ದೇಶನದ "ತಲೈವರ್ 170" ಸಿನಿಮಾದಲ್ಲಿ, ಮತ್ತೆ ಕೆಲಸ ಮಾಡುತ್ತಿದ್ದೇನೆ. ನನ್ನ ಹೃದಯವು ಸಂತೋಷದಿಂದ ಮಿಡಿಯುತ್ತಿದೆ! " ಎಂದು ಹೇಳಿದ್ದಾರೆ.

ಬಿಳಿ ಶರ್ಟ್ ಮತ್ತು ವಿಗ್ನಲ್ಲಿ ರಜನಿಕಾಂತ್ ಗುಲಾಬಿ ಮತ್ತು ನೀಲಿ ಬಣ್ಣದ ಜಾಕೆಟ್ ಮತ್ತು ದೊಡ್ಡ ಕನ್ನಡಕವನ್ನು ಧರಿಸಿರುವ ಅಮಿತಾಬ್ ಬಚ್ಚನ್ ಪಕ್ಕದಲ್ಲಿ ನಗುತ್ತಿರುವುದನ್ನು ಫೋಟೋ ಫೋಟೊದಲ್ಲಿ ನೋಡಬಹುದಾಗಿದೆ.
ಅಭಿಮಾನಿಗಳ ಮೆಚ್ಚುಗೆ
ರಜನಿಕಾಂತ್ ಅವರ ಟ್ವೀಟ್ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ಅವರ ಸರಳತೆಯನ್ನು ಹಾಡಿ ಹೊಗಳಿದ್ದಾರೆ. "ಇವರು ರಜನಿಕಾಂತ್, ಹಿರಿಯರಿಗೆ ಅವರು ತೋರಿಸುವ ಗೌರವವನ್ನು ನೋಡಿ, ಕಳೆದ 5 ದಶಕಗಳಿಂದ ಅವರು ತಮಿಳು ಚಿತ್ರರಂಗವನ್ನು ಆಳಲು ಇದೇ ಕಾರಣ" ಎಂದು ಹೇಳಿದ್ದಾರೆ.
"ರಜನಿ ಸರ್ ಮಾತನಾಡುವಾಗ ಗೌರವ ಯಾವಾಗಲೂ ಹೆಚ್ಚಾಗುತ್ತದೆ, ಅವರು ಎಂತಹ ಅದ್ಭುತ ವ್ಯಕ್ತಿ!" ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.
After 33 years, I am working again with my mentor, the phenomenon, Shri Amitabh Bachchan in the upcoming Lyca’s "Thalaivar 170" directed by T.J Gnanavel. My heart is thumping with joy!@SrBachchan @LycaProductions @tjgnan#Thalaivar170 pic.twitter.com/RwzI7NXK4y
— Rajinikanth (@rajinikanth) October 25, 2023
1991ರಲ್ಲಿ ಒಟ್ಟಿಗೆ ಕೆಲಸ
ಅಮಿತಾಬ್ ಬಚ್ಚನ್ ಮತ್ತು ರಜನಿಕಾಂತ್ ಕೊನೆಯದಾಗಿ 1991 ರಲ್ಲಿ ಮುಕುಲ್ ಆನಂದ್ ನಿರ್ದೇಶನದ ಹಮ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಮಾರ್ಚ್ನಲ್ಲಿ ಘೋಷಣೆಯಾದ ಪ್ರಸ್ತುತ ಹೆಸರಿಡದ ಚಿತ್ರವನ್ನು ಜೈ ಭೀಮ್ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ.
ನಟರಾದ ಫಹಾದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ರಜನಿಕಾಂತ್ ಹೊಸ ಚಿತ್ರದಲ್ಲಿ ನಟಿಸುವುದು ಖಚಿತವಾಗಿದ್ದು, ಚಿತ್ರದ ಮೇಲೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಸುಭಾಸ್ಕರನ್ ನಿರ್ಮಿಸಲಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ತಾರಾಗಣದಲ್ಲಿ ರಿತಿಕಾ ಸಿಂಗ್, ಮಂಜು ವಾರಿಯರ್ ಮತ್ತು ದುಶಾರಾ ವಿಜಯನ್ ಕೂಡ ಇದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications